Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದ ಸೃಜನಾ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವದ ನುಡಿ ಸಂಭ್ರಮ | ನವೆಂಬರ್ 24
    Awards

    ಧಾರವಾಡದ ಸೃಜನಾ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವದ ನುಡಿ ಸಂಭ್ರಮ | ನವೆಂಬರ್ 24

    November 23, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು (ರಿ.) ಬೆಂಗಳೂರು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ನುಡಿ ಸಂಭ್ರಮ -2024 ಪ್ರಥಮ ರಾಜ್ಯ ಮಟ್ಟದ ಕವಿಪೀಠ ಮಹಾಸಮ್ಮೇಳನ ಕಾರ್ಯಕ್ರಮವನ್ನು ದಿನಾಂಕ 24 ನವೆಂಬರ್ 2024ರಂದು ಬೆಳಿಗ್ಗೆ 10-30 ಗಂಟೆಗೆ ಧಾರವಾಡದ ಕರ್ನಾಟಕ ಕಾಲೇಜು ಆವರಣದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಖ್ಯಾತ ಸಾಹಿತಿಗಳು ಸುಪ್ರಸಿದ್ಧ ವಕೀಲರು ರಾಷ್ಟ್ರೀಯ ಅಂತ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ಮಲ್ಲಿಕಾರ್ಜುನ ಗ. ಭೃಂಗಿಮಠ ಇವರು ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವರು.

    ಬೆಳಿಗ್ಗೆ 8-30 ಗಂಟೆಯಿಂದ ನಾಡ ಧ್ವಜಾರೋಹಣ ಮತ್ತು ಪರಿಷತ್ತಿನ ಧ್ವಜಾರೋಹಣ, ನಾಡದೇವಿ ಭುವನೇಶ್ವರಿ ಮಾತೆ ಭಾವಚಿತ್ರ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಪರಮ ಪೂಜ್ಯ ಶ್ರೀ ಮ.ನಿ.ಪ್ರ. ಕುಮಾರ ವಿರೂಪಾಕ್ಷೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಧಾರವಾಡದ ಕ್ಲಾಸಿಕ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀ ಲಕ್ಷ್ಮಣ ಎಲ್. ಉಪ್ಪಾರ ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಚ್. ಚನ್ನೂರ ಇವರು ಸಮ್ಮೇಳನಾಧ್ಯಕ್ಷರ ಬದು-ಬರಹ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ.

    ಮಧ್ಯಾಹ್ನ 01-30 ಗಂಟೆಗೆ ನಡೆಯಲಿರುವ ಸಮ್ಮೇಳನಾಧ್ಯಕ್ಷರಿಗೆ ಪುಸ್ತಕ ತುಲಾಭಾರ ಕವಿಪೀಠ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾವ್ಯ, ರಾಗ, ನೃತ್ಯ ಮತ್ತು ಕುಂಚ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ರಾಷ್ಟ್ರ, ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ಕಾವಿ ಕಲೆ’ಯ ಕರಿತು ಸಂವಾದ | ನವೆಂಬರ್ 24   
    Next Article “ಸಿನ್ಸ್ 1999 ಶ್ವೇತಯಾನ- 78” ಕಾರ್ಯಕ್ರಮ ಸಂಪನ್ನ
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.