ಕಾಸರಗೋಡು : ಡಾ. ವಾಮನ್ ರಾವ್ ಬೇಕಲ್ – ಸಂದ್ಯಾ ರಾಣಿ ಟೀಚರ್ ಸಾರಥ್ಯದ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕಾಸರಗೋಡು ಇದರ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ 2025’ ಮಂಗಳೂರಿನ ಸುಪ್ರಸಿದ್ದ ಕವಯತ್ರಿ, ಲೇಖಕಿ, ಉತ್ತಮ ಸಂಘಟಕಿಯಾಗಿರುವ ಶ್ರೀಮತಿ ಅನಿತಾ ಶೆಣೈ ಇವರಿಗೆ ಲಭಿಸಿದೆ.
ಕನ್ನಡ ಭವನ ಪ್ರಶಸ್ತಿ ಆಯ್ಕೆ ಸಮಿತಿಯು ಇವರ ಪ್ರಶಸ್ತಿಯನ್ನು ಘೋಷಿಸಿದ್ದು, ದಿನಾಂಕ 22 ಜುಲೈ 2025ರಂದು ಶ್ರೀಮತಿ ಅನಿತಾ ಶೆಣೈ ಇವರ ನಿವಾಸದಲ್ಲಿ ನಡೆಯಲಿರುವ ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ, ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಉದ್ಘಾಟನೆಗೊಳ್ಳಲಿರುವ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ’ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳು ಪ್ರದಾನ ಮಾಡಿ ಗೌರವಿಸಲಿದ್ದಾರೆ. ಈ ಸಮಾರಂಭ ದ.ಕ. ಜಿಲ್ಲಾಧ್ಯಕ್ಷರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಇವರ ಅದ್ಯಕ್ಷತೆಯಲ್ಲಿ ನಡೆಯಲಿದ್ದು, ಕನ್ನಡ ದುರೀಣರಾದ ಪ್ರದೀಪ್ ಕುಮಾರ್ ಕಲ್ಕೂರ, ಪಿ.ವಿ. ಪ್ರದೀಪ್ ಕುಮಾರ್, ಸತ್ಯವತಿ ಭಟ್ ಕೊಲಚಪ್ಪು, ರೇಖಾ ಸುದೇಶ್ ರಾವ್, ಉಮೇಶ್ ರಾವ್ ಕುಂಬ್ಳೆ, ಜಯಾನಂದ ಪೆರಾಜೆ, ಡಾ. ಶಾಂತ ಪುತ್ತೂರು, ವಸಂತ್ ಕೆರೆಮನೆ, ಅಪೂರ್ವ ಕಾರಂತ್ ಪುತ್ತೂರು ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.