Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಮತ್ತು ‘ಮೊಹಬ್ಬತ್ ಕಾ ದಾಗ…’ ಕಥಾ ಸಂಕಲನ ಲೋಕಾರ್ಪಣೆ  
    Awards

    ಮಂಗಳೂರಿನಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಮತ್ತು ‘ಮೊಹಬ್ಬತ್ ಕಾ ದಾಗ…’ ಕಥಾ ಸಂಕಲನ ಲೋಕಾರ್ಪಣೆ  

    September 5, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲ್ಲಚ್ಚು ಪ್ರಕಾಶನದ 14ನೇ ಆವೃತ್ತಿಯ 2023ನೇ ಸಾಲಿನ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ಮಹೇಶ ಆರ್.ನಾಯಕ್ ಅವರ ಕೃತಿ ‘ಮೊಹಬ್ಬತ್ ಕಾ ದಾಗ…’ ಕಥಾ ಸಂಕಲನದ ಬಿಡುಗಡೆ ಸಮಾರಂಭವು ದಿನಾಂಕ 02-09-2023ರಂದು ನಡೆಯಿತು.

    ಈ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ” ಸ್ವೀಕರಿಸಿದ ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ “ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕು” ಎಂಬ ಸಂದೇಶವನ್ನು ನೀಡಿ ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

    ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿ ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ಧರಾಗಿ ಮಾಡುವಂತೆ ಕರೆನೀಡಿದರು. ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ ಅಭಿನಂದನಾ ಮಾತುಗಳಾನ್ನಾಡಿದರು.

    ಈ ಸಂದರ್ಭದಲ್ಲಿ “ಮೊಹಬ್ಬತ್ ಕಾ ದಾಗ” ಕಥಾಸಂಕಲನ ಬಿಡುಗಡೆಗೊಂಡಿತು. ವಿಶ್ರಾಂತ ಪ್ರಾಂಶುಪಾಲ ಡಾ ಸತ್ಯನಾರಾಯಣ ಮಲ್ಲಿಪಟ್ಟಣ. ಡಾ. ವಿಜಯಲಕ್ಷ್ಮಿ ನೇರಳಕೋಡಿ, ಶ್ರೀನಿಧಿ ಆರ್.ಎಸ್, ಮೌಶೀರ್ ಅಹಮದ್ ಸಾಮಣಿಗೆ, ಡಾ.ಮೀನಾಕ್ಷಿ ರಾಮಚಂದ್ರ, ಪೊ.ಡಾ.ಝೀಟಾ ಲೋಬೊ, ಲೇಖಕ ಎನ್.ವಿ.ಪೌಲೋಸ್, ಮಾರ್ಷಲ್ ಡಿಸೋಜ, ಕಲಾವಿದರಾದ ವಿಜಯಕುಮಾರ್ ಕೊಡಿಯಲ್ ಬೈಲ್, ರಾಜೇಂದ್ರ ಕೇದಿಗೆ ಮೊದಲಾದವರು ಉಪಸ್ಥಿತರಿದ್ದರು. ಮಹೇಶ ಆರ್.ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವ ಚಿತ್ರಕಲಾವಿದೆ ಬೆಂಗಳೂರಿನ ಶಾರ್ವೀ ನಾಯಕ್ ಅವರನ್ನು ಅಭಿನಂದಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ವಿಶೇಷ ಸಂಚಿಕೆ ಬಿಡುಗಡೆ
    Next Article ಕ.ಲೇ.ವಾ. ಸಂಘದಿಂದ ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ | ಸೆಪ್ಟೆಂಬರ್ 9ರಂದು   
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications