Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಭಗವಂತನ ಸಾವು’ ಕಥಾಸಂಕಲನ

    September 16, 2025

    ಮಂಚಿ ಲಯನ್ಸ್ ಕ್ಲಬ್ ನಲ್ಲಿ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’

    September 16, 2025

    ಪುತ್ತೂರಿನಲ್ಲಿ ಕೊಂಕಣಿ ರಂಗತರಂಗ ಮತ್ತು ಸಾಹಿತ್ಯ ಸಂಭ್ರಮ-3

    September 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಕೊಂಕಣಿ ರಂಗತರಂಗ ಮತ್ತು ಸಾಹಿತ್ಯ ಸಂಭ್ರಮ-3
    Konkani

    ಪುತ್ತೂರಿನಲ್ಲಿ ಕೊಂಕಣಿ ರಂಗತರಂಗ ಮತ್ತು ಸಾಹಿತ್ಯ ಸಂಭ್ರಮ-3

    September 16, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಜಿ.ಎಸ್.ಬಿ. ಮಹಿಳಾ ಮಂಡಳಿ, ಪುತ್ತೂರು ಇವರ ಸಹಯೋಗದಲ್ಲಿ ಆಯೋಜಿಸಿದ ಕೊಂಕಣಿ ರಂಗ ತರಂಗ ಮತ್ತು ಸಾಹಿತ್ಯ ಸಂಭ್ರಮ-3 ಕಾರ್ಯಕ್ರಮ ದಿನಾಂಕ 14 ಸೆಪ್ಟೆಂಬರ್ 2025ರಂದು ಪುತ್ತೂರಿನ ಸುಕ್ರತೀಂದ್ರ ಕಲಾಮಂದಿರದಲ್ಲಿ ನಡೆಯಿತು.


    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ ಮಾತನಾಡಿ ʼಕರ್ನಾಟಕ ಸರಕಾರವು ಸಾಹಿತ್ಯ, ಕಲೆ, ಜಾನಪದ ಕ್ಷೇತ್ರದ ಬೆಳವಣಿಗಾಗಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಚನೆ ಮಾಡಿದೆ. ಅಕಾಡೆಮಿಯು ಜನರ ಹತ್ತಿರ ಹೋಗಿ, ಜನರಿಗೆ ಅಕಾಡೆಮಿಯ ಬಗ್ಗೆ ಪರಿಚಯಿಸಿ ಸಾಹಿತ್ಯ, ಕಲೆ, ಜಾನಪದ ಕ್ಷೇತ್ರದಲ್ಲಿ ದುಡಿದವರನ್ನು ಹತ್ತಿರ ತರಲು ಪ್ರಯತ್ನಿಸುತ್ತಿದೆ” ಎಂದರು.


    ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀ ಲಕ್ಷ್ಮೀ ವೆಂಕಟರಮನ ದೇವಸ್ಥಾನದ ಧರ್ಮದರ್ಶಿ ಹಾಗೂ ವ್ಯವಸ್ಥಾಪಕರಾದ ಡಾ. ಆಶೋಕ್‌ ಪ್ರಭು ಮಾತನಾಡಿ “ಪ್ರಸ್ತುತ ಕಾಲದಲ್ಲಿ ಕೊಂಕಣಿ ಭಾಷೆಯನ್ನು ಬಳಸುವುದು ಕಡಿಮೆಯಾಗುತ್ತಿದೆ. ಆದ್ದರಿಂದ ಕೊಂಕಣಿ ಮಾತಾನಾಡುವುದನ್ನು ಮನೆಯಿಂದಲೇ ಪ್ರಾರಂಭಿಸಬೇಕು. ಆಗ ಮಾತ್ರ ಕೊಂಕಣಿ ಭಾಷೆಯನ್ನು ಬೆಳೆಸಬಹುದು” ಎಂದರು. ಮುಖ್ಯ ಅತಿಥಿಯಾದ ಕುಡಾಲ ದೇಶಸ್ಥ ಗೌಡ ಬ್ರಾಹ್ಮಣ ಸಮಾಜದ ಮುಖಂಡರಾದ ಡಾ. ವೈ. ಉಮಾನಾಥ ಶೆಣೈಯವರು ಕೊಂಕಣಿ ಮೂಡಿ ಬಂದ ದಾರಿ, ಕೊಂಕಣಿ ಇತಿಹಾಸದ ಬಗ್ಗೆ ನಡೆಸಿದ ಅಧ್ಯಯನದ ಬಗ್ಗೆ ಮಾತಾನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಅಕಾಡೆಮಿಯ ‘ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದಲ್ಲಿ ಕೊಂಕಣಿಯ ಹಿರಿಯ ಸಂಗೀತಗಾರರಾದ ಶ್ರೀ ಪಾಂಡುರಂಗ ನಾಯಕ್‌ರೊಂದಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕಲಾವಿದರಾದ ಶ್ರೀ ಕೃಷ್ಣಾನಂದ ನಾಯಕ್‌ರವರು ಸಂವಾದ ನಡೆಸಿದರು. ಶ್ರೀ ಪಾಂಡುರಂಗ ನಾಯಕ್‌ರವರು ಸಂಗೀತದಲ್ಲಿ ಅವರ ಆಸಕ್ತಿ, ಸಂಗೀತ ಕ್ಷೇತ್ರದಲ್ಲಿ ಬೆಳೆದು ಬಂದ ರೀತಿ ಬಗ್ಗೆ ವಿವರಿಸಿದರು.
    ಸಮಾರಂಭದಲ್ಲಿ ಆಹಾರೋತ್ಸವ, ಕರಕುಶಲ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದ ಅಂತ್ಯದಲ್ಲಿ ʼಪಾಟ್ಟೊ ನಾತ್ತಿಲ್ಲೆ ರೈಲ್‌ʼ ಹಾಸ್ಯ ನಾಟಕ ಪ್ರದರ್ಶನವಾಯಿತು.


    ಅಕಾಡೆಮಿಯು ಪ್ರತಿ ತಿಂಗಳಿನಲ್ಲಿ ಓರ್ವ ಸಾಹಿತಿಯನ್ನು ಸನ್ಮಾನಿಸುತ್ತಿದ್ದು, ಇದರ ಅಂಗವಾಗಿ ಹಿರಿಯ ಸಾಹಿತಿಯದ ಶ್ರೀ ಉಲ್ಲಾಸ್‌ ಕೆ. ಪೈಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿ. ಎಸ್. ಬಿ. ಮಹಿಳಾ ಮಂಡಳಿ ವತಿಯಿಂದ ಪ್ರತಿಭಾವಂತರಿನ್ನು ಸನ್ಮಾನಿಸಲಾಯಿತು.
    ಕಾರ್ಯಕ್ರಮದಲ್ಲಿ ಜಿ. ಎಸ್. ಬಿ. ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಎಮ್. ಭಟ್‌, ಅಕಾಡೆಮಿ ಸದಸ್ಯರಾದ ಸಮರ್ಥ ಭಟ್‌, ನವೀನ್‌ ಲೋಬೊ ಹಾಜರಿದ್ದರು. ಶ್ರೀಮತಿ ಪೂರ್ಣಿಮ ಮಲ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ವಿದ್ಯಾ ಭಟ್‌ರವರು ವಂದನಾರ್ಪಣೆಗೈದರು.

    baikady konkani roovari
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಕಿರು ರಂಗಮಂದಿರದಲ್ಲಿ ‘ಜನಗಣಮನ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 17 ಮತ್ತು 18
    Next Article ಮಂಚಿ ಲಯನ್ಸ್ ಕ್ಲಬ್ ನಲ್ಲಿ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ಭಗವಂತನ ಸಾವು’ ಕಥಾಸಂಕಲನ

    September 16, 2025

    ಮಂಚಿ ಲಯನ್ಸ್ ಕ್ಲಬ್ ನಲ್ಲಿ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’

    September 16, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ಜನಗಣಮನ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 17 ಮತ್ತು 18

    September 16, 2025

    ಪಾವಂಜೆಯಲ್ಲಿ ಯಕ್ಷಗಾನ ಬಯಲಾಟ | ಸೆಪ್ಟೆಂಬರ್ 17

    September 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.