Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ
    Awards

    ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ

    May 14, 2023No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕಗಳಿಗೆ ನೀಡಲಾಗುವ ವಿವಿಧ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಿಗಾಗಿ ಪುಸ್ತಕಗಳ ಆಹ್ವಾನ ಮಾಡಲಾಗಿದೆ. 2022 ಜನವರಿ 01ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     2022ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 51 ಪ್ರಕಾರಗಳ ಪುಸ್ತಕಗಳಿಗೆ ವಿವಿಧ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಬೇರೆ ಬೇರೆ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಇದಕ್ಕಾಗಿ 51 ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತೀ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು – 560018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ. ಹೆಚ್ಚಿನ ಮಾಹಿತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in ಅಥವಾ ದೂರವಾಣಿ ಸಂಖ್ಯೆ –080- 26612991 / 26623584 ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ.

     ಈಗಾಗಲೇ ನಿರ್ದಿಷ್ಟ ದತ್ತಿ ಪ್ರಶಸ್ತಿಯಲ್ಲಿ ಒಂದು ಬಾರಿ ಪ್ರಶಸ್ತಿ ಪುರಸ್ಕೃತರಾಗಿದ್ದರೆ ಅದೇ ವಿಭಾಗಕ್ಕೆ ಮತ್ತೆ ಭಾಗವಹಿಸುವಂತಿಲ್ಲ. ಆದರೆ ಬೇರೆ ದತ್ತಿ ವಿಭಾಗಕ್ಕೆ ಪುಸ್ತಕಗಳನ್ನು ಕಳುಹಿಸಲು ಅವಕಾಶವಿರುತ್ತದೆ. ಒಬ್ಬರು ಎಷ್ಟು ಪ್ರಕಾರದ ದತ್ತಿ ವಿಭಾಗಕ್ಕಾದರೂ ಪುಸ್ತಕಗಳನ್ನು ಕಳುಹಿಸಬಹುದು. ಆದರೆ ಪ್ರತಿ ವಿಭಾಗಕ್ಕೂ ಪ್ರತ್ಯೇಕ ಮೂರು ಪುಸ್ತಕಗಳನ್ನು ಸಲ್ಲಿಸಬೇಕು. ಪ್ರಶಸ್ತಿಯ ಪರಿಶೀಲನೆಗೆ ಕಳುಹಿಸಿರುವ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ತಡವಾಗಿ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ದತ್ತಿ ಪ್ರಶಸ್ತಿಯಲ್ಲಿ ಭಾಗವಹಿಸುವವರು ಪುಸ್ತಕದ ಮೊದಲ ಪುಟದಲ್ಲಿ ದತ್ತಿಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವದ ಸಂಖ್ಯೆಯನ್ನು ಸ್ಪಷ್ಟವಾಗಿ ಸೂಚಿಸಬೇಕು.

     ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ‘ಕನ್ನಡ ಸಾಹಿತ್ಯ ಪರಿಷತ್ತಿ’ನ ಆಜೀವ ಸದಸ್ಯತ್ವವನ್ನು ಕಡ್ಡಾಯವಾಗಿ ಹೊಂದಿರಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದರೆ ತಕ್ಷಣದಲ್ಲಿ ಆಜೀವ ಸದಸ್ಯತ್ವವನ್ನು ಪಡೆದು ದತ್ತಿ ಪ್ರಶಸ್ತಿಗಳ ಸ್ಪರ್ಧೆಗೆ ಪ್ರವೇಶ ಪಡೆಯಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುಸ್ತಕಗಳನ್ನು ಕಳುಹಿಸಲು ಜೂನ್ 24 ಕೊನೆಯ ದಿನವಾಗಿರುತ್ತದೆ. ವಿವಿಧ 51 ದತ್ತಿ ಪ್ರಶಸ್ತಿಗಳು 10,000 ರೂ.ಮೊತ್ತದಿಂದ 250ರೂ.ವರೆಗೆ ನಗದು ಬಹುಮಾನಗಳನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ಕನ್ನಡ ಸಾಹಿತ್ಯ ಪರಿಷತ್ತಿನ 2022ನೆಯ ಸಾಲಿನ ವಿವಿಧ ದತ್ತಿ ಪ್ರಶಸ್ತಿ ಪಟ್ಟಿ ಇಂತಿದೆ.
     ಅ. ಸಂ.    ದತ್ತಿ ಹೆಸರು                                                                        ಪ್ರಶಸ್ತಿ ನಗದು ರೂ.
    1)            ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್‌ ದತ್ತಿ                                10,000/-
    2)           ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ          10,000/-
    3)           ಶ್ರೀಮತಿ ಭಾರತಿ ಮೋಹನ ಕೋಟಿ ದತ್ತಿ `ಅನುವಾದ ಸಾಹಿತ್ಯಕ್ಕಾಗಿ‘            10,000/
    4)           ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲ ಶೆಟ್ಟಿ ಡಾ. ಮದನಕೇಸರಿ ಜೈನ ದತ್ತಿ      10,000/-
    5)           ಪೂಜ್ಯ ಸ್ವಸ್ತಿಶ್ರೀ ದೇವೇಂದ್ರ ಕೀರ್ತಿ ದತ್ತಿ                                           10,000/-
    6)           ವಸುದೇವ ಭೂಪಾಲಂ ದತ್ತಿ
    1) ಕಾದಂಬರಿ                                                                       5,000/-
    2) ಸಣ್ಣ ಕಥಾ ಸಂಕಲನ                                                            3,000/-
    3) ಮಕ್ಕಳ ಸಾಹಿತ್ಯ ಕೃತಿ                                                          2,000/-
    4) ವೈಚಾರಿಕ ಲೇಖನ/ಅನುವಾದಿತ ಕೃತಿ                                        2,000/-
    7)           ದಿ| ಡಿ. ಮಾಣಿಕರಾವ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ                          5,000/-
    8)           ದಿ| ಡಾ. ಎ.ಎಸ್. ಧರಣೇಂದ್ರಯ್ಯ-ಮನೋವಿಜ್ಞಾನ ದತ್ತಿ                         5,000/-
    9)           ಭಾರತೀಸುವ ಸ್ಮಾರಕ ದತ್ತಿ ಪ್ರಶಸ್ತಿ                                                5,000/-
    10)          ಶ್ರೀಮತಿ ಲಕ್ಷ್ಮೀದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿ                     5,000/-
    11)           ಪ್ರಕಾಶಕ ಆರ್.ಎನ್. ಹಬ್ಬು ದತ್ತಿ ಪ್ರಶಸ್ತಿ                                          5,000/-
    12)          ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿ                5,000/-
    (ಎಲ್. ಬಸವರಾಜು ದತ್ತಿ)
    13)          ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ ದತ್ತಿ                                 5,000/-
    14)          ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ,                                  5,000/-
    15)          ಶ್ರೀಮತಿ ಗೌರುಭಟ್ ದತ್ತಿ ಪ್ರಶಸ್ತಿ                                                  5,000/-
    16)          ಶ್ರೀಮತಿ ಗಂಗಮ್ಮ ಶ್ರೀ ಟಿ. ಶಿವಣ್ಣ ದತ್ತಿ                                            5,000/-
    17)          ಡಾ. ಹಾ.ಮಾ. ನಾಯಕ ಸ್ಮಾರಕ ದತ್ತಿ ಪ್ರಶಸ್ತಿ                                    5,000/-
    18)          ಡಾ. ವೀಣಾ ಶಾಂತೇಶ್ವರ ದತ್ತಿ                                                    5,000/-
    19)          ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್‌ ದತ್ತಿ                               2,000/-
    20)         ಪಳಕಳ ಸೀತಾರಾಮಭಟ್ಟ ದತ್ತಿ                                                    2,000/-
    21)          ಶ್ರೀಮತಿ ಜಯಲಕ್ಷ್ಮಿ ಮುತ್ತು ಶ್ರೀ ಬಾಪು ರಾಮಣ್ಣ ದತ್ತಿ ಪ್ರಶಸ್ತಿ                    2,000/-
    22)          ದಿ| ಗೌರಮ್ಮ ಹಾರ್ನಹಳ್ಳಿ ಕೆ. ಮಂಜಪ್ಪ ದತ್ತಿ                                      1,000/-
    23)          ಶ್ರೀಮತಿ ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ                                   1,000/-
    24)         ಜಿ.ಆರ್. ರೇವಯ್ಯ ದತ್ತಿ                                                            1,000/-
    25)          ಡಾ| ಆರ್.ಜೆ.ಗಲಗಲಿ ದತ್ತಿ                                                         1,000/-
    26)         ದಿ| ಕಾಕೋಳು ಸರೋಜಮ್ಮ ದತ್ತಿ                                                  1,000/-
    27)          ನಾ.ಕು. ಗಣೇಶ್ ದತ್ತಿ                                                              1,000/-
    28)          ಶ್ರೀಮತಿ ಸುಮನ್ ಸೋಮಶೇಖರ್ ಸೋಮವಾರಪೇಟೆ ದತ್ತಿ ಪ್ರಶಸ್ತಿ            1,000/-
    29)         ಶ್ರೀ ಹೇಮರಾಜ್ ಜಿ.ಎಸ್. ಕುಶಾಲನಗರ ದತ್ತಿ ಪ್ರಶಸ್ತಿ                            1,000/-
    30)         ಮಲ್ಲಿಕಾ ಪ್ರಶಸ್ತಿ ದತ್ತಿ                                                               500/-
    31)          ಅಂತರರಾಷ್ಟ್ರೀಯ ಮಹಿಳಾ ವರ್ಷದ `ಮಹಿಳಾ ದತ್ತಿ‘                             500/-
    32)          ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ                                            500/-
    33)          ಲಿ೦.ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ                                   500/-
    34)         ಶ್ರೀಮತಿ ನೀಲಗಂಗಾ ದತ್ತಿ                                                         500/-
    35)          ಶ್ರೀಮತಿ ಕೆ.ಎಸ್. ಭಾರತಿ ರಾಜಾರಾಮ್ ಮಧ್ಯಸ್ಥ ದತ್ತಿ                           500/-
    36)         ಶ್ರೀಮತಿ ಶಾರದಾ ಆರ್. ರಾವ್ ದತ್ತಿ                                              500/-
    37)          ದಿ| ಎಚ್. ಕರಿಯಣ್ಣ ದತ್ತಿ                                                           500/-
    38)          ಡಾ| ಎಚ್. ನರಸಿಂಹಯ್ಯ ದತ್ತಿ                                                    500/-
    39)         ದಿವಂಗತ ಶ್ರೀಮತಿ ಕೆ.ವಿ. ರತ್ನಮ್ಮ ದತ್ತಿ                                           500/-
    40)         ರತ್ನಾಕರವರ್ಣಿ-ಮುದ್ದಣ-ಅನಾಮಿಕ ದತ್ತಿ
    1) ಗದ್ಯ ಕೃತಿ                                                                        500/-
    2) ಪದ್ಯ ಕೃತಿ                                                                       500/-
    41)          ಪಿ. ಶಾಂತಿಲಾಲ್ ದತ್ತಿ                                                             500/-
    42)         ಅಕ್ಕಮ್ಮ ಗಿರಿಗೌಡ ರುದ್ರಪ್ಪ ದತ್ತಿ                                                   500/-
    43)         ಕುಂಬಾಸ ಪ್ರಶಸ್ತಿ ದತ್ತಿ                                                             500/-
    44)         ಪ್ರೊ| ಡಿ.ಸಿ.ಅನಂತಸ್ವಾಮಿ ದತ್ತಿ                                                    500/-
    45)         `ಸಿಸು‘ ಸಂಗಮೇಶ ದತ್ತಿ                                                           500/-
    46)         ಶ್ರೀಮತಿ ಪಂಪಮ್ಮ-ಶರಣೇಗೌಡ ವಿರುಪಾಪುರ ದತ್ತಿ                              500/-
    47)         ಶ್ರೀ ಕೆ. ವಾಸುದೇವಾಚಾರ್ ದತ್ತಿ                                                  500/-
    48)         ಅಸುಂಡಿ ಹುದ್ದಾರ್ ಕೃಷ್ಣರಾವ್‌ ಸ್ಮಾರಕ ದತ್ತಿ                                      250/-
    49)         ಜಿ.ಪಿ. ರಾಜರತ್ನಂ ಸಂಸ್ಮರಣ ದತ್ತಿ : (ಮಕ್ಕಳ ಪುಸ್ತಕ ಬಹುಮಾನ ಸ್ಪರ್ಧೆ        250/-
    – ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರಿಗೆ ಮಾತ್ರ ಅವಕಾಶ)
    50)         ಡಾ| ಜಿ. ಚಂದ್ರಮೌಳೇಶ್ವರ ದತ್ತಿ                                                   2,000/-
    51)          ಶ್ರೀಮತಿ ಬೋರಮ್ಮ ಗೋವಿಂದಪ್ಪ ದತ್ತಿ                                           2,000/-

    •  ಶ್ರೀಯುತ ಶ್ರೀನಾಥ್ ಜೆ., ಮಾಧ್ಯಮ ಸಲಹೆಗಾರರು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಯಕ್ಷೋತ್ಸಾಹಿ ಪ್ರತಿಭೆ’ ಟಿ.ಎಸ್.ಶ್ರೀವತ್ಸ ಭಟ್
    Next Article ಪರಿಚಯ ಲೇಖನ | ‘ಭರತನೃತ್ಯ ಕಲಾ ಪ್ರವೀಣೆ’ ವಿದುಷಿ ಕು.ವೈಷ್ಣವಿ ವಿ ಪ್ರಭು
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.