Subscribe to Updates

    Get the latest creative news from FooBar about art, design and business.

    What's Hot

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಕರುಂಬಿತ್ತಿಲ್ ಸಂಗೀತ ಶಿಬಿರದ ಸಮಾರೋಪ ಸಮಾರಂಭ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲ್ಲಡ್ಕದ ‘ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್’ ವಿದ್ಯಾರ್ಥಿಗಳಿಂದ ‘ಕಲಾ ಪರ್ವ 2023’
    Bharathanatya

    ಕಲ್ಲಡ್ಕದ ‘ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್’ ವಿದ್ಯಾರ್ಥಿಗಳಿಂದ ‘ಕಲಾ ಪರ್ವ 2023’

    February 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ನೃತ್ಯ ಗುರು ವಿದುಷಿ ವಿದ್ಯಾ ಮನೋಜ್ ಇವರ ನಿರ್ದೇಶನದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಕಲ್ಲಡ್ಕ ಭರತನಾಟ್ಯ ಸಂಸ್ಥೆಯ ಕಲ್ಲಡ್ಕ ಮತ್ತು ಬಿ.ಸಿ.ರೋಡ್ ಶಾಖೆಗಳ ವಿದ್ಯಾರ್ಥಿಗಳಿಂದ ‘ಕಲಾ ಪರ್ವ 2023’ವು ದಿನಾಂಕ 30-11-2023ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.

    ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆ್ಯಂಡ್ ಕಲ್ಚರ್, ಪುತ್ತೂರು ಇದರ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ. ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನೃತ್ಯ ಕಲಿಯುವಿಕೆಗೆ ಮಕ್ಕಳಲ್ಲಿ ಶ್ರದ್ಧೆ ಹಾಗೂ ಹೆತ್ತವರ ನಿರಂತರ ಪ್ರೋತ್ಸಾಹ ಎಷ್ಟು ಮುಖ್ಯ ಎಂಬುದನ್ನು ತಿಳಿಸಿ ಹೇಳಿದರು.

    ಮುಖ್ಯ ಅತಿಥಿಗಳಾಗಿ ಪತ್ರಕರ್ತರಾದ ಹರೀಶ್ ಮಾಂಬಾಡಿ ಇವರು ಪಾಲ್ಗೊಂಡು ಯಾವುದೇ ಕಲೆಯನ್ನಾದರೂ ಕಲಿಯಬೇಕಾದರೇ ಆಸಕ್ತಿ ಎಷ್ಟರ ಮಟ್ಟಿಗೆ ಪ್ರಮುಖವಾಗುತ್ತದೆ ಎಂದು ಹೇಳುತ್ತಾ ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳೂ ಮುಖ್ಯವೆಂದು ಹೇಳಿದರು. ಕಲಾ ಶಾಲೆಯ ಗುರುಗಳಾದ ವಿದ್ಯಾ ಮನೋಜ್ ಇವರು ಸ್ವಾಗತಿಸಿದರು. ನೃತ್ಯ ಶಾಲೆಯ ಸುಮಾರು 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೃತ್ಯ ಕಾರ್ಯಕ್ರಮವನ್ನು ನೀಡಿದರು. ಅತ್ಯುತ್ತಮ ಕಲಾಸಂಜೆಗೆ ಸಹೃದಯ ಪ್ರೇಕ್ಷಕವರ್ಗವು ಸಾಕ್ಷಿಯಾಯಿತು.

    ಭರತನಾಟ್ಯ ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗ ವಿದುಷಿ ಶ್ರೀಮತಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ಶ್ರೀದೇವಿ ಕಲ್ಲಡ್ಕ ಹಾಗೂ ಕೃತಿ ಆರ್., ಮೃದಂಗ ವಾದನದಲ್ಲಿ ಶ್ರೀ ಬಾಲಚಂದ್ರ ಭಾಗವತ್, ಪಿಟೀಲು ವಾದನದಲ್ಲಿ ಶ್ರೀ ಶ್ರೀಧರ ಆಚಾರ್ಯ ಇವರು ಸಹಕರಿಸಿದರು. ಆಶಾ ರೈ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಡೇಶಿವಾಲಯದಲ್ಲಿ ಮಕ್ಕಳ ಕಲಾ ಲೋಕದಿಂದ ‘ಸಾಂಸ್ಕೃತಿಕ ವೈಭವ – ಮಕ್ಕಳ ಧ್ವನಿ
    Next Article ಸಾಹಿತಿ ಎ.ಎನ್‌. ರಾಮಕೃಷ್ಣ ಮತ್ತು ಬಿ.ಜಿ. ರಘುನಾಥ್ ನಾಯಕ್‌ ಜ್ಞಾಪಕಾರ್ಥ ‘ದತ್ತಿನಿಧಿ ಕಾರ್ಯಕ್ರಮ’
    roovari

    Add Comment Cancel Reply


    Related Posts

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಲೋಕಾರ್ಪಣೆಗೊಂಡ “ಯಕ್ಷ ರಜತ” ಸ್ಮರಣ ಸಂಚಿಕೆ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.