ಬೆಂಗಳೂರು : ಶಾಂಡಿಲ್ಯಾ ಐ.ಎನ್.ಸಿ. ಪಸ್ತುತ ಪಡಿಸುವ ‘ಕನ್ನಡ ನಾಟಕೋತ್ಸವ’ ಸಮಾರಂಭವನ್ನು ದಿನಾಂಕ 13 ಸೆಪ್ಟೆಂಬರ್ 2025ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದೆ.
ಸಂಜೆ 7-30 ಗಂಟೆಗೆ ನಟನ ಪಯಣ ರೆಪರ್ಟರಿ ತಂಡದ ಪ್ರಯೋಗ ‘ಕಣಿವೆಯ ಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕದ ಮೂಲ ರಚನೆ ಅತೊಲ್ ಫ್ಯೂಗಾರ್ಡ್ ಇವರದ್ದು, ಕನ್ನಡಕ್ಕೆ ಡಾ. ಮೀರಾ ಮೂರ್ತಿ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಇವರು ಸಂಗೀತ ನೀಡಿದ್ದು, ಡಾ. ಶ್ರೀಪಾದ ಭಟ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೇಘ ಸಮೀರ ಮತ್ತು ದಿಶಾ ರಮೇಶ್ ಅಭಿನಯಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777, 9480468327 ಮತ್ತು 9845595505 ಸಂಪರ್ಕಿಸಿರಿ.