Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕಲ್ಪನೆಯ ಹನಿಗಳು’ ಕವನ ಸಂಕಲನ ಲೋಕಾರ್ಪಣೆ 
    Literature

    ‘ಕಲ್ಪನೆಯ ಹನಿಗಳು’ ಕವನ ಸಂಕಲನ ಲೋಕಾರ್ಪಣೆ 

    July 9, 2024Updated:July 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕುಶಾಲನಗರ : ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಆಯೋಜಿಸಿದ ಗ್ರೀಷ್ಮಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ ‘ಕಲ್ಪನೆಯ ಹನಿಗಳು’ ಕವನ ಸಂಕಲನದ  ಲೋಕಾರ್ಪಣಾ ಸಮಾರಂಭವು ದಿನಾಂಕ 07-07-2024ರ ಭಾನುವಾರದಂದು ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ನಡೆಯಿತು.
    ಕವನ ಸಂಕಲನ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ “ಕವಿಗಳನ್ನು ಸಮಾಜ ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು. ಕವನಗಳ ರಚನೆ ಬಹಳ ಸುಲಭ ಎಂದು ಅಂದು ಕೊಳ್ಳುತ್ತೇವೆ. ಆದರೆ ಇದರಷ್ಟು ಆಪಾಯಕಾರಿ ಕೆಲಸ ಯಾವುದೂ ಇಲ್ಲ. ಕವನ ಬರೆಯುವಾಗ ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಕವನ ಬರೆಯುವವರಿಗೆ ಅದರ ಪರಿಣಾಮಗಳ ಅರಿವು ಇರಬೇಕು. ಬರೆಯುವವರು ಓದುವ ಹವ್ಯಾಸ ಹೊಂದಿರಬೇಕು. ಹೆಚ್ಚು ಹೆಚ್ಚು ಓದಿ ಕಡಿಮೆ ಬರೆಯಬೇಕು. ಬರೆಯುವುದನ್ನು ಪರಿಣಾಮಕಾರಿಯಾಗಿ ಬರೆಯಬೇಕು. ಶಬ್ದಗಳನ್ನು ಚೆಂದವಾಗಿ ಜೋಡಿಸುವುದು ಕೂಡ ಒಂದು ಕಲೆ. ಈ ಕಲೆ ಕವಿಗಳಿಗೆ ಇರಬೇಕು. ಕವನ ಬರೆದವರು ಅದನ್ನು ತಾವೇ ಒಮ್ಮೆ ಓದಬೇಕು. ಅದನ್ನು ಒಳ್ಳೆಯ ವಿಮರ್ಶಕರಿಗೆ ಕೊಟ್ಟು ಅವರು ನೀಡುವ ಸಲಹೆಗಳನ್ನು ಸಕರಾತ್ಮಕವಾಗಿ ಸ್ವೀಕರಿಸುವ ಗುಣ ಹೊಂದಿರಬೇಕು. ಯಾವುದೇ ವಿಷಯವನ್ನಾದರೂ ವಿಭಿನ್ನವಾಗಿ ಆಲೋಚಿಸಿ ಬರೆದಾಗ ಸುಂದರ ಕವನಗಳು ಸೃಷ್ಟಿಯಾಗುತ್ತದೆ.” ಎಂದು ಹೇಳಿದರು.
    ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷರಾದ  ಬಿ. ಎಸ್. ಲೋಕೇಶ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಳುವಂಡ ಕಾವೇರಿ ಉದಯ ಅವರ ಕಲ್ಪನೆಯ ಹನಿಗಳು ಕವನ ಸಂಕಲನವನ್ನು ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ಪರಿಚಯಿಸಿದರು. ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್, ನಿವೃತ್ತ ಉಪನ್ಯಾಕಿಯರಾದ ಪೂವಮ್ಮ, ತಿಲೋತ್ತಮೆ ನಂದಕುಮಾರ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೆ. ಎಸ್. ಕೃಷ್ಣಗೌಡ ಮತ್ತಿತರರು ಉಪಸ್ಥಿತರಿದ್ದರು. ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ಕುಡೇಕಲ್ ಸಂತೋಷ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಹದಿಮೂರು ಮಂದಿ ಕವಿಗಳು ತಮ್ಮ ಕವನಗಳನ್ನು ವಾಚಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಬಿತ್ತಿ’ ಗೋಡೆ ಬರಹ ವಾರ್ಷಿಕ ಸಂಪುಟ ಬಿಡುಗಡೆ ಮತ್ತು ಕವಿಗೋಷ್ಠಿ
    Next Article ಕೃಷ್ಣಪ್ಪ ಕರ್ಕೇರ ಸಂಸ್ಮರಣಾ ಕಾರ್ಯಕ್ರಮ 
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.