Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರಿಗೆ ‘ಕರಾವಳಿ ರತ್ನ ಪ್ರಶಸ್ತಿ’
    Awards

    ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರಿಗೆ ‘ಕರಾವಳಿ ರತ್ನ ಪ್ರಶಸ್ತಿ’

    December 10, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಇದರ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಕಾರ್ಯಕ್ರಮ ದಿನಾಂಕ 26 ನವೆಂಬರ್ 2024ರಂದು ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ನಾಟ್ಯರಂಗ ನೃತ್ಯ ಸಂಸ್ಥೆಯ ನಿರ್ದೇಶಕಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರಿಗೆ ‘ಕರಾವಳಿ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
    ಸಾಂಪ್ರದಾಯಿಕ ಶಾಸ್ತ್ರೀಯ ನೃತ್ಯ ಹಾಗೂ ಆಧುನಿಕ ಸಂವೇದನೆಯ ರಂಗಭೂಮಿ ಕ್ಷೇತ್ರಗಳಲ್ಲಿ ಅನುಸಂಧಾನ ನಡೆಸಿ ಹಲವಾರು ಪ್ರತಿಷ್ಠಿತ ವೇದಿಕೆಗಳಲ್ಲಿ ವೈಯುಕ್ತಿಕ ಹಾಗೂ ತಮ್ಮ ತಂಡದೊಂದಿಗೆ ನೃತ್ಯ, ನೃತ್ಯ ರೂಪಕ, ದೃಶ್ಯ ರೂಪಕ, ನಾಟಕ ಪ್ರದರ್ಶನಗಳನ್ನು ನೀಡುತ್ತಾ ತಮ್ಮ ಸೃಜನಶೀಲತೆಯಿಂದ ರಂಗಭೂಮಿ ಹಾಗೂ ನಾಟ್ಯ ಕ್ಷೇತ್ರವನ್ನು ಬೆಸುಗೆ ಹಾಕುವ ಹತ್ತಾರು ಪ್ರಯೋಗಗಳಿಗೆ ಇವರು ಭಾಷ್ಯ ಬರೆದಿದ್ದಾರೆ. ಕೇರಳದ ಸಮರ ಕಲೆ ಕಳರಿ ಪಯ್ಯಟ್ಟುವನ್ನು ತಿರುವನಂತಪುರದ ಗೋಪಿನಾಥ್ ಇವರಲ್ಲಿ ಕಲಿತಿರುತ್ತಾರೆ. ಇವರ ಸಂಶೋಧನಾ ಪ್ರವೃತ್ತಿಯನ್ನು ಗುರುತಿಸಿ ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯ ಸಚಿವಾಲಯವು ಜೂನಿಯರ್ ಫೆಲೋಶಿಪ್ ನೀಡಿ ಪ್ರೋತ್ಸಾಹಿಸಿದೆ.
    ಇವರು ದೂರದರ್ಶನದಲ್ಲಿ ಭರತನಾಟ್ಯದ ‘ಬಿ’ ಗ್ರೇಡ್ ಕಲಾವಿದೆ ಹಾಗೂ ನಾಟಕದಲ್ಲಿ ಆಕಾಶವಾಣಿಯ ‘ಬಿ’ ಗ್ರೇಡ್ ಕಲಾವಿದೆಯಾಗಿದ್ದಾರೆ. ನಟಿಯಾಗಿ, ನಿರ್ದೇಶಕಿಯಾಗಿ, ನೃತ್ಯ ಸಂಯೋಜಕಿಯಾಗಿ, ಸಂಗೀತ ನಿರ್ದೇಶಕಿಯಾಗಿ ಸಕ್ರಿಯವಾಗಿ ತೊಡಗಿಕೊಂಡಿರುವ ಇವರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಂಘ ಸಂಸ್ಥೆಗಳ ಹಿರಿ – ಕಿರಿಯ ಕಲಾಸಕ್ತರಿಗೆ ತರಬೇತಿಗಳನ್ನು ನೀಡುತ್ತಿದ್ದಾರೆ. ಹವ್ಯಾಸಿ ಬರಹಗಾರ್ತಿಯಾಗಿಯೂ ಗುರುತಿಸಿಕೊಂಡಿರುವ ಇವರ ಬರಹಗಳು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಹೆಸರಾಂತ ಪತ್ರಿಕೆ ‘ಸುಧಾ ಇವರ ಸಾಧನೆಗಳನ್ನು ಗುರುತಿಸಿ ‘ಹೆಮ್ಮೆಯ ಕನ್ನಡತಿ’ ಪ್ರಶಸ್ತಿ ನೀಡಿ ಗೌರವಿಸಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾಗ್ರಾಮದಲ್ಲಿ ‘ಡಖವ್’ ನಾಟಕ ಪ್ರದರ್ಶನ | ಡಿಸೆಂಬರ್ 13 
    Next Article ಮೂಡಬಿದಿರೆಯಲ್ಲಿ ಉದ್ಘಾಟನೆಗೊಂಡ ವಿವಿಧ  ಮೇಳಗಳು 
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.