Subscribe to Updates

    Get the latest creative news from FooBar about art, design and business.

    What's Hot

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ
    Literature

    ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

    November 4, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಆಶ್ರಯದಲ್ಲಿ ಕನ್ನಡದ ಹಿರಿಯ ಸಾಹಿತಿಗಳಾದ ಶಿರಸಿಯ ಸುಬ್ರಾಯ ಮತ್ತಿಹಳ್ಳಿ (ವಿಮರ್ಶನ ಸಾಹಿತ್ಯ), ಉಡುಪಿಯ ಅಂಶುಮಾಲಿ (ಬಹುಭಾಷಾ ಸಾಹಿತ್ಯ), ಕೋಟಾದ ನೀಲಾವರ ಸುರೇಂದ್ರ ಅಡಿಗ (ಸಮಗ್ರ ಸಾಹಿತ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ದಿನಾಂಕ 01-11-2023ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2003’ವನ್ನು ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ ಇದರ ಮುಖ್ಯಸ್ಥರಾದ ಪ್ರೊ. ವರದೇಶ್ ಹಿರೇಗಂಗೆ ಅವರು ಪ್ರದಾನ ಮಾಡಿ ಮಾತನಾಡುತ್ತಾ “ನಾನು ಇಂಗ್ಲಿಷ್ ವಿರೋಧಿಯಲ್ಲ, ಆದರೆ ಎಲ್ಲ ಭಾಷೆಗಳನ್ನು ಇಂಗ್ಲಿಷ್ ನುಂಗಿ ನೀರು ಕುಡಿಯಬಾರದು. ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತ ಅಧಿಕಾರಿಯಾದ ಡಾ. ಬಿ. ಜಗದೀಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಐಎಂಎ ಕರಾವಳಿಯ ಅಧ್ಯಕ್ಷರಾಗಿರುವ ಡಾ. ರಾಜಲಕ್ಷ್ಮೀಯವರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಇದರ ವ್ಯವಸ್ಥಾಪಕರಾದ ಹಫೀಸ್ ರೆಹಮಾನ್ ಉಪಸ್ಥಿತರಿದ್ದರು.

    ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೋಶಿ ಸ್ವಾಗತಿಸಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್ ಪಿ ಪ್ರಸ್ತಾವನೆಗೈದರು. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ವಿದ್ಯಾ ರಮೇಶ್, ರಾಘವೇಂದ್ರ ಪ್ರಭು ಕರ್ವಾಲು ಸನ್ಮಾನಿತರನ್ನು ಪರಿಚಯಿಸಿದರು.
    ಉಪಾಧ್ಯಕ್ಷೆ ಸಂಧ್ಯಾ ಶೆಣೈ ಧನ್ಯವಾದ ನೀಡಿ, ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಭಾರತೀ ಕಾಲೇಜಿನ ಶಂಕರಶ್ರೀ ಸಭಾಭವನದಲ್ಲಿ ರಾಜ್ಯೋತ್ಸವ ರಸಸಂಜೆ ಕಾರ್ಯಕ್ರಮ
    Next Article ಭಾವನಾ ಫೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಆಯೋಜಿಸಿದ ‘ಜನಪದ’ ದೇಶೀಯ ಸರಣಿ ಕಲಾ ಕಾರ್ಯಾಗಾರ-8
    roovari

    Add Comment Cancel Reply


    Related Posts

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.