Subscribe to Updates

    Get the latest creative news from FooBar about art, design and business.

    What's Hot

    ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರಕಟ

    January 24, 2026

    ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ‘ಗಾನ ಶಾರದೆಗೆ ನಮನ’ | ಜನವರಿ 26

    January 24, 2026

    ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ‘ಸಂಗೀತೋತ್ಸವ-2026’ | ಜನವರಿ 25

    January 24, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕಣ್ಣಿಗೆ ಕಾಣದ್ದು…  ಮನಸ್ಸನ್ನು ಕಾಡಿದ್ದು’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ 
    Book Release

    ‘ಕಣ್ಣಿಗೆ ಕಾಣದ್ದು…  ಮನಸ್ಸನ್ನು ಕಾಡಿದ್ದು’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ 

    August 21, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಪುತ್ತೂರು : ನ್ಯಾಯವಾದಿ, ಬರಹಗಾರ ಭಾಸ್ಕರ ಕೋಡಿಂಬಾಳ ಇವರು ಬರೆದ ‘ಕಣ್ಣಿಗೆ ಕಾಣದ್ದು.. ಮನಸ್ಸನ್ನು ಕಾಡಿದ್ದು’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 19 ಆಗಸ್ಟ್ 2024ರಂದು ಪುತ್ತೂರು ನ್ಯಾಯಾಲಯದ ಸಂಕೀರ್ಣ, ಪರಾಶರ ಸಭಾಂಗಣದಲ್ಲಿ ನಡೆಯಿತು.
    ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಪಿ. ಕೃಷ್ಣ ಭಟ್ ಅವರು ಕೃತಿ ಲೋಕಾರ್ಪಣೆ ಮಾಡಿ, “ಈ ಕೃತಿಯಲ್ಲಿ ಹಿಂದಿನ ಕಾಲದ ದಕ್ಷಿಣ ಕನ್ನಡ ಜಿಲ್ಲೆಯ ವಾಸ್ತವ ಚಿತ್ರಣವನ್ನು ಕಾಣಬಹುದು. ನಮ್ಮ ನಮ್ಮ ಆಸ್ತಿಕತೆ, ಸಾಮಾಜಿಕ ಸಾಮರಸ್ಯ, ನೆಗೆಟಿವ್ ಇಲ್ಲದ ಭಾಂದವ್ಯಗಳನ್ನು ಅಚ್ಚೊತ್ತಿರುವ ಕೃತಿ ಇದಾಗಿದೆ. ಇಂದಿನ ದಿನಗಳಲ್ಲಿ ನಾವು ಮಾಡಿದ ಕೆಲವೊಂದು ಪಾಪಗಳನ್ನು ಕಳೆಯಲೆಂದೇ ದೇವಸ್ಥಾನಕ್ಕೆ ಹೋಗುವ ಚಿಂತನೆ, ಹಿಂದಿನ ಕಾಲದ ನಿಸ್ವಾರ್ಥತೆಯ ಆಸ್ತಿಕ ಭಾವದ ನಡುವೆ ಅಜಗಜಾಂತರ ವ್ಯತ್ಯಾಸ ಓದುಗರ ಮನಸ್ಸಿಗೆ ಕಾಡುತ್ತದೆ. ಇಂದು ವಕೀಲರು ಸಾಹಿತ್ಯ, ಸಂಗೀತದಿಂದ ‘ಹೊರತಾದ’ ಬದುಕು ಕಟ್ಟಿಕೊಳ್ಳುವುದು ಕಷ್ಟಸಾಧ್ಯ. ಅವರೊಳಗೊಂದು ಕವಿ ಹೃದಯ ಕಾಣಿಸಿಕೊಂಡಾಗ ಈ ವ್ಯವಸ್ಥೆಯ ರೂಪಕಗಳು ಹುಟ್ಟಿಕೊಳ್ಳುತ್ತವೆ. ಹಾಗಾಗಿ ಬದುಕಿನ ಅರ್ಥ ವಿಶಾಲತೆಯನ್ನು ಪಡೆದುಕೊಳ್ಳುತ್ತದೆ. ಅರ್ಥ ಎಂಬುವುದು ಸ್ಥಾಪಿತವಲ್ಲ. ಅನುಭವಾಧಾರಿತ ನೆಲೆಯಲ್ಲಿ ಅರ್ಥದ ವಿಸ್ತಾರತೆ ಹೆಚ್ಚುತ್ತಲೇ ಹೋಗುತ್ತದೆ. ಈ ನೆಲೆಯಲ್ಲಿ ಕೋಡಿಂಬಾಳ ಅವರ ಕೃತಿ ಇಷ್ಟವಾಗುತ್ತದೆ” ಎಂದರು.
    ಕಾರ್ಯಕ್ರಮದಲ್ಲಿ ಪುತ್ತೂರಿಗೆ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಆಗಮಿಸಿದ ದೇವರಾಜ್ ಅವರನ್ನು ಸನ್ಮಾನಿಸಿ ಸ್ವಾಗತಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಅಧ್ಯಕ್ಷತೆ ವಹಿಸಿದ್ದರು. 5ನೇ ಹೆಚ್ಚುವರಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸರಿತಾ ಡಿ., ನ್ಯಾಯಾಧೀಶ ಪ್ರಿಯಾ ರವಿ ಜೋಗ್ಲೇಕರ್, ಅರ್ಚನಾ ಉನ್ನಿತ್ತಾನ್, ಯೋಗೇಂದ್ರ ಶೆಟ್ಟಿ, ಹಿರಿಯ ನ್ಯಾಯವಾದಿ ಎಂ. ರಾಮ್ ಮೋಹನ್ ರಾವ್, ಹಿರಿಯ ವೈದ್ಯ ಡಾ. ಎ.ಪಿ. ಭಟ್, ‘ಕಣ್ಣಿಗೆ ಕಾಣದ್ದು ಮನಸ್ಸಿಗೆ ಕಾಡಿದ್ದು’ ಕೃತಿಕಾರ ಭಾಸ್ಕರ ಕೋಡಿಂಬಾಳ, ಶುಭಲತಾ ಭಾಸ್ಕರ್ ಉಪಸ್ಥಿತರಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಮೋನಪ್ಪ ಎಂ. ಸ್ವಾಗತಿಸಿ, ಕಾರ್ಯದರ್ಶಿ ಚಿನ್ಮಯ್ ರೈ ಈಶ್ವರಮಂಗಲ ನೂತನ ನ್ಯಾಯಾಧೀಶರ ಪರಿಚಯ ಮಾಡಿದರು. ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ ಕೃತಿಯ ಕುರಿತು ಆಶಯ ಮಾತುಗಳನ್ನಾಡಿದರು. ವಕೀಲ ಮಹೇಶ್ ಕೆ. ಸವಣೂರು ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ | ಆಗಸ್ಟ್ 25
    Next Article ಬೆಂಗಳೂರಿನಲ್ಲಿ ‘ಸುದರ್ಶನ ಗರ್ವಭಂಗ’ ಯಕ್ಷಗಾನ 
    roovari

    Comments are closed.

    Related Posts

    ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರಕಟ

    January 24, 2026

    ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ‘ಗಾನ ಶಾರದೆಗೆ ನಮನ’ | ಜನವರಿ 26

    January 24, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’ ಕಥಾ ಸಂಕಲನ

    January 23, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.