Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ
    Literature

    ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ

    July 21, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಅಮು೦ಜೆಯಲ್ಲಿ ಇತ್ತೀಚಿಗೆ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ ದಿನಾಂಕ : 15-07-2023ರಂದು ನಡೆಯಿತು.

    ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್‌ ಕಾರ್ಯಕ್ರಮ ಉದ್ಘಾಟಿಸಿ, “ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯಲ್ಲಿರುವ ಹಿರಿಯ ಸಾಹಿತಿಗಳಾದ ಪ್ರೊ. ಕೆ.ಟಿ. ಗಟ್ಟಿ, ಡಾ. ವಾಮನ ನಂದಾವರ, ಶ್ರೀ ಸದಾನಂದ ಸುವರ್ಣ ಹಾಗೂ ಶ್ರೀ ಕೇಶವ ಕುಡ್ಲ ಇವರುಗಳ ಮನೆಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿ ಸಾಂತ್ವನ ಹೇಳಲಾಯಿತು. ನಿರಂತರ ಕಾರ್ಯಕ್ರಮದ ಮೂಲಕ ಸಾಹಿತ್ಯವನ್ನು ಮನೆ, ಮನೆಗೆ ಪರಿಚಯಿಸುವ ಕಾರ್ಯದಲ್ಲಿ ಕಸಾಪ ನಿರತವಾಗಿದೆ. ಸಮ್ಮೇಳನದ ದಾಖಲೀಕರಣ ಮತ್ತು ಇದನ್ನು ಶಾಶ್ವತವಾಗಿ ನೆನಪಿನಲ್ಲಿಡುವ ನಿಟ್ಟಿನಲ್ಲಿ ಸ್ಮರಣ ಸಂಚಿಕೆಯ ಅಗತ್ಯವಿದೆ. ಬಹುತೇಕ ತಾಲೂಕಿನ ಸಾಹಿತ್ಯ ಸಮ್ಮೇಳನಗಳ ಸ್ಮರಣ ಸಂಚಿಕೆ ಬಿಡುಗಡೆಯಾಗಿದ್ದು, ಶೀಘ್ರವೇ ಜಿಲ್ಲಾ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಯಾಗಲಿದೆ” ಎಂದರು.

    ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಎ.ಮಂಜಯ್ಯ ಶೆಟ್ಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ. ಬಾಲಕೃಷ್ಣ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ವಿಶ್ರಾಂತ ಮುಖ್ಯೋಪಾಧ್ಯಾಯಿನಿ ಲುವಿಝ ಕುಟಿನ್ಹೊ, ಉಪನ್ಯಾಸಕರಾದ ಅಬ್ದುಲ್ ರಝಾಕ್ ಅನಂತಾಡಿ, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಮೇಶ್ ಸಾಲಿಯಾನ್ ಬೆಂಜನಪದವು, ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ, ಅಬ್ದುಲ್ ರಹಿಮಾನ್ ಡಿ.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

    22ನೇ ಬಂಟ್ವಾಳ ತಾಲೂಕು ಕಸಾಪ ಸಮ್ಮೇಳನದ ಪ್ರಧಾನ ಸಂಚಾಲಕ ಅಬುಬಕ್ಕರ್ ಅಮ್ಮುಂಜೆ ಪ್ರಸ್ತಾವನೆಗೈದರು. ರಮಾನಂದ ನೂಜಿಪಾಡಿ ಸ್ವಾಗತಿಸಿ, ರವೀಂದ್ರ ಕುಕ್ಕಾಜೆ ನಿರೂಪಿಸಿ, ವಿ.ಸುಬ್ರಹ್ಮಣ್ಯ ಭಟ್‌ ವಂದಿಸಿದರು. ಇದಕ್ಕೂ ಮೊದಲು ಜಿಲ್ಲೆಯ ಪ್ರಸಿದ್ಧ ಅರ್ಥಧಾರಿಗಳಿಂದ ‘ಶರಸೇತು ಬಂಧನ’ ಯಕ್ಷಗಾನ ತಾಳಮದ್ದಳೆ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಚನ್ನರಾಯಪಟ್ಟಣದಲ್ಲಿ ಸೋಬಾನೆ ಪದಗಳ ಕಲಿಕಾ ತರಬೇತಿ
    Next Article ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ
    roovari

    Add Comment Cancel Reply


    Related Posts

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.