Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ದಶರಂಗ ಸಂಭ್ರಮ’ ನಾಟಕೋತ್ಸವದಲ್ಲಿ ‘ಕಣಿವೆಯ ಹಾಡು’ ನಾಟಕ ಪ್ರದರ್ಶನ
    Drama

    ‘ದಶರಂಗ ಸಂಭ್ರಮ’ ನಾಟಕೋತ್ಸವದಲ್ಲಿ ‘ಕಣಿವೆಯ ಹಾಡು’ ನಾಟಕ ಪ್ರದರ್ಶನ

    April 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾರ್ಕಳ : ರಂಗಸಂಸ್ಕೃತಿಯ ದಶಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡ ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಎರಡನೆಯ ದಿನದ ಕಾರ್ಯಕ್ರಮವು ದಿನಾಂಕ 22-03-2024ರಂದು ನಡೆಯಿತು.
    ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಕೋಟ್ಯಾನ್ ಇವರು “ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ನಾಟಕ ಪರಂಪರೆಯು ನಮ್ಮ ಹಿರಿದಾದ ಸಂಸ್ಕೃತಿಯನ್ನು ಉಳಿಸಿ ಬೆಳಸುವ ಪರಿಣಾಮಕಾರಿ ಮಾಧ್ಯಮವಾಗಿದೆ. ಆಧುನಿಕ ಕನ್ನಡ ನಾಟಕ ಪರಂಪರೆಯು ಶ್ರೇಷ್ಠ ಕಾವ್ಯಗಳನ್ನು ನಾಟಕವನ್ನಾಗಿಸುವ  ವಿಶೇಷವಾದ ಪರಿಕಲ್ಪನೆಯನ್ನು ಹೊಂದಿದೆ. ನಾಡಿನ ಕಲಾ ರಸಿಕರಿಗೆ ಸದಭಿರುಚಿಯ ರಸಾಸ್ವಾದನೆಯ ಗುಣದಿಂದ ಆರಂಭ ಕಾಲದಿಂದ ತೊಡಗಿ ಇಂದಿನವರೆಗೆ ಕೂಡ ನಾಟಕವು ವಿಶೇಷವಾದ ಒಂದು ಪ್ರೇಕ್ಷಕ ವರ್ಗವನ್ನು ಹೊಂದಿದೆ. ನಾಟಕವು ಎಲ್ಲಾ ಆಯಾಮಗಳಿಂದ ಸಹೃದಯರ ಮನವನ್ನು ಗೆದ್ದಿದೆ ಹಾಗೆಯೇ ನಾಟಕವನ್ನು ನೋಡುವಂತಹ ಸಹೃದಯಿಯನ್ನು ನಾಟಕದೊಳಗೆಯೇ ತಾನು ಕೂಡ ಒಬ್ಬ  ಪಾತ್ರಧಾರಿಯಾಗಿ ಗುರುತಿಸಿಕೊಳ್ಳುವಂತಹ ತೊಡಗಿಸಿಕೊಳ್ಳುವಿಕೆಯು ಪ್ರೇಕ್ಷಕರಿಗೆ ಇದೆ. ಇಂತಹ ಒಳ್ಳೆಯ ಕಲಾರಸಿಕತೆಯನ್ನು  ರೂಪಿಸಿಕೊಳ್ಳುವ ನಿಟ್ಟಿನಲ್ಲಿ ರಂಗಸಂಸ್ಕೃತಿಯು ಕಾರ್ಕಳದ ಪರಿಸರದಲ್ಲಿ ಕಳೆದ ಹತ್ತು ವರುಷಗಳಿಂದ ನಿರಂತರವಾಗಿ ನಾಟಕೊತ್ಸವವನ್ನು ಆಯೋಜಿಸಿಕೊಂಡು ಬರುತ್ತಿದೆ” ಎಂದು ಅಭಿಪ್ರಾಯಪಟ್ಟರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗಸಂಸ್ಕೃತಿಯ ಅಧ್ಯಕ್ಷರಾದ ಎಸ್. ನಿತ್ಯಾನಂದ ಪೈ ವಹಿಸಿದ್ದರು. ವೇದಿಕೆಯಲ್ಲಿ ಯಕ್ಷಕಲಾ ರಂಗದ ಅಧ್ಯಕ್ಷರಾದ ವಿಜಯ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕಿ ಹರ್ಷಿಣಿ ಕೆ., ರಂಗಸಂಸ್ಕೃತಿಯ ಸಹ ಕಾರ್ಯದರ್ಶಿ ರಾಮಚಂದ್ರ ನೆಲ್ಲಿಕಾರ್, ಸಂಚಾಲಕರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಶಿವ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ನಾಗೇಶ್ ನಲ್ಲೂರು ನಿರೂಪಿಸಿ, ಗಣೇಶ್ ಜಾಲ್ಸೂರು ವಂದಿಸಿದರು. ಆರಂಭದಲ್ಲಿ ‘ವಿಹಾನಾ’ ಮೆಲೋಡೀಸ್ ತಂಡದ ನಿರ್ದೇಶಕಿ ಗಾಯಕಿ ರಮ್ಯಾ ಸುಧೀಂದ್ರ ಮತ್ತು ಗಾಯಕ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಹಳೆಯ ಹಾಡುಗಳನ್ನು ಹಾಡಿ ರಂಜಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಮೈಸೂರಿನ ‘ನಟನ’ ತಂಡ ಅಭಿನಯಿಸಿದ ಡಾ. ಶ್ರೀಪಾದ ಭಟ್ ನಿರ್ದೇಶನದ ‘ಕಣಿವೆಯ ಹಾಡು’ ಪ್ರದರ್ಶನಗೊಂಡು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ರಂಗಭೂಮಿ ವತಿಯಿಂದ ‘ವಿಶ್ವ ರಂಗಭೂಮಿ ದಿನಾಚರಣೆ’
    Next Article ಕಸಪಾ ಶಿವಮೊಗ್ಗ ಘಟಕದಿಂದ ಕವಿ ವಾಸುದೇವ ಭೂಪಾಳಂ ಅವರ ಕವನಗಳ ಗಾಯನ, ವಾಚನ ಸ್ಪರ್ಧೆ
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.