Subscribe to Updates

    Get the latest creative news from FooBar about art, design and business.

    What's Hot

    ‘ಕಲಾ ಪರ್ವ’ದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರಸ್ತುತಿ

    December 30, 2025

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ‘ವಿಕಾಸ-2025’ ಕೌಶಲ್ಯ ತರಬೇತಿ

    December 30, 2025

    ಉಡುಪಿಯಲ್ಲಿ ಸಂಪನ್ನಗೊಂಡ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’

    December 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ
    Book Release

    ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ

    December 30, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 28 ಡಿಸೆಂಬರ್ 2025ರ ಭಾನುವಾರ ತಾಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.

    ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಹಾಗೂ ಪತ್ರಕರ್ತರಾದ ಸಿದ್ದಾಪುರ ವಾಸುದೇವ ಭಟ್ “ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ. ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದು” ಎಂದು ಅಭಿಪ್ರಾಯಪಟ್ಟರು.

    ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, “ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು ಈ ಸಂದರ್ಭಗಳಲ್ಲಿ ಸ್ಪಷ್ಟವಾಗುತ್ತದೆ. ತಾಲೂಕಿನಲ್ಲಿ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ಸಾಗುತ್ತಿರುವುದು ಸಂತಸದ ಸಂಗತಿ. ಮುಂದಿನ ಪೀಳಿಗೆಗೆ ಕನ್ನಡ ಸಾಹಿತ್ಯದ ಮೇಲಿನ ಆಸಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತುಗಳು ಹೊಸ ಪ್ರಯತ್ನಗಳನ್ನು ಕೈಗೊಳ್ಳಬೇಕಿದೆ” ಎಂದು ಸಲಹೆ ನೀಡಿದರು.

    ಈ ಕಾರ್ಯಕ್ರಮದಲ್ಲಿ ಡಾ. ಮಾಲತಿ ಜಿ. ಪ್ರಭು ಇವರ ‘ನನ್ನೊಳಗಿನ ನಾನು’, ಆರ್. ರಮೇಶ್ ಪ್ರಭು ಇವರ ‘ಮನದಾಳದ ಮುತ್ತುಗಳು’ ಹಾಗೂ ಶ್ರೀಧರ್ ಗೋರೆ ನೆಲ್ಯಾಡಿ ಇವರ ‘ದ್ರೇಷ್ಕಾಣ ಫಲ ಸಂಚಯ’ ಎಂಬ ಮೂರು ಹೊಸ ಕೃತಿಗಳನ್ನು ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿ. ಪದ್ಮನಾಭ ಗೌಡ ಇವರು ಲೋಕಾರ್ಪಣೆಗೊಳಿಸಿದರು.

    ಸಮ್ಮೇಳನದ ಅಂಗವಾಗಿ ಕ್ರಿಯೇಟಿವ್ ಪುಸ್ತಕ ಮನೆ ಜೋಡುರಸ್ತೆಯಿಂದ ಆರಂಭವಾದ ಭುವನೇಶ್ವರಿ ದೇವಿಯ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿತು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಹರಿಷತ್ ಧ್ವಜಾರೋಹಣ ಮಾಡಿದರು. ಮೆರವಣಿಗೆಗೆ ಕಾರ್ಕಳ ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ್ ಶೆಟ್ಟಿ ಚಾಲನೆ ನೀಡಿದರು.

    ಸಾಂಸ್ಕೃತಿಕ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟಿಸಿದರು. ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮ್ಮೇಳನದ ಆಶಯವನ್ನು ವಿವರಿಸಿದರು.

    ಸಮಾರೋಪದ ನುಡಿಗಳನ್ನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕರಲ್ಲಿ ಒಬ್ಬರಾದ ಅಶ್ವತ್ ಎಸ್.ಎಲ್.ರವರು ಮಾತನಾಡಿ, “ಸಾಹಿತ್ಯವು ಸಮಾಜದ ಮನೋವಿಕಾಸಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಿದೆ. ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಹಾಗೂ ಸಂವೇದನೆಯನ್ನು ಗಟ್ಟಿಗೊಳಿಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದಾಗಿದೆ. ಹೊಸ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಓದು ಮತ್ತು ಆಸಕ್ತಿಯನ್ನು ಹೆಚ್ಚಿಸುವತ್ತ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು” ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ. ಕೆ. ಗುಣಪಾಲ ಕಡಂಬ, ಶಿಕ್ಷಣಾಧಿಕಾರಿ ಗಿರಿಜಮ್ಮ ಎಸ್.ಆರ್., ಸಾಹಿತಿ ಎಚ್. ದುಂಡಿರಾಜ್, ಜ್ಞಾನಸುಧ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ, ನ್ಯಾಯವಾದಿ ಎಂ.ಕೆ. ಸುವೃತ್ ಕುಮಾರ್, ವಿವಿಧ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿದ್ದರು. ತಾಲೂಕು ಕ.ಸಾ.ಪ. ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಸ್ವಾಗತಿಸಿ, ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರ್ವಹಿಸಿದರು.

    baikady Book release Cultural dance exhibition felicitation folk kannada Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸುಲೋಚನಾ ಪಿ.ಕೆ. ಇವರ ‘ಮೂಗಿಯ ಮನದೊಳು’ ಕನ್ನಡ ಕಾದಂಬರಿ ಲೋಕಾರ್ಪಣೆ
    Next Article ಉಡುಪಿಯಲ್ಲಿ ಸಂಪನ್ನಗೊಂಡ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’
    roovari

    Add Comment Cancel Reply


    Related Posts

    ‘ಕಲಾ ಪರ್ವ’ದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರಸ್ತುತಿ

    December 30, 2025

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ‘ವಿಕಾಸ-2025’ ಕೌಶಲ್ಯ ತರಬೇತಿ

    December 30, 2025

    ಉಡುಪಿಯಲ್ಲಿ ಸಂಪನ್ನಗೊಂಡ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’

    December 30, 2025

    ಸುಲೋಚನಾ ಪಿ.ಕೆ. ಇವರ ‘ಮೂಗಿಯ ಮನದೊಳು’ ಕನ್ನಡ ಕಾದಂಬರಿ ಲೋಕಾರ್ಪಣೆ

    December 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.