Subscribe to Updates

    Get the latest creative news from FooBar about art, design and business.

    What's Hot

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ಜಿಲ್ಲಾ ಕ.ಸಾ.ಪ.ದಿಂದ ಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮ
    Competition

    ಕೊಡಗು ಜಿಲ್ಲಾ ಕ.ಸಾ.ಪ.ದಿಂದ ಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮ

    November 7, 2024Updated:January 7, 2025No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06 ನವೆಂಬರ್ 2024ರಂದು ಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಬೋಡಂಗಡ ಅಯ್ಯಪ್ಪ ಇವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾಡುವ ಮೂಲಕ ಕನ್ನಡ ಸಾಹಿತ್ಯದ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡುತ್ತಿದೆ ಇದು ಶ್ಲಾಘನೀಯ ವಿಚಾರ. ಕೊಡಗಿನ ಗಡಿಭಾಗವಾದ ಶ್ರೀಮಂಗಲ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳ ಅವಶ್ಯಕತೆ ತುಂಬಾ ಇದ್ದು, ಗಡಿ ಪ್ರದೇಶದ ಎಲ್ಲಾ ಶಾಲೆಗಳಲ್ಲೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಸಲಹೆ ನೀಡಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡುತ್ತಾ “ಸಾಹಿತ್ಯ ಪರಿಷತ್ತು ದತ್ತಿನಿಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಮೂಡಬೇಕು. ಕನ್ನಡ ನಾಡು ನುಡಿ ಆಚಾರ ವಿಚಾರ ಪರಂಪರೆಗಳ ಪರಿಚಯ ವಿದ್ಯಾರ್ಥಿಗಳಿಗೆ ಆಗಬೇಕು ಎನ್ನುವ ಉದ್ದೇಶವಿದ್ದು, ಅದು ಕಾರ್ಯಗತವಾದಾಗ ಮಾತ್ರ ನಾಡು ನುಡಿ ಉಳಿಯಲು ಸಾಧ್ಯ” ಎಂದರು. ದಿ. ಮೊಣ್ಣಂಡ ಕೆ. ಚಂಗಪ್ಪ ಜ್ಞಾಪಕ ದತ್ತಿನಿಧಿ ಮತ್ತು ದಿ. ಸಾಹಿತಿ ಮುಲ್ಲೆಂಗಡ ಬೇಬಿ ಚೋಂದಮ್ಮ ಸ್ಮಾರಕ ದತ್ತಿನಿಧಿ ಕುರಿತು ಮಾಹಿತಿ ನೀಡಿದರು. ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ಜರಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಿಗರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ಹೊತ್ತ ರಥವು‌ ಇದೇ ತಿಂಗಳ ದಿನಾಂಕ 10 ಮತ್ತು 11ರಂದು ಕೊಡಗು ಜಿಲ್ಲೆಯಲ್ಲಿ ಸಂಚರಿಸಲಿದ್ದು, ಪೊನ್ನಂಪೇಟೆಯಲ್ಲಿ ನವೆಂಬರ್ 10ರಂದು ವಾಸ್ತವ್ಯ ಹೂಡಲಿದೆ. ಅಂದು ಪೊನ್ನಂಪೇಟೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿದೆ ಎಂದು ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

    ದಿ. ಮೊಣ್ಣಂಡ ಕೆ. ಚಂಗಪ್ಪ ಜ್ಞಾಪಕ ದತ್ತಿ ನಿಧಿಯ ಆಶಯದಂತೆ ‘ಕನ್ನಡ ಕೊಡವ ಭಾಷಾ ಬೆಳವಣಿಗೆ ಕುರಿತು’ ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಅಜ್ಜಮಾಡ ರೇಖಾ ಮಾತನಾಡುತ್ತಾ ಕನ್ನಡ ಮತ್ತು ಕೊಡವ ಎರಡು ಭಾಷೆಗಳು ಒಂದಕ್ಕೊಂದು ಹೊಂದಿಕೊಂಡು ಇರುವಂತಹ ಭಾಷೆಗಳಾಗಿದ್ದು, ಕನ್ನಡ ಭಾಷೆಯ ಬೆಳವಣಿಗೆಯೊಂದಿಗೆ ಕೊಡವ ಭಾಷೆ ಕೂಡ ಅತ್ಯುತ್ತಮ ಬೆಳವಣಿಗೆಗೊಂಡಿದೆ. ಪಂಪನಿಂದ ಇಂದಿನ ಸಾಹಿತಿಗಳವರೆಗೆ ಕನ್ನಡ ಸಾಹಿತ್ಯ ಲೋಕ ಹಲವಾರು ಮಜಲುಗಳನ್ನು ಕಂಡಿದ್ದು, ಕೊಡವ ಸಾಹಿತ್ಯದ ಬೆಳವಣಿಗೆಗೆ ಸಾಹಿತಿಗಳಾದ ಹರದಾಸ ಅಪಚ್ಚ ಕವಿ, ಬಿ.ಡಿ. ಗಣಪತಿ, ಕಾಕೆಮಾನಿ ಇವರಿಂದ ಇಂದಿನ ಸಾಹಿತಿಗಳವರೆಗೆ ವಿವರಿಸಿದ್ದರು.

    ದಿ. ಸಾಹಿತಿ ಮುಲ್ಲೆಂಗಡ ಬೇಬಿ ಚೋಂದಮ್ಮ ಸ್ಮಾರಕ ದತ್ತಿನಿಧಿಯ ಆಶಯದಂತೆ ಕೊಡಗಿನ ಮಹಿಳಾ ಸಾಹಿತಿಗಳ ಕುರಿತು ಶ್ರೀಮಂಗಲ ಜೆ.ಸಿ. ಶಾಲೆಯ ಅಧ್ಯಾಪಕಿ ಶ್ರೀಮತಿ ಬಿ.ಯು. ಯಶೋದರವರು ಮಾತನಾಡುತ್ತಾ “ದಿ. ಸಾಹಿತಿ ಮುಲ್ಲೆಂಗಡ ಬೇಬಿ ಚೋಂದಮ್ಮರವರು ಕೊಡಗಿನ ಹಿರಿಯ ಸಾಹಿತಿಗಳಾಗಿದ್ದು, ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ. ಅವರ ಪತಿ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮತ್ತು ಮುಲ್ಲೆಂಗಡ ಮಧೋಶ್ ಪೂವಯ್ಯರವರು ಕೊಡಗಿನ ಮಹಿಳಾ ಸಾಹಿತಿಗಳ ಕುರಿತು ಉಪನ್ಯಾಸ ನೀಡಲು ದತ್ತಿ ಸ್ಥಾಪಿಸಿದ್ದು, ಕೊಡಗಿನ ಗೌರಮ್ಮ, ಪದ್ಮಾವತಿ, ಕೂತಂಡ ಪಾರ್ವತಿ ಪೂವಯ್ಯ, ಮಂಡೀರ ಜಯ ಅಪ್ಪಣ್ಣ, ಡಾ. ಕವಿತಾ ರೈ, ಎನ್‌.ಜಿ ಕಾವೇರಿ, ಬೋವೇರಿಯಂಡ ಬೇಬಿ ಚಿಣ್ಣಪ್ಪ, ಶ.ಗ ನಯನತಾರಾ, ರಶ್ಮಿ ನಂಜಪ್ಪ, ಮಂಡೆಪಂಡ ಗೀತಾ ಮಂದಣ್ಣ, ಕುಲ್ಲಚಂಡ ಚಿಪ್ಪಿ ಕಾರಿಯಪ್ಪ, ಪಾಲಚಂಡ ತುಳಸಿ, ಡಾ. ಪದ್ಮಶೇಖರ್, ಸುಮಾ ಶಾನಭಾಗ್, ಡಾ. ರೇಖಾ, ಪಿ.ಎ ಸುಶೀಲ, ವಿಜಯ ವಿಷ್ಣು ಭಟ್, ಸ್ಮಿತಾ ಅಮೃತರಾಜ್, ನಯನ ಕಶ್ಯಪ್, ಉಳುವಂಗಡ ಕಾವೇರಿ ಉದಯ, ಅಜ್ಜಮಾಡ ಸಾವಿತ್ರಿ, ಫ್ಯಾನ್ಸಿ ಮುತ್ತಣ್ಣ, ಸಹನಾ ಕಾಂತಬೈಲು ಇವರುಗಳು ಸಣ್ಣ ಕಥೆ, ಕಾದಂಬರಿ, ಕವನ ಸಂಕಲನ, ಕ್ಷೇತ್ರ ಪರಿಚಯ, ವಿಜ್ಞಾನ ವಿಚಾರಗಳು, ಪ್ರಬಂಧ, ಬಾಲ ಸಾಹಿತ್ಯ, ಅನುವಾದ ಸಾಹಿತ್ಯ ಹೀಗೆ ಹತ್ತು ಹಲವು ವಿಚಾರಗಳ ಬಗ್ಗೆ ಪುಸ್ತಕ ರಚಿಸಿ ಜಗತ್ತಿಗೆ ಉತ್ತಮ ಸಂದೇಶ ನೀಡಿದಾರೆ. ಸಾಹಿತ್ಯವಲ್ಲದೆ ಸಾಂಸ್ಕೃತಿಕ, ರಾಜಕೀಯ, ಕ್ರೀಡೆ, ವಿಮರ್ಶೆ, ಮನರಂಜನೆ,ಪರಿಸರ ವಲಯದಲ್ಲೂ ಕೂಡ ಸಾಕಷ್ಟು ಕೃತಿಗಳನ್ನು ರಚನೆ ಮಾಡಿದ್ದಾರೆ” ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮುಳ್ಳೆಂಗಡ ಸೋಮಯ್ಯ ಮಾತನಾಡುತ್ತಾ “ವಿದ್ಯಾರ್ಥಿಗಳ ಸಾಹಿತ್ಯಿಕ, ಬೌದ್ಧಿಕ ಬೆಳವಣಿಗೆಗೆ ಈ ರೀತಿಯ ಕಾರ್ಯಕ್ರಮಗಳು ಪೂರಕ” ಎಂದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಮಾತನಾಡುತ್ತಾ “ಪಾಠ ಪಠ್ಯಗಳೊಂದಿಗೆ ಸಾಹಿತ್ಯ ಕವನ ಕಾದಂಬರಿಗಳನ್ನು ಕೂಡ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಮನೆಯಲ್ಲಿ ಯಾವುದೇ ಭಾಷೆ ಮಾತನಾಡಿದರೂ ಸಾರ್ವಜನಿಕವಾಗಿ ಕನ್ನಡ ಮಾತನಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದುಕೊಂಡು ಕನ್ನಡದ ಬೆಳವಣಿಗೆಗೆ ಸಹಕಾರ ನೀಡಬೇಕು” ಎಂದರು.

    ದಾನಿಗಳು ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿ ಪುರಸ್ಕೃತರು ಆದ ಶ್ರೀಮತಿ ಕೈಬಲಿರ ಪಾರ್ವತಿ ಬೋಪಯ್ಯ ಇವರನ್ನು ಸನ್ಮಾನಿಸಲಾಯಿತು. ನಾಡತಕ್ಕರು ಮತ್ತು ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೈಬುಲಿರ ಹರೀಶ್ ಅಪ್ಪಯ್ಯ ಮಾತನಾಡುತ್ತಾ “ಕನ್ನಡ ನಾಡು ನುಡಿ ಕುರಿತು ಮಕ್ಕಳಿಗೆ ತಿಳಿಯಪಡಿಸಲು ಈ ತರದ ದತ್ತಿ ಕಾರ್ಯಕ್ರಮಗಳು ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಪಠ್ಯ ಪುಸ್ತಕದೊಂದಿಗೆ ಸಾಹಿತಿಕ ಓದು ಕೂಡ ಅವಶ್ಯಕ” ಎಂದರು.

    ದತ್ತಿದಾನಿಗಳು ತೂಕ್ ಬೊಳಕ್ ಕೊಡವ ಪತ್ರಿಕೆಯ ಸಂಪಾದಕರು ಹಾಗೂ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಮುಲ್ಲೆಂಗಡ ಮದೋಶ್ ಪೂವಯ್ಯ ತಮ್ಮ ಅನುಭವಗಳನ್ನು ಬಿಚ್ಚಿಡುತ್ತಾ ದತ್ತಿ ಕಾರ್ಯಕ್ರಮಗಳ ಕುರಿತು ವಿವರವಾದ ವಿಚಾರಗಳನ್ನು ತಿಳಿಸಿದರು. ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸರ್ವೆ ಇಲಾಖೆಯ ಅಧಿಕಾರಿಯೂ ಆಗಿರುವ ಬಾನಂಗಡ ಅರುಣ್ ಕುಮಾರ್ ಮಾತನಾಡುತ್ತಾ ತಮ್ಮ ಕಚೇರಿಯಲ್ಲಿ ಸಾರ್ವಜನಿಕರು ನೀಡುವ ಅರ್ಜಿಗಳನ್ನು ಕನ್ನಡದಲ್ಲಿ ನೀಡಬೇಕು ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದು ಅದನ್ನು ಮುಂದುವರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀಮತಿ ಉಳುವಂಗಡ ಕಾವೇರಿ ಉದಯ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನಾರ್ಪಿಸಿದರು.

    ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ತಾಲೂಕು ಕ.ಸಾ.ಪ. ಕಾರ್ಯದರ್ಶಿ ಕೆ.ವಿ. ರಾಮಕೃಷ್ಣ, ಶ್ರೀಮಂಗಲ ಹೋಬಳಿ ಗೌರವ ಕೋಶಾಧಿಕಾರಿ ಎಸ್.ಎಂ. ರಾಜೇಂದ್ರ ಪ್ರಸಾದ್, ಸಂಘಟನಾ ಕಾರ್ಯದರ್ಶಿ ಪಿ.ಎಂ. ಪೂಣಚ್ಚ, ನಿರ್ದೇಶಕರುಗಳಾದ ಶ್ರೀಮತಿ ಅಜ್ಜಮಾಡ ಸಾವಿತ್ರಿ, ಟಿ.ಆರ್. ವಿನೋದ್, ಎಸ್.ಡಿ. ಗಿರೀಶ್, ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು, ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಸಿದ ಗೀತ ಗಾಯನ ಸ್ಪರ್ಧೆಯಲ್ಲಿ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ವಿದ್ಯಾರ್ಥಿನಿ ರೂಪ ಪಿ.ಎ. – ಪ್ರಥಮ ಬಹುಮಾನ, ಪರ್ಸೀನಾ ಬೀವಿ – ದ್ವಿತೀಯ, ಅನುಷಾ ಪಿ.ಆರ್. – ತೃತೀಯ ಬಹುಮಾನ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಪ್ರೀನಿತ್ ಎನ್.ಕೆ. – ಪ್ರಥಮ, ಅಲನ್ಯ ಸುರೇಶ – ದ್ವಿತೀಯ, ಭೋಜಮ್ಮ – ತೃತೀಯ ಬಹುಮಾನ ಪಡೆದರು. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಾಗೇಶ್ ಕುಮಾರ್ ನಿರೂಪಿಸಿ, ಉಪನ್ಯಾಸಕಿ ಶ್ರೀಮತಿ ಪನ್ನ ಸ್ವಾಗತಿಸಿ, ಉಪನ್ಯಾಸಕ ಕೆ.ಆರ್. ಅರುಣಾಚಲ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ‘ನಾಟಕೋತ್ಸವ 2024’ | ನವೆಂಬರ್ 8ರಿಂದ 10
    Next Article ಮಕ್ಕಳ ಕಲಾ ಲೋಕದ ‘ಸಾಹಿತ್ಯ ತಾರೆ ಪ್ರಶಸ್ತಿ’ ಘೋಷಣೆ
    roovari

    Add Comment Cancel Reply


    Related Posts

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.