Subscribe to Updates

    Get the latest creative news from FooBar about art, design and business.

    What's Hot

    ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15

    January 2, 2026

    ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

    January 2, 2026

    ‘ಹಿರಿಯೆರೊಟ್ಟುಗೊಂಜಿ ದಿನ’ ಕಾರ್ಯಕ್ರಮದಲ್ಲಿ ಹಾಡಿ, ಕುಣಿದು ಸಂಭ್ರಮಿಸಿದ ಹಿರಿಯರು

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
    News

    ಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ

    February 28, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    28 ಫೆಬ್ರವರಿ 2023, ಕಾಂತಾವರ: “ಕವಿಯಾದವನಿಗೆ ಸಮಾಜದ ಸಂಕಟಗಳಿಗೆ ಪರಿಹಾರ ಹುಡುಕುವ ಮತ್ತು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಇದೆ ಎಂದು ರಾಯಚೂರಿನ ಕವಿ ಡಾ. ಚಿದಾನಂದ ಸಾಲಿ ಹೇಳಿದರು.
    ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಕಾಂತಾವರ ಕನ್ನಡ ಭವನದಲ್ಲಿ 26-02-2023ರಂದು ನಡೆದ ಮುದ್ದಣ ಸಾಹಿತ್ಯೋತ್ಸವ- 43ನೇ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುದ್ದಣ ಕಾವ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದು, ಈ ಕಾರ್ಯಕ್ರಮವನ್ನು ವಿಶ್ರಾಂತ ಪ್ರಾಂಶುಪಾಲರಾದ ಕಲಾವಿದ ಪ್ರೊ. ಎಂ.ಎಲ್. ಸಾಮಗ ಉದ್ಘಾಟಿಸಿದರು. ಕವಿ ರಾಯಚೂರಿನ ಡಾ. ಚಿದಾನಂದ ಸಾಲಿ ಅವರಿಗೆ “ಮುದ್ದಣ ಕಾವ್ಯ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಂಘದಲ್ಲಿ ಹೊಸತಾಗಿ ಸ್ಥಾಪನೆಯಾದ “ಗಮಕ ಕಲಾ ಪ್ರವಚನ ಪ್ರಶಸ್ತಿ”ಯನ್ನು ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರಿಗೆ, “ಗಮಕ ವಾಚನ ಪ್ರಶಸ್ತಿ” ಮಂಜುಳಾ ಸುಬ್ರಮಣ್ಯ ಮಂಚಿ ಅವರಿಗೆ ಹಾಗೂ “ಕಾರ್ಕಳದ ಶಿಲ್ಪಿ ಶಾಮರಾಯ ಆಚಾರ್ಯ ಸ್ಮಾರಕ ಶಿಲ್ಪಕಲಾ ಪ್ರಶಸ್ತಿ”ಯನ್ನು ಬಿ.ಎಸ್. ಭಾಸ್ಕರ ಆಚಾರ್ಯ ಕಾರ್ಕಳ ಅವರಿಗೆ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಡಾ. ಚಿದಾನಂದ ಸಾಲಿ ಅವರ “ಕನ್ನಡಿಯಲ್ಲಿ ಮನುಷ್ಯ ಮಾತ್ರ” ಕವನ ಸಂಕಲನ ಬಿಡುಗಡೆಗೊಳಿಸಿದರು.
    ಮೂಡುಬಿದಿರೆ ತಾಲೂಕು ಕ.ಸಾ.ಪ. ಅಧ್ಯಕ್ಷ ಪ್ರೊ. ವೇಣುಗೋಪಾಲ ಶೆಟ್ಟಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ಸತೀಶ್ ಕುಮಾರ್ ಕೆಮ್ಮಣ್ಣು, ಯಾಮಿನಿ ಭಟ್ ಉಡುಪಿ ಮತ್ತು ಶಿಲ್ಪಿ ಕೆ. ಸತೀಶ್ ಆಚಾರ್ಯ ಕಾರ್ಕಳ ಅವರನ್ನು ಗೌರವಿಸಲಾಯಿತು. ಕನ್ನಡ ಸಂಘದ ಕಾರ್ಯಾಧ್ಯಕ್ಷ ಡಾ. ನಾ. ಮೊಗಸಾಲೆ ಸ್ವಾಗತಿಸಿ, ಉಪಾಧ್ಯಕ್ಷ ಸತೀಶ್ ಕುಮಾರ್ ಕೆಮ್ಮಣ್ಣು ವಂದಿಸಿದರು. ಬಳಿಕ ‘ಪಂಪ ಭಾರತ ಭೀಷ್ಮ ಸೇನಾಪತ್ಯ’ ವಿಷಯದಲ್ಲಿ ಗಮಕ ವಾಚನ, ಪ್ರವಚನ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೊಡಿನಲ್ಲಿ ದಿ.ಪ್ರೊ. ಪಿ.ಸುಬ್ರಾಯ ಭಟ್ ಜನ್ಮ ಶತಮಾನೋತ್ಸವವನ್ನು ಉದ್ಘಾಟನೆ
    Next Article ಮಂಗಳೂರಿನ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ
    roovari

    Add Comment Cancel Reply


    Related Posts

    ಶ್ರೀಲಂಕಾದ ಮಾಧ್ಯಮ ತಜ್ಞರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’ ಪ್ರದಾನ

    December 31, 2025

    ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ

    December 30, 2025

    ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಡಿಸೆಂಬರ್ 28

    December 27, 2025

    ನಾದನೃತ್ಯ ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ವರ್ಣಿಕಾ ಆಚಾರ್ಯ ನೃತ್ಯ ಪ್ರದರ್ಶನ | ಡಿಸೆಂಬರ್ 25

    December 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.