Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೋಟದಲ್ಲಿ ಕಾರಂತ ಪುರಸ್ಕಾರ ಪ್ರದಾನ ಸಮಾರಂಭ
    Awards

    ಕೋಟದಲ್ಲಿ ಕಾರಂತ ಪುರಸ್ಕಾರ ಪ್ರದಾನ ಸಮಾರಂಭ

    October 24, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಗೆಳೆಯರ ಬಳ ದಿನಾಂಕ ಗ ಕಾರ್ಕಡ ಇವರ ಆಶ್ರಯದಲ್ಲಿ ಡಾ.ಕೋಟ ಶಿವರಾಮ ಕಾರಂತ ಜನ್ಮದಿನಾಚರಣ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭ ದಿನಾಂಕ  17  ಅಕ್ಟೋಬರ್ 2025ರ ಶನಿವಾರದಂದು ಗಿರಿಜಾ ಕಲ್ಯಾಣಮಂಟಪದಲ್ಲಿ ನಡೆಯಿತು.
    ಕಾರ್ಯಕ್ರಮಾವನ್ನು ಉದ್ಘಾಟಿಸಿದ ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ “ಕಾರಂತರು ತಮ್ಮ ಜೀವಿತ ಅವಧಿಯಲ್ಲಿ ನಡೆನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣೆದಾಯಕ, ಕಾರಂತರು ವಿಶ್ವಮಟ್ಟದಲ್ಲಿ ತಮ್ಮ ಸಾಹಿತ್ಯ, ವಿವಿಧ ರಂಗವನ್ನು ಪರಿಚಯಿಸಿಕೊಂಡವರು ಅಂತಹ ಮಹಾನ್ ಚೇತನ ಹೆಸರಿನಲ್ಲಿ ಪುರಸ್ಕಾರ ಏರ್ಪಡಿಸಿದ ಗೆಳೆಯರ ಬಳಗಕ್ಕೆ ಕೃತಜ್ಞತೆ ಸಲ್ಲಿಸಬೇಕು.” ಎಂದು ಹೇಳಿದರು.
    ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನನೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಹಿತಿ ಎಚ್. ಶಕುಂತಲ ಭಟ್ ಹಳೆಯಂಗಡಿ ಇವರಿಗೆ ಗೆಳೆಯರ ಬಳಗದ ಕಾರಂತ ಪುರಸ್ಕಾರ ನೀಡಲಾಯಿತು. ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವ ಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ಕಾರಂತ ಸಂಸ್ಮರಣೆ ಗೈದರು. ಮುಖ್ಯ ಅಭ್ಯಾಗತರಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ್ ನಾವಡ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ. ಮಯ್ಯ, ಕೋಟ ಸಿ. ಎ. ಬ್ಯಾಂಕ್ ಇದರ ಸಿ. ಇ. ಒ. ಆದ ಶರತ್ ಕುಮಾರ್ ಶೆಟ್ಟಿ, ದಂತವೈದ್ಯೆ ಸರಿತಾ ಉಪಾಧ್ಯಾ, ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯ ರಾಜು ಪೂಜಾರಿ, ಮಂಗಳೂರು ಕಲಾ ಸಾಹಿತಿ ಎಚ್. ಜನಾರ್ದನ ಹಂದೆ ಉಪಸ್ಥಿತರಿದ್ದರು.
    ಗೆಳೆಯರ ಬಳಗದ ಅಧ್ಯಕ್ಷರಾದ ಕೆ. ತಾರಾನಾಥ ಹೊಳ್ಳ ಸ್ವಾಗತಿಸಿ, ಮಂಜುನಾಥ್ ಉಪಾಧ್ಯಾ ಪುರಸ್ಕಾರ ಪತ್ರವನ್ನು ವಾಚಿಸಿ, ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ ನಿರೂಪಿಸಿ, ಕಾರ್ಯದರ್ಶಿ ನಾಗರಾಜ್ ಉಪಾಧ್ಯಾ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನ ನಮನ, ಶ್ರೀದೇವಿ ಯಕ್ಷಕಲಾ ವೃಂದದಿಂದ ಬಡಗುತಿಟ್ಟು ಶೈಲಿಯ ಯಕ್ಷಗಾನ ಶ್ರೀ ಕೃಷ್ಣ ತುಲಾಭಾರ ಪ್ರದರ್ಶನಗೊಂಡಿತು.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನ | ಅಕ್ಟೋಬರ್ 25
    Next Article ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ‘ಭರತಮುನಿ ಜಯಂತ್ಯುತ್ಸವ’ | ಅಕ್ಟೋಬರ್ 26
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.