Subscribe to Updates

    Get the latest creative news from FooBar about art, design and business.

    What's Hot

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣಾ’ ಕಾರ್ಯಕ್ರಮದಲ್ಲಿ ಶ್ರೀ ಪೆರುವಾಯಿ ನಾರಾಯಣ ಭಟ್‌ ಸನ್ಮಾನ
    Yakshagana

    ‘ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣಾ’ ಕಾರ್ಯಕ್ರಮದಲ್ಲಿ ಶ್ರೀ ಪೆರುವಾಯಿ ನಾರಾಯಣ ಭಟ್‌ ಸನ್ಮಾನ

    November 3, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಇರಾ : ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.), ಕುಂಡಾವು ಇರಾ, ಉಳ್ಳಾಲ ತಾಲೂಕು ಮತ್ತು ಸುವರ್ಣ ಮಹೋತ್ಸವ ಸಮಿತಿ, ಯುವಕ ಮಂಡಲ (ರಿ.) ಇರಾ ಉಳ್ಳಾಲ ತಾಲೂಕು, ದ.ಕ. – ಇವರ ಜಂಟಿ ಆಶ್ರಯದಲ್ಲಿ ‘ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣಾ’ ಕಾರ್ಯಕ್ರಮ ದಿನಾಂಕ 29-10-2023ನೇ ಆದಿತ್ಯವಾರ ಅಪರಾಹ್ನ ಗಂಟೆ 2.00ರಿಂದ ಯಕ್ಷ ಕೈಲಾಸ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರ, ಕುಂಡಾವು ಇಲ್ಲಿ ‌ನಡೆಯಿತು.

    ಸಂಸ್ಮರಣಾ ಕಾರ್ಯಕ್ರಮದಲ್ಲಿ ಖ್ಯಾತ ಹಿಮ್ಮೇಳ ಕಲಾವಿದರಾದ ಶ್ರೀ ಪೆರುವಾಯಿ ನಾರಾಯಣ ಭಟ್‌ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಇರಾ ಶ್ರೀ ‌ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರರೂ, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಕುಂಡಾವು ಇರಾ ಇದರ ಗೌರವ ಅಧ್ಯಕ್ಷರೂ ಆದ ಕಲ್ಲಾಡಿ ಶ್ರೀ ದೇವಿ ಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಸದಸ್ಯರೂ, ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ (ರಿ.) ಇರಾ ಇದರ ಪ್ರಧಾನ ಸಂಚಾಲಕರೂ ಆದ ಶ್ರೀ ಜಗದೀಶ್ ಶೆಟ್ಟಿ ಇರಾ ಗುತ್ತು, ಸುವರ್ಣ ಮಹೋತ್ಸವ ಸಮಿತಿ ಯುವಕ‌ ಮಂಡಲ (ರಿ.) ಇರಾ ಇದರ ಗೌರವಾಧ್ಯಕ್ಷರಾದ ಶ್ರೀ ಪಿ.ಎಂ. ಕೊಡಂಗೆ, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಇರಾ ಇದರ ಅಧ್ಯಕ್ಷರೂ, ಸುವರ್ಣ ಮಹೋತ್ಸವ ಸಮಿತಿ ಯುವಕ‌ ಮಂಡಲ (ರಿ.) ಇರಾ ಇದರ ಅಧ್ಯಕ್ಷರೂ ಆದ ಶ್ರೀ ಜಯರಾಮ್ ಪೂಜಾರಿ‌ ಸೂತ್ರಬೈಲು, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಇರಾ ಇದರ ಕಾರ್ಯದರ್ಶಿಗಳೂ, ಯುವಕ ಮಂಡಲ (ರಿ.) ಇದರ ಅಧ್ಯಕ್ಷರೂ ಆದ ಶ್ರೀ ಗಣೇಶ್ ಕೊಟ್ಟಾರಿ ಸಂಪಿಲ, ಸುವರ್ಣ ಮಹೋತ್ಸವ ಸಮಿತಿ ಯುವಕ‌ ಮಂಡಲ (ರಿ.) ಇರಾ ಇದರ ಕಾರ್ಯದರ್ಶಿಗಳಾದ ಶ್ರೀ ಸುರೇಶ್ ರೈ‌ ಪರ್ಲಡ್ಕ, ಸೇವಾ ‌ಸಮಿತಿ ಹಾಗೂ ಯುವಕ‌ ಮಂಡಲ (ರಿ.) ಇರಾ ಇದರ ಕಾರ್ಯದರ್ಶಿಗಳಾದ ಶ್ರೀ ಜಯರಾಜ್ ಶೆಟ್ಟಿ ಕುಂಡಾವು ವೇದಿಕೆಯಲ್ಲಿ ‌ಉಪಸ್ಥಿತರಿದ್ದರು. ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲದ ಸಾಂಸ್ಕೃತಿಕ ಕಾರ್ಯದರ್ಶಿಗಳೂ, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಇರಾ ಇದರ ಕೋಶಾಧಿಕಾರಿಗಳಾದ ಶ್ರೀ ‌ಪುಷ್ಪರಾಜ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿನ‌ ಸದಸ್ಯರೂ, ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲದ ಉಪಾಧ್ಯಕ್ಷರೂ ಆದ ಶ್ರೀ ಯತಿರಾಜ್ ಶೆಟ್ಟಿ ಸಂಪಿಲ‌ ಸನ್ಮಾನ ಪತ್ರ ವಾಚಿಸಿದರು. ಟ್ರಸ್ಟಿನ‌ ಸದಸ್ಯರೂ, ಯುವಕ‌ ಮಂಡಲದ ಹಿರಿಯ ಸದಸ್ಯರಾದ ಶ್ರೀ ಸುರೇಶ್ ಕೊಟ್ಟಾರಿ ಸಂಸ್ಮರಣಾ ಭಾಷಣ ಮಾಡಿದರು.

    ನಂತರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿಯವರಿಂದ ‘ಪಂಚವಟಿ’ ಹಾಗೂ ‘ಇಂದ್ರಜಿತು’‌ ಯಕ್ಷಗಾನ ಬಯಲಾಟ ನಡೆಯಿತು. ಅತಿಥಿ ಭಾಗವತರಾಗಿ ಶ್ರೀ ಬಲಿಪ ಶಿವಶಂಕರ ಭಟ್ ಹಾಗು ಮುಮ್ಮೇಳ ಕಲಾವಿದರಾಗಿ ಶ್ರೀ ತಾರನಾಥ ಬಲ್ಯಾಯ ಇವರು ಭಾಗವಹಿಸಿದ್ದರು. ರಾತ್ರಿ ಗಂಟೆ 7.30ಕ್ಕೆ ತುಳು ಸಾಮಾಜಿಕ ನಾಟಕ ಯುವಕ ಮಂಡಲ (ರಿ.) ಇರಾ ಇದರ ಹೆಮ್ಮೆಯ ಕಲಾವಿದರಿಂದ ಡಾ. ಸಂಜೀವ ದಂಡಕೇರಿ ವಿರಚಿತ ತುಳುನಾಡ ರತ್ನ ಶ್ರೀ ದಿನೇಶ್ ಅತ್ತಾವರ ಇದರ ದಕ್ಷ ನಿರ್ದೇಶನ ಮತ್ತು ನಟನೆಯ ‘ಬಯ್ಯ ಮಲ್ಲಿಗೆ’ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಇವರಿಗೆ ‘ಗೌರಮ್ಮ ದತ್ತಿನಿಧಿ ಪ್ರಶಸ್ತಿ’ ಪ್ರದಾನ
    Next Article ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಶಿಬಿರ ‘ಸಾಹಿತ್ಯ ಸಂಭ್ರಮ’
    roovari

    Add Comment Cancel Reply


    Related Posts

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.