Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕನಸು ಕಾರ್ತಿಕ್ ಯುವ ರಂಗ ಪುರಸ್ಕಾರ’ಕ್ಕೆ ರಂಗನಟ ಭುವನ್ ಮಣಿಪಾಲ್ ಆಯ್ಕೆ
    Awards

    ‘ಕನಸು ಕಾರ್ತಿಕ್ ಯುವ ರಂಗ ಪುರಸ್ಕಾರ’ಕ್ಕೆ ರಂಗನಟ ಭುವನ್ ಮಣಿಪಾಲ್ ಆಯ್ಕೆ

    December 31, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಎರಡು ವರ್ಷಗಳ ಹಿಂದೆ ಅಗಲಿದ ಯುವ ರಂಗಕರ್ಮಿ ಮತ್ತು ನಂದಗೋಕುಲದ ವ್ಯವಸ್ಥಾಪಕ ಕನಸು ಕಾರ್ತಿಕ್ ನೆನಪಿನಲ್ಲಿ ಅರೆಹೊಳೆ ಪ್ರತಿಷ್ಠಾನ ನೀಡುವ ‘ಕನಸು ಕಾರ್ತಿಕ್ ಯುವ ರಂಗ ಪುರಸ್ಕಾರ’ಕ್ಕೆ ನಿರ್ದೇಶಕ ಹಾಗೂ ನಟರಾದ ಭುವನ್ ಮಣಿಪಾಲ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂಪಾಯಿ ಐದು ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶೀಘ್ರದಲ್ಲೇ ನಡೆಯಲಿರುವ ನಾಟಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರೆಹೊಳೆ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ತಿಳಿಸಿದ್ದಾರೆ.

    ಭುವನ್ ಮಣಿಪಾಲ್ :
    ‘ನೀನಾಸಂ’ ಪದವೀಧರರಾದ ಭುವನ್ ಮಣಿಪಾಲ್ ಇವರು ರಂಗ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ರಂಗ ಅಧ್ಯಾಪಕರಾಗಿ ಅನೇಕ ವಿದ್ಯಾರ್ಥಿಗಳಿಗೆ ರಂಗ ನಟನೆಯ ಅಭ್ಯಾಸ ನೀಡಿದ್ದಾರೆ. ಸಂಗಮ ಕಲಾವಿದರು (ರಿ.) ಮಣಿಪಾಲ, ರಥಬೀದಿ ಗೆಳೆಯರು (ರಿ.) ಉಡುಪಿ, ಚಿನ್ನಾರಿ ನಾಟಕ ತಂಡ ಮಣಿಪಾಲ, ಕುಸುಮ ಸಾರಂಗ ಸುಬ್ರಹ್ಮಣ್ಯ, ಸುರಭಿ ಬೈಂದೂರು, ನೃತ್ಯ ನಿಕೇತನ ಕೊಡವೂರು ಉಡುಪಿ ಮುಂತಾದ ಸಂಸ್ಥೆಗಳಲ್ಲಿ ನಟರಾಗಿ, ರಂಗ ವಿನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ಇವರು ಗಣೇಶ್ ಮಂದಾರ್ತಿ ನಿರ್ದೇಶನದ ‘ವಾಲಿವಧೆ’ ಹಾಗೂ ‘ಚೋಮನ ದುಡಿ’, ಶ್ರೀಪಾದ್ ಭಟ್ ನಿರ್ದೇಶನದ ‘ಮಹಿಳಾ ಭಾರತ’ ಹಾಗೂ ‘ಚಿತ್ರ’, ಪ್ರಥ್ವಿನ್ ಕೆ. ವಾಸು ನಿರ್ದೇಶನದ ‘ಗಾಂಧಿ@ಗೋಡ್ಸೆ.ಕಾಂ’, ಪ್ರಶಾಂತ್ ಉದ್ಯಾವರ ನಿರ್ದೇಶನದ ‘We teach life Sir’ ಹಾಗೂ ಶಂಕರ್ ವೆಂಕಟೇಶ್ವರನ್ ನಿರ್ದೇಶನದ ‘ಒಳಾಂಗಣ’ ಹೀಗೆ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ. ‘ಗೋವಿನ ಹಾಡು’, ‘ಬೆಳಕಿನೆಡೆಗೆ’, ‘ಮಕ್ಕಳ ರಾಮಾಯಣ’, ‘ಕೊನೆಗೆ ಸಿಕ್ಕಿದ್ದೇನು’, ‘ಸಾಹೇಬರು ಬರುತ್ತಾರೆ’ ಹಾಗೂ ‘ಮೂಕ ನರ್ತನ’ ಮೊದಲಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯಗುರು ಕಮಲಾ ಭಟ್ ಇವರಿಗೆ ನುಡಿ ನಮನ
    Next Article ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04
    roovari

    Add Comment Cancel Reply


    Related Posts

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.