Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕೊಂಕಣಿ ಕಲೋತ್ಸವ- 2025’

    December 19, 2025

    ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ

    December 19, 2025

    ಶಿವಮೊಗ್ಗದಲ್ಲಿ 244ನೇ ‘ಸಾಹಿತ್ಯ ಹುಣ್ಣಿಮೆ’ಯಲ್ಲಿ ಸಾಹಿತ್ಯ ಸಂಭ್ರಮ | ಡಿಸೆಂಬರ್ 20

    December 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ತಾಳಮದ್ದಳೆ ಅರ್ಥಧಾರಿ ಕಾಂತ ರೈ ಸಂಸ್ಮರಣೆ
    Commemoration

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ತಾಳಮದ್ದಳೆ ಅರ್ಥಧಾರಿ ಕಾಂತ ರೈ ಸಂಸ್ಮರಣೆ

    November 28, 2025Updated:November 29, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ಯಕ್ಷಭಾರತಿ (ರಿ.) ಪುತ್ತೂರು ಇವರ ಸಹಯೋಗದೊಂದಿಗೆ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ 13ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ನಾಲ್ಕನೇ ದಿನ ಹಿರಿಯ ವಿದ್ವಾಂಸ ಮತ್ತು ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ದಿ. ವಿದ್ವಾನ್ ಕೆ. ಕಾಂತ ರೈ ಮೂಡುಬಿದಿರೆ ಇವರ ಸಂಸ್ಮರಣಾ ಕಾರ್ಯಕ್ರಮ ದಿನಾಂಕ 26 ನವೆಂಬರ್ 2025ರಂದು ನಡೆಯಿತು.

    ಮಂಗಳೂರು ಎಸ್.ಕೆ. ಗೋಲ್ಡ್ ಸ್ಮಿತ್ ಕೋ-ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾದ ಉಪೇಂದ್ರ ಆಚಾರ್ಯ ಪೆರ್ಡೂರು ಸಂಸ್ಮರಣಾ ಜ್ಯೋತಿ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ಯಕ್ಷಗಾನವನ್ನು ಪ್ರೀತಿಸುವವರು ತಮ್ಮ ಹಿರಿಯರನ್ನು ಯಾವತ್ತೂ ಗೌರವಿಸುತ್ತಾರೆ. ಯಕ್ಷಗಾನ ವಾಙ್ಮಯಕ್ಕೆ ಅಪೂರ್ವ ಕೊಡುಗೆ ನೀಡಿದ ಹಿರಿಯ ಅರ್ಥಧಾರಿ ವಿದ್ವಾನ್ ಕಾಂತ ರೈಯವರ ಬಂಧುಗಳು ಪ್ರತಿವರ್ಷ ಅದ್ದೂರಿ ಕಾರ್ಯಕ್ರಮದ ಮೂಲಕ ಅವರನ್ನು ಸ್ಮರಿಸಿಕೊಳ್ಳುತ್ತಿರುವುದು ಇದಕ್ಕೆ ಜ್ವಲಂತ ಸಾಕ್ಷಿ’ ಎಂದರು. ಉಳ್ಳಾಲ ಬಂಟರ ಸಂಘದ ಅಧ್ಯಕ್ಷ ಕೆ. ರವೀಂದ್ರ ರೈ ಕಲ್ಲಿಮಾರ್ ಸಂಸ್ಮರಣಾ ಭಾಷಣ ಮಾಡಿದರು.

    ಕೆನರಾ ಪದವಿ ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಪ್ರೊ. ಜಿ. ಶಂಕರ ಶೆಟ್ಟಿ, ಲಯನ್ಸ್ ಕ್ಲಬ್ ರೀಜನಲ್ ಅಂಬಾಸಿಡರ್ ಶ್ರೀನಾಥ್ ಕೊಂಡೆ, ಡಿಂಕಿ ಡೈನ್ ಮಾಲಿಕ ಸ್ವರ್ಣ ಸುಂದರ್, ವಿಶ್ವಾಸ್ ಟ್ರಾನ್ಸ್ ಪೋರ್ಟ್ ನ ಗೋಪಾಲ ಶೆಟ್ಟಿ ಅರಿಬೈಲು, ಬ್ರಿಟಿಷ್ ಬಯಾಲಾಜಿಕಲ್ ಸಂಸ್ಥೆಯ ಸಿ.ಯಸ್. ಭಂಡಾರಿ ಇರಾ, ವಿಶಾಲಕೀರ್ತಿ ರೈ ಮೂಡಬಿದಿರೆ ಮುಖ್ಯ ಅತಿಥಿಗಳಾಗಿದ್ದರು.

    ಹಿಂದಿನ ದಿನ ದಿನಾಂಕ 25 ನವೆಂಬರ್ 2025ರಂದು ತನ್ನ 90ನೇ ವಯಸ್ಸಿನಲ್ಲಿ ಅಗಲಿ ಹೋದ ಪ್ರಸಿದ್ಧ ಪ್ರಸಂಗಕರ್ತ, ಶಿಕ್ಷಕ ಹಾಗೂ ಹಿರಿಯ ಕಲಾವಿದ ಕಂದಾವರ ರಘುರಾಮ ಶೆಟ್ಟಿಯವರ ನಿಧನಕ್ಕೆ ಯಕ್ಷಾಂಗಣದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ನುಡಿನಮನ ಸಲ್ಲಿಸಿ, ದಿ. ರಘುರಾಮ ಶೆಟ್ಟರೊಂದಿಗಿನ ತಮ್ಮ ಬಾಂಧವ್ಯ ಹಾಗೂ ಯಕ್ಷಗಾನ ರಂಗಕ್ಕೆ ಸಂದ ಅವರ ಕೊಡುಗೆಯನ್ನು ಸ್ಮರಿಸಿದರು.

    ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಸೇನಾನಿ ಉಳ್ಳಾಲದ ರಾಣಿ ಅಬ್ಬಕ್ಕನ 500ನೇ ವರ್ಷದ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಶಿಕ್ಷಕ ಸಂಘದ ಪ್ರತಿನಿಧಿ ಡಾ. ಮಾಧವ ಎಂ.ಕೆ. ಇವರನ್ನು ಅಭಿನಂದಿಸಲಾಯಿತು. ಅಲ್ಲದೆ ಕಲಾಪೋಷಕ ಉಮೇಶ ಶೆಣೈ ರಾಮನಗರ ಉಪ್ಪಿನಂಗಡಿ ಇವರನ್ನು ಗೌರವಿಸಲಾಯಿತು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ, ಸುಧಾಕರ ರಾವ್ ಪೇಜಾವರ ವಂದಿಸಿ, ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಪದಾಧಿಕಾರಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಸಿದ್ಧಾರ್ಥ ಅಜ್ರಿ ಮತ್ತು ಸುಮಾ ಪ್ರಸಾದ್ ಉಪಸ್ಥಿತರಿದ್ದರು.

    ಬಳಿಕ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ (ರಿ.) ಸಂಯೋಜಿಸಿದ ‘ಶಲ್ಯ ಪರ್ವ’ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಸಂತೋಷ್ ಕುಮಾರ್ ಹರಿಹರ, ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ; ಅರ್ಥಧಾರಿಗಳಾಗಿ ಪ್ರೊ. ಪವನ್ ಕಿರಣ್ ಕೆರೆ (ಶಲ್ಯ), ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ), ಅಂಬಾ ಪ್ರಸಾದ್ ಪಾತಾಳ (ಶಕುನಿ), ಶ್ರೀಧರ ಎಸ್ಪಿ ಸುರತ್ಕಲ್ (ಸಹದೇವ), ಸತೀಶ ಶಿರ್ಲಾಲು (ಕೌರವ), ಜಯರಾಮ ಭಟ್ ದೇವಸ್ಯ (ಧರ್ಮರಾಯ) ಮತ್ತು ಗೀತಾ ಕುದ್ದಣ್ಣಾಯ (ಅಶ್ವತ್ಥಾಮ) ಭಾಗವಹಿಸಿದ್ದರು.

     

    baikady commemoration felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleತಾಳೂರು ಸರಕಾರಿ ಶಾಲೆಯಲ್ಲಿ ಕಾಮತಿಕೂಡಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ
    Next Article ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಕೊಂಕಣಿ ಮತ್ತು ಮರಾಠಿ ಬರಹಗಾರ ಮಹಾಬಲೇಶ್ವರ ಸೈಲ್ ಆಯ್ಕೆ
    roovari

    Add Comment Cancel Reply


    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕೊಂಕಣಿ ಕಲೋತ್ಸವ- 2025’

    December 19, 2025

    ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ

    December 19, 2025

    ಶಿವಮೊಗ್ಗದಲ್ಲಿ 244ನೇ ‘ಸಾಹಿತ್ಯ ಹುಣ್ಣಿಮೆ’ಯಲ್ಲಿ ಸಾಹಿತ್ಯ ಸಂಭ್ರಮ | ಡಿಸೆಂಬರ್ 20

    December 19, 2025

    ಎಸ್.ವಿ. ನಾರಾಯಣಸ್ವಾಮಿ ರಾವ್ ಇವರ ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ | ಡಿಸೆಂಬರ್ 21

    December 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.