Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಳ್ಳಾಲ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಕನ್ನಡ ಸಂಭ್ರಮ’
    Bharathanatya

    ಉಳ್ಳಾಲ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಕನ್ನಡ ಸಂಭ್ರಮ’

    January 5, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಡಿಪು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ಹರೇಕಳ ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಸಂಭ್ರಮ’ ಕಾರ್ಯಕ್ರಮವು ದಿನಾಂಕ 29-12-2023ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ. ಬಿ.ಕೆ. ಸರೋಜಿನಿ ಇವರು “ಕನ್ನಡದಲ್ಲಿರುವ ಶಾಲಾ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಪರಿಭಾಷೆಗಳನ್ನು ನೀಡುವಾಗ ಇಂಗ್ಲಿಷ್ ಮತ್ತು ಸಂಸ್ಕೃತ ಪದಗಳನ್ನು ಹೆಚ್ಚು ಬಳಕೆ ಮಾಡುವುದರಿಂದ ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದ್ದು, ಸರಳ ಕನ್ನಡ ಪದಗಳನ್ನು ಅಳವಡಿಸುವ ಪ್ರಯತ್ನ ನಡೆಯಬೇಕಿದೆ. ಮಕ್ಕಳ ಸಾಹಿತ್ಯ ಎಳೆಯ ಮಕ್ಕಳಲ್ಲಿ ಭಾಷಾಭಿಮಾನವನ್ನೂ, ಕಲ್ಪನಾಶಕ್ತಿಯನ್ನೂ, ಮೌಲ್ಯಗಳನ್ನು ಬಿತ್ತುತ್ತವೆ. ಸರಕಾರ ಮತ್ತು ಸಂಘ ಸಂಸ್ಥೆಗಳು ಮಕ್ಕಳ ಸಾಹಿತ್ಯ ರಚನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು” ಎಂದು ಹೇಳಿದರು.

    ಅತಿಥಿಗಳಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಮಾತನಾಡಿ “ನಾವು ತುಳು, ಬ್ಯಾರಿ, ಕೊಂಕಣಿ ಯಾವ ಭಾಷೆಯನ್ನಾಡುವುದಾದರೂ ಕರ್ನಾಟಕದಲ್ಲಿರುವವರು ಕನ್ನಡಿಗರು ಎಂಬ ಭಾವನೆಯಿಂದ ಇರಬೇಕು. ಕನ್ನಡ ನನಗೆ ಎಲ್ಲವನ್ನೂ ನೀಡಿ ಬೆಳೆಸಿದೆ. ನನಗೆ ದೊರಕಿದ ಎಲ್ಲ ಗೌರವಗಳಿಗೂ ಕನ್ನಡ ನಾಡು ತೋರಿದ ಪ್ರೀತಿಯೇ ಕಾರಣ” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಳ್ಳಾಲ ತಾಲೂಕು ಕ.ಸಾ.ಪ.ದ ಅಧ್ಯಕ್ಷರಾದ ಡಾ‌ ಧನಂಜಯ ಕುಂಬ್ಳೆ ಮಾತನಾಡಿ “ವಿದ್ಯಾರ್ಥಿಗಳು ಎಳವೆಯಲ್ಲಿಯೇ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಪಠ್ಯಕಲಿಕೆಯ ಜೊತೆಗೆ ಸಮಾಜ ಸೇವೆ, ಮಾನವೀಯ ಗುಣಗಳನ್ನು ಹೊಂದಬೇಕು. ಕಿತ್ತಳೆ ಹಣ್ಣು ಮಾರಿ ಬಂದ ದುಡ್ಡನ್ನು ಶಾಲೆ ಕಟ್ಟಲು ವಿನಿಯೋಗಿಸಿದ ಹಾಜಬ್ಬರ ಸೇವಾ ಮನೋಭಾವ ನಮಗೆ ಆದರ್ಶ” ಎಂದರು.

    ಹರೇಕಳ ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿರುವ ಶ್ರೀಮತಿ ಗುಲಾಬಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಹರೇಕಳ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಅಬ್ದುಲ್ ಮಜೀದ್, ಮಾಜಿ ತಾಲೂಕು ಪಂಚಾಯತು ಸದಸ್ಯ ಮುಸ್ತಫಾ ಹರೇಕಳ, ಶಾಲಾ ಮುಖ್ಯೋಪಾಧ್ಯಾಯ ಲಕ್ಷಣ ಕೆ.ವಿ. ಪುದುವಾಳ್, ಕ.ಸಾ.ಪ. ಉಳ್ಳಾಲ ಕಾರ್ಯದರ್ಶಿ ಎಡ್ವರ್ಡ್ ಲೋಬೋ, ಗ್ರಾಮ ಸಂಚಾಲಕರಾದ ಕುಸುಮ ಪ್ರಶಾಂತ ಉಡುಪ, ಅಶ್ವಿನಿ ಉಪಸ್ಥಿತರಿದ್ದರು.

    ಉಳ್ಳಾಲ ತಾಲೂಕು ಕಸಾಪದ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ.ಸಾ.ಪ.ದ ಫಜೀರು ಗ್ರಾಮ ಸಂಚಾಲಕಿ ರೇಷ್ಮಾ ನಿರ್ಮಲ್ ಭಟ್ ಸ್ವಾಗತಿಸಿ, ನಿರ್ಮಲ್ ಭಟ್ ಧನ್ಯವಾದ ಸಮರ್ಪಣೆ ಮಾಡಿದರು. ಶಾಲಾ ಅಧ್ಯಾಪಕಿ ಅಕ್ಷತಾ ಎಲ್. ನಾಯಕ್ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

    ಕೊನೆಯಲ್ಲಿ ಮಂಗಳೂರಿನ ಕನ್ನಡ ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನೃತ್ಯ ಲಹರಿ ನಾಟ್ಯಾಲಯ (ರಿ) ಫಜೀರು ಇದರ ನಿರ್ದೇಶಕಿಯಾಗಿರುವ ವಿದುಷಿ ರೇಷ್ಮಾ ನಿರ್ಮಲ್ ಭಟ್ ಮತ್ತು ಶಿಷ್ಯ ವೃಂದದಿಂದ ಕನ್ನಡಗೀತೆಗಳ ‘ನೃತ್ಯಾನುಸಂಧಾನ ಕನ್ನಡ ವೈಭವ’ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleವ್ಯಕ್ತಿ ಪರಿಚಯ – ಲಕ್ಷ್ಮೀಶ ತೋಳ್ಪಾಡಿ ಎಂಬ ಜಿಜ್ಞಾಸು
    Next Article ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    ಯುವ ನೃತ್ಯೋತ್ಸವ-2025| ಜೂನ್ 08

    June 4, 2025

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.