Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ಕನ್ನಡ ಪತ್ರಿಕಾ ದಿನಾಚರಣೆ.
    Literature

    ಕಾಸರಗೋಡಿನಲ್ಲಿ ಕನ್ನಡ ಪತ್ರಿಕಾ ದಿನಾಚರಣೆ.

    July 11, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು: ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆಯು ದಿನಾಂಕ 01-07-2023 ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿ, ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ “ಕನ್ನಡ ಹೋರಾಟಕ್ಕೆ ಶಕ್ತಿ ತುಂಬುವಲ್ಲಿ ಕಾಸರಗೋಡಿನ ಪತ್ರಿಕೆಗಳ ಕೊಡುಗೆ ಗಣನೀಯವಾದದ್ದು. ಕನ್ನಡದ ಅಸ್ತಿತ್ವವನ್ನು ಭದ್ರಪಡಿಸಲು ಕನ್ನಡ ಪತ್ರಕರ್ತರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಭಾಷಾವಾರು ಪ್ರಾಂತ್ಯ ರಚನೆಯಾದಾಗ ಅಚ್ಚಗನ್ನಡ ಪ್ರದೇಶ ಕಾಸರಗೋಡು ಅನ್ಯಾಯವಾಗಿ ಕೇರಳಕ್ಕೆ ಸೇರಿಸಲ್ಪಟ್ಟಿತು. ಅಂದಿನಿಂದಲೇ ಇಲ್ಲಿ ಕನ್ನಡಿಗರ ಹೋರಾಟ ಪ್ರಾರಂಭಿಸಲಾಯಿತು. ಕನ್ನಡ ಪತ್ರಕರ್ತರು ಮಾತ್ರವಲ್ಲದೆ ಪತ್ರಿಕೆಗಳ ಮಾಲಕರೂ ಆ ಹೋರಾಟದಲ್ಲಿ ಸಕ್ರಿಯರಾಗುವ ಮೂಲಕ ವರದಿ, ಲೇಖನಗಳಿಂದ ಜಾಗೃತಿ ಮೂಡಿಸಿ ಸರ್ವ ಕನ್ನಡಿಗರನ್ನು ಬಡೆದೆಬ್ಬಿಸಿದರು. ಕಾಸರಗೋಡು ಸಮಾಚಾರ, ನಾಡ ಪ್ರೇಮಿ ಮತ್ತು ಕಾಸರಗೋಡು ಕನ್ನಡ ಕಹಳೆ ಸಹಿತ ಹಲವು ಪತ್ರಿಕೆಗಳು ಕನ್ನಡಿಗರ ಹೋರಾಟಕ್ಕೆ ಸ್ಫೂರ್ತಿ ನೀಡಿದವು. ಈಗಲೂ ಪತ್ರಿಕೆಗಳು ಕನ್ನಡದ ಅವಗಣನೆಯ ವಿರುದ್ಧ ಧ್ವನಿಯೆತ್ತುತ್ತಲೇ ಇವೆ” ಎಂದು ಹೇಳಿದರು.
    ಲೇಖಕಿ, ಕಲಾವಿದೆ, ವಿದುಷಿ ಅನುಪಮಾ ರಾಘವೇಂದ್ರ ಉಡುಪುಮೂಲೆ ಕನ್ನಡ ಪತ್ರಿಕೆಗಳ ಉದಯ ಮತ್ತು ವಿಕಾಸದ ಬಗ್ಗೆ ಮಾತನಾಡಿದರು. ವಿಶೇಷಾಹ್ವಾನಿತರಾಗಿದ್ದ ಹಿರಿಯ ಸಾಹಿತಿ ವೈ ಸತ್ಯನಾರಾಯಣ ‘ಪತ್ರಿಕೆ – ಪತ್ರಕರ್ತರು – ಓದುಗರು’ ಎಂಬ ವಿಷಯದಲ್ಲಿ ವಿಚಾರವನ್ನು ಮಂಡಿಸಿದರು. ಉದ್ಯಮಿ ಶ್ರೀನಿವಾಸ್, ಛಾಯಾಚಿತ್ರಗ್ರಾಹಕ ಗಣೇಶ್ ಹಾಗೂ ಕಾವ್ಯಾ ಕುಶಲ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಪತ್ರಕರ್ತ ಬಸ್ತಿಗುಡ್ಡೆ ಶ್ರೀಧರ ಅವರನ್ನು ಗೌರವಿಸಲಾಯಿತು.
    ಪತ್ರಕರ್ತರಾದ ಗಣೇಶ್ ನುಳ್ಳಿಪ್ಪಾಡಿ, ವೀಜಿ ಕಾಸರಗೋಡು, ಪುರುಷೋತ್ತಮ ನಾಯ್ಕ್, ಪ್ರದೀಪ್‌ ಬೇಕಲ್ ಪಾಲ್ಗೊಂಡಿದ್ದರು, ಹರಿದಾಸ್ ಜಯಾನಂದ ಹೊಸದುರ್ಗ ಪ್ರಾರ್ಥನೆಗೈದು ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘಟಕ ಜಗದೀಶ್ ಕೂಡು ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶಿಷ್ಟ ಪರಿಕಲ್ಪನೆಯ ಸೀನ್ ಸೀನರಿಯ ಯಕ್ಷನಾಟಕ ಪ್ರದರ್ಶನ ಹಾಗೂ ಹಿರಿಯ ಕಲಾವಿದರಿಗೆ ಸನ್ಮಾನ
    Next Article ಬೆಂಗಳೂರಿನ ಮಹದೇವ ದೇಸಾಯಿ ಸಭಾಂಗಣದಲ್ಲಿ ‘ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.