Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಶಾಲನಗರದಲ್ಲಿ ಕ.ಸಾ.ಪ. ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ
    Kannada

    ಕುಶಾಲನಗರದಲ್ಲಿ ಕ.ಸಾ.ಪ. ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ

    October 21, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ : 50 ಹಾಗೂ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 11 ನವೆಂಬರ್ 2024ರಂದು ಕುಶಾಲನಗರ ಪಟ್ಟಣದ ರಥಬೀದಿ ಹಾಗೂ ಪ್ರವಾಸಿ ಮಂದಿರ (ಐ.ಬಿ.) ರಸ್ತೆಯಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಮೂಲಕ ಕನ್ನಡದ ಕಹಳೆಯನ್ನು ಮೊಳಗಿಸಲು ನಿರ್ಧಾರ ಕೈಗೊಳ್ಳಲಾಗಿದೆ.

    ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿನಾಂಕ 19 ಅಕ್ಟೋಬರ್ 2024ರಂದು ನಡೆದ ಸಭೆಯಲ್ಲಿ ಎಲ್ಲರೂ ಜತೆಗೂಡಿ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಒಕ್ಕೊರಲಿನಿಂದ ನಿರ್ಧಾರ ತೆಗೆದುಕೊಳ್ಳಲಾಯಿತು. ಉದ್ದೇಶಿತ ಕಂಠ ಗಾಯನ ಕಾರ್ಯಕ್ರಮದ ಯಶಸ್ಸಿಗೆ ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ಸಹಭಾಗಿತ್ವದಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ವಿನೂತನವಾಗಿ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲಿನಿಂದ ನಿರ್ಧಾರ ಕೈಗೊಂಡು ಕಂಠ ಗಾಯನವನ್ನು ಯಶಸ್ವಿಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.

    ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, “ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಐದು ಸಹಸ್ರ ಮಂದಿ ಒಂದೆಡೆ ಸೇರಿ ಕಂಠ ಗಾಯನ ಹಾಡುವ ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವ ಮೂಲಕ ಕನ್ನಡದ ಕಹಳೆಯನ್ನು ಮೊಳಗಿಸಬೇಕು. ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ, ಸಾಹಿತ್ಯ-ಪರಂಪರೆಯನ್ನು ಎತ್ತಿಹಿಡಿಯುವ ಕೆಲಸಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು.‌ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಎಲ್ಲಾ ಸಂಘ-ಸಂಸ್ಥೆಗಳು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಮತ್ತು ನಾಗರಿಕರು ಕೈಜೋಡಿಸಬೇಕು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಇವರನ್ನು ಆಹ್ವಾನಿಸಲಾಗುವುದು. ಈ ಸಂಬಂಧ ತಕ್ಷಣದಲ್ಲೇ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಸಭೆ‌ ನಡೆಸಿ ಕಾರ್ಯಕ್ರಮದ ಅಂತಿಮ ರೂಪುರೇಷೆ ಕುರಿತು ಚರ್ಚಿಸಲಾಗುವುದು” ಎಂದು ಹೇಳಿದರು.

    ಕಂಠ ಗಾಯನ ಕಾರ್ಯಕ್ರಮದ ಸಂಘಟನೆ ಹಾಗೂ ರೂಪುರೇಷೆ ಕುರಿತು ವಿಷಯ ಮಂಡಿಸಿದ ಕುಶಾಲನಗರ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಕೆ.ಎಸ್. ನಾಗೇಶ್ ಮಾತನಾಡಿ “ಕ.ಸಾ.ಪ.ವತಿಯಿಂದ ಹಮ್ಮಿಕೊಂಡಿರುವ ಕಂಠ ಗಾಯನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದರು. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ “ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕಂಠ ಗಾಯನದ ಮೂಲಕ ಎಲ್ಲೆಡೆ ಕನ್ನಡದ ಕಂಪು ಹರಡಿಸುವ ಮೂಲಕ ಎಲ್ಲರೂ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು” ಎಂದು ಮನವಿ ಮಾಡಿದರು.

    ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಕುರಿತು ಮಾಹಿತಿ ನೀಡಿದ ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, “ಎಲ್ಲರೂ ಶಿಸ್ತುಬದ್ಧವಾಗಿ ಕನ್ನಡ ಬಾವುಟ ಹಿಡಿದು ಕನ್ನಡದ ಕಂಪನ್ನು ಮೂಡಿಸುವ ಮೂಲಕ ಕಾರ್ಯಕ್ರಮದ ಯಶಸ್ವಿ ಸಂಘಟನೆಗೆ ವಿವಿಧ ಉಪ ಸಮಿತಿಗಳಿಗೆ ಜವಾಬ್ದಾರಿ ಕೆಲಸ ಹಂಚಿಕೆ ಮಾಡುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಕಾರ್ಯಕ್ರಮದ ಯಶಸ್ಸು ಸಾಧ್ಯ” ಎಂದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, “ಕಂಠ ಗಾಯನ ಕಾರ್ಯಕ್ರಮವು ವಿನೂತನ ಪ್ರಯೋಗವಾಗಿದ್ದು, ಇದೊಂದು ಸಂಗೀತ ಕ್ಷೇತ್ರದಲ್ಲಿ ಕ್ರಾಂತಿಕಾರಿ ಮೈಲಿಗಲ್ಲಾಗಲಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು” ಎಂದರು.

    ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಕುರಿತು ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಉದ್ಯಮಿ ಎಂ.ಕೆ. ದಿನೇಶ್ ಮಾಹಿತಿ ನೀಡಿದರು. ಜಿಲ್ಲಾ ಕ.ಸಾ.ಪ. ಸಮಿತಿಯ ಸದಸ್ಯೆ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ತಾಲೂಕು ಕ.ಸಾ.ಪ. ಕಾರ್ಯದರ್ಶಿಗಳಾದ ಟಿ.ವಿ. ಶೈಲಾ, ಎಸ್. ನಾಗರಾಜ್, ಕೋಶಾಧಿಕಾರಿ ಕೆ.ವಿ. ಉಮೇಶ್, ಸಮಿತಿಯ ಪ್ರಮುಖರಾದ ಎಂ.ಎನ್. ಕಾಳಪ್ಪ, ಬಿ.ಎಸ್. ಪರಮೇಶ್, ಡಿ.ಎಸ್. ಸೋಮಶೇಖರ್, ಟಿ.ಬಿ. ಮಂಜುನಾಥ್, ವಿವಿಧ ಸಂಸ್ಥೆಗಳ ಪ್ರಮುಖರಾದ ದೀಪಾ ಪೂಜಾರಿ, ಟಿ.ಜಿ. ಪ್ರೇಮಕುಮಾರ್, ಜಕ್ರಿಯಾ, ಎಂ.ಡಿ. ಕೃಷ್ಣಪ್ಪ, ಎಸ್. ಶಾಂಭ ಶಿವಮೂರ್ತಿ, ಡಿ.ವಿ. ರಾಜೇಶ್, ನಾಸೀರ್, ಲತಾ ರಮೇಶ್, ಚಿತ್ರ ರಮೇಶ್, ರೋಶನ್ ಇನ್ನೂ ಮುಂತಾದ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಉರೂಬ್ ಅವರ ಸುಂದರಿಯರು ಸುಂದರರು
    Next Article ರಂಗನಟ ಸುರೇಶ್ ಕುಮಾರ್ ಆರ್.ಎಸ್. ‘ಕರ್ನಾಟಕ ಮುಕುಟಮಣಿ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 20  

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.