Subscribe to Updates

    Get the latest creative news from FooBar about art, design and business.

    What's Hot

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿ. ವಿ. ಯಲ್ಲಿ ಕನಕದಾಸರ ಕೀರ್ತನೆಗಳ ಸಮೂಹ ಗಾಯನ ಕಾರ್ಯಕ್ರಮ
    Music

    ಮಂಗಳೂರು ವಿ. ವಿ. ಯಲ್ಲಿ ಕನಕದಾಸರ ಕೀರ್ತನೆಗಳ ಸಮೂಹ ಗಾಯನ ಕಾರ್ಯಕ್ರಮ

    February 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಣಾಜೆ: ಮಂಗಳೂರು ವಿ. ವಿ. ಯ  ಕನಕದಾಸ ಸಂಶೋಧನಾ ಕೇಂದ್ರದ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ‘ಕನಕ ಕೀರ್ತನ ಗಂಗೋತ್ರಿ’ ಶೈಕ್ಷಣಿಕ ಸಂಸ್ಥೆ ಗಳ, ಸಾರ್ವಜನಿಕರ ಸಾಮುದಾಯಿಕ ಪಾಲ್ಗೊಳ್ಳುವಿಕೆಯ ಕನಕದಾಸರ ಕೀರ್ತನೆಗಳ ಸಮೂಹ ಗಾಯನ ಕಾರ್ಯಕ್ರಮವು ದಿನಾಂಕ 02-02-2024ರ ಶುಕ್ರವಾರದಂದು ಮಂಗಳೂರು ವಿ. ವಿ. ಯ ಮಂಗಳಾ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್‌ ಇದರ ಅಧ್ಯಕ್ಷರಾದ ಪ್ರೊ. ವಿ. ಅರವಿಂದ ಹೆಬ್ಬಾರ್ ಮಾತನಾಡಿ “ಕನಕದಾಸರು, ಪುರಂದರ ದಾಸರು, ವಾದಿರಾಜರು ಸಮಕಾಲೀನರು ಮತ್ತು ಭಕ್ತಿಪಂಥದ ವಕ್ತಾರರಾಗಿ ಗುರುತಿಸಿಕೊಂಡವರು. ಸಂಸ್ಕೃತ ಪಾಂಡಿತ್ಯವೇ ಅಧಿಕವಾಗಿದ್ದ ಕಾಲಘಟ್ಟದಲ್ಲಿ ವ್ಯಾಸಕೂಟದ ಬದಲಾಗಿ ದಾಸಕೂಟ ರಚನೆಯಾಗಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಮನ್ನಣೆ ದೊರೆಯಿತು. ದಾಸಕೂಟದ ಕನಕದಾಸರ ಆತ್ಮದ ಭಾಷೆ ಕನ್ನಡವಾಗಿತ್ತು. ಕನ್ನಡದಲ್ಲಿ ತನ್ಮಯರಾಗಿ ಅವರು ಭಕ್ತಿ ಮತ್ತು ವೈಚಾರಿಕತೆಯನ್ನು ಮಂಡಿಸಿದರು.” ಎಂದರು.

    ಜಾನಪದ ವಿದ್ವಾಂಸ ಪ್ರೊ. ಚಿನ್ನಪ್ಪಗೌಡ ಮಾತನಾಡಿ “ಸಾಹಿತ್ಯದ, ಸಂಗೀತದ ವಿದ್ಯಾರ್ಥಿಗಳಿಗೆ ಕನಕ ಬಹಳ ಮುಖ್ಯವಾಗುತ್ತಾನೆ. ಪ್ರಾಚೀನ ಕನ್ನಡ ಸಾಹಿತ್ಯ ಪರಂಪರೆಗೆ ಸೇರಿಕೊಂಡ ಬಹಳ ವಿಶಿಷ್ಠವಾದ ಕಾವ್ಯಧಾರೆ ಕೀರ್ತನೆಗಳಾಗಿವೆ. ಕೀರ್ತನೆಗಳ ಮೂಲಕ ಸಾಹಿತ್ಯವು ಸಾರ್ವಜನಿಕ ವಲಯದಲ್ಲಿ ತೆರದುಕೊಂಡಿರುವುದನ್ನು ನಾವು ಗಮನಿಸಬಹುದು.” ಎಂದರು.

    ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿ.ವಿ. ಹಣಕಾಸು ಅಧಿಕಾರಿ ಪ್ರೊ.ವೈ. ಸಂಗಪ್ಪ ಮಾತನಾಡಿ “ಅಂದಿನ ಕಾಲದಿಂದ ಇಂದಿನ ಕಾಲದವರೆಗೆ ಸಮಾಜದಲ್ಲಿ ಎದುರಾಗುವ ಅನೇಕ ಜಟಿಲ ಸಮಸ್ಯೆಗಳಿಗೆ ವಚನಗಳಲ್ಲಿಯೇ ಪರಿಹಾರ ಮಾರ್ಗೋಪಾಯಗಳು ಇರುವುದನ್ನು ನಾವು ಕಂಡುಕೊಳ್ಳಬಹುದು.” ಎಂದರು.

    ಮಂಗಳೂರು ವಿ. ವಿ. ಸಮಾಜಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷ ಡಾ. ಮೋಹನ್ ಎಸ್. ಸಿಂಘೆ, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಮಾತನಾಡಿದರು.

    ಡಾ. ಧನಂಜಯ ಕುಂಬ್ಳೆ ಸ್ವಾಗತಿಸಿ, ಶ್ರೀಮತಿ ವಿಸ್ಮಾ ವಂದಿಸಿದರು. ಡಾ. ಉಷಾರಾಣಿ ನಿರೂಪಿಸಿದರು. ಶ್ರೀದೇವಿ ಕಲ್ಲಡ್ಕ ಕನಕದಾಸರ ಕೀರ್ತನೆ ಹಾಡಿದರು. ಬಳಿಕ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯ ಕ್ರಮ ನಡೆಯಿತು. ಸುಳ್ಯ, ಉಡುಪಿ, ಕಾರ್ಕಳ, ದ.ಕ ಜಿಲ್ಲೆಯ ವಿವಿಧೆಡೆಗಳಿಂದ 118 ಗಾಯಕರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Article2024ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ
    Next Article ಮುಂಡ್ಕೂರು ನಾಗೇಶ ಪ್ರಭು ನಿಧನ
    roovari

    Add Comment Cancel Reply


    Related Posts

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08

    June 6, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.