Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ “ಕನಸುಗಳು-2024 ” ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು | ನವೆಂಬರ್ 15 ಮತ್ತು 16
    Competition

    ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ “ಕನಸುಗಳು-2024 ” ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು | ನವೆಂಬರ್ 15 ಮತ್ತು 16

    November 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು “ಕನಸುಗಳು – 2024” ನವಂಬರ್‌ 15 ಹಾಗೂ 16ನೇ ಶುಕ್ರವಾರ ಮತ್ತು ಶನಿವಾರದಂದು ನಡೆಯಲಿದೆ.
    ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ 15 ನವಂಬರ್‌ 2024ರಂದು ಬೆಳಗ್ಗೆ 9.00ರಿಂದ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಹಿರಿಯ ವಿಜ್ಞಾನಿ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್‌. ಸುಬ್ರಹ್ಮಣ್ಯ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ. ಎಮ್‌. ಕೃಷ್ಣ ಭಟ್‌ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿರ್ದೇಶಕರಾದ ಡಾ. ಕೃಷ್ಣಪ್ರಸನ್ನ ಕೆ. ಉಪಸ್ಥಿತರಿರಲಿದ್ದಾರೆ.
    ಸಭಾಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಲವು ರೀತಿಯ ಸ್ಪರ್ಧೆಗಳು ನಡೆಯಲಿದ್ದು, ಮೊದಲನೆಯ ದಿನ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ದೃಶ್ಯಕಾವ್ಯ, ಯುವ ವಾಣಿಜ್ಯೋದ್ಯಮಿ, ಗಾಳಿಪಟ ಹಾರಾಟ, ಮುಖವರ್ಣಿಕೆ, ವೀಡಿಯೋ ಸಂಕಲನ ಮುಂತಾದ ಸ್ಪರ್ಧೆಗಳು ನಡೆಯಲಿವೆ.
    ಅಪರಾಹ್ನ ವಿನಯ್‌. ವಿ ಜಾದವ್‌, ಉಪಾಧ್ಯಕ್ಷರು, ಬಿ ಎಸ್ ಬಿ ಎಸ್‌ ಬೆಂಗಳೂರು ಇವರಿಂದ ವ್ಯಕ್ತಿತ್ವ ವಿಕಸನ ಕಾರ್ಯಗಾರ ನಡೆಯಲಿದೆ. ಕಾರ್ಯಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಮುರಳೀಕೃಷ್ಣ ರೈ ಉಪಸ್ಥಿತಲಿರಲಿದ್ದಾರೆ.
    ನವಂಬರ 16ರ ಕನಸುಗಳು ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತಿಕೆ, ಕಲರವ ಸಾಂಸ್ಕೃತಿಕ ವೈವಿಧ್ಯ, ನಿಧಿಶೋಧ, ಭಗವದ್ಗೀತಾ ಕಂಠಪಾಠ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ ‘ಕನಸುಗಳು’ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್‌ ಶೆಣೈ ಕೆ. ವಹಿಸಿಕೊಳ್ಳಲಿದ್ದಾರೆ.
    ಎರಡು ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧೆಗಳಲ್ಲಿ ರಾಜ್ಯಾದ್ಯಂತ ಸುಮಾರು 50ಕ್ಕೂ ಹೆಚ್ಚಿನ ಶಾಲೆಗಳಿಂದ 1000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾವಿಲಾಸಿ ತಂಡದ ಕಲಾವಿದರಿಂದ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ನವೆಂಬರ್ 17
    Next Article ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವ್ಯಂಗ್ಯಚಿತ್ರ ರಚನಾ ಕಾರ್ಯಾಗಾರ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.