Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ
    Competition

    ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ

    November 13, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ದಿನಾಂಕ 07 ನವೆಂಬರ್ 2025ರಂದು ಆಯೋಜಿಸಿದ್ದ ರಸಪ್ರಶ್ನೆಯ 2ನೇ ಸರಣಿ ಕಾರ್ಯಕ್ರಮವನ್ನು ಬೆಸೆಂಟ್ ಹಿರಿಯ ಪ್ರೌಢಶಾಲೆ ಕನ್ನಡ ಮಾಧ್ಯಮದಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿತ್ತು.

    ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ತ್ರಿವೇಣಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳಿಗಾಗಿ ನಡೆಸುವ ಈ ಕಾರ್ಯಕ್ರಮ ಉತ್ತಮವಾಗಿದೆ ಮತ್ತು ಸಾಹಿತ್ಯದ ಬಗ್ಗೆ ಒಲವನ್ನು ಮೂಡಿಸುವಲ್ಲಿ ಅನುಕೂಲವಾಗಿದೆ” ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ರತ್ನಾವತಿ ಜೆ. ಬೈಕಾಡಿ ಇವರು “ಮಕ್ಕಳು ಬಾಲ್ಯದಲ್ಲಿಯೇ ಶರಣರು ವಚನಗಳಲ್ಲಿ ಹೇಳಿದ ಒಳ್ಳೆಯ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೊಡ್ಡ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬಹುದು” ಎಂದು ತಿಳಿಸಿದರು.

    ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಸುರೇಂದ್ರ ರಾವ್ ಇವರು “ಕನ್ನಡ ಮಾಧ್ಯಮದಲ್ಲಿ ಕಲಿತಂತಹ ಅನೇಕ ಸಾಧಕರು ನಮ್ಮ ಮುಂದಿದ್ದಾರೆ. ಹಾಗಾಗಿ ಕನ್ನಡ ಮಾಧ್ಯಮದಲ್ಲಿ ಓದುವಂತಹ ಮಕ್ಕಳು ಯಾವುದೇ ಸ್ಪರ್ಧೆಗೆ ತಯಾರಾಗಿದ್ದಾರೆ. ಅವರು ತಮ್ಮ ಪ್ರತಿಭೆಯ ಮೂಲಕ ಭಾಷೆಯನ್ನು ಉಳಿಸಿ ಬಳಸಬೇಕು” ಎಂದು ಅಭಿಪ್ರಾಯಪಟ್ಟರು.

    ಸಂಘದ ಅಧ್ಯಕ್ಷ ಶ್ರೀಮತಿ ಸುಮಾ ಅರುಣ್ ಮಾನ್ವಿ ಇವರು ತಮ್ಮ ಪ್ರಸ್ತಾವಿಕದಲ್ಲಿ ಸಂಘ ಕಳೆದ 13 ವರ್ಷದಿಂದ ನಡೆಸಿಕೊಂಡು ಬಂದಂತಹ ಕಾರ್ಯಕ್ರಮಗಳಲ್ಲಿ ವಚನ ಸಂಭ್ರಮ ಒಂದು ಭಾಗವಾಗಿದ್ದು, ಇದು ಈ ವರ್ಷ 11ನೇ ವಚನ ಸಂಭ್ರಮವಾಗಿದೆ. ಈ ವರ್ಷ ನಾವೇ ಶಾಲೆಗೆ ತೆರಳಿ ಮಕ್ಕಳಿಗೆಗಾಗಿ ಸ್ಪರ್ಧೆಯನ್ನು ಆಯೋಜನೆ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಈ ಶಾಲೆಯಲ್ಲಿ 109 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.” ಎಂದು ತಿಳಿಸಿದರು.

    ಇಂಚರ ತಂಡದ ಸದಸ್ಯರು ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ಗೀತೆಗಳನ್ನು ಮತ್ತು ವಚನಗಳನ್ನು ಹಾಡಿದರು. ಶ್ರೀಮತಿ ಅನುಪಮ ಸ್ವಾಗತಿಸಿ, ಶ್ರೀಮತಿ ಉಮಾ ಪಾಲಾಕ್ಷಪ್ಪ ವಂದಿಸಿ, ಶ್ರೀಮತಿ ಮಣಿ ಶಂಕರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಿದ್ಯಾ ಮತ್ತು ಎಲ್ಲಾ ಸದಸ್ಯರು ಮತ್ತು ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ರಸಪ್ರಶ್ನೆ ವಿಜೇತರು ಪ್ರಥಮ – ಕುಮಾರಿ ಪ್ರತೀಕ್ಷಾ, ಕಾಜಲ್, ದ್ವಿತೀಯ – ಪೂಜಾ, ತೃತೀಯ – ಭುವನೇಶ್ವರಿ, ಗದಿಗೆಪ್ಪ, ರಿತೇಶ್ ಕುಮಾರ್ ಬಹುಮಾನವನ್ನು ಗಳಿಸಿದರು.

    baikady competition kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನಕ ಜಯಂತಿ ಪ್ರಯುಕ್ತ ‘ಕನಕ ಕೀರ್ತನ ಗಂಗೋತ್ರಿ’
    Next Article ವಿರಾಜಪೇಟೆಯಲ್ಲಿ ‘ನುಡಿ ಉತ್ಸವ 2025’ ಲಾಂಛನ ಬಿಡುಗಡೆ
    roovari

    Add Comment Cancel Reply


    Related Posts

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.