Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತಿ ಎ.ಎನ್‌. ರಾಮಕೃಷ್ಣ ಮತ್ತು ಬಿ.ಜಿ. ರಘುನಾಥ್ ನಾಯಕ್‌ ಜ್ಞಾಪಕಾರ್ಥ ‘ದತ್ತಿನಿಧಿ ಕಾರ್ಯಕ್ರಮ’
    Literature

    ಸಾಹಿತಿ ಎ.ಎನ್‌. ರಾಮಕೃಷ್ಣ ಮತ್ತು ಬಿ.ಜಿ. ರಘುನಾಥ್ ನಾಯಕ್‌ ಜ್ಞಾಪಕಾರ್ಥ ‘ದತ್ತಿನಿಧಿ ಕಾರ್ಯಕ್ರಮ’

    February 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಿದ್ದಾಪುರ : ಕೊಡಗು ಜಿಲ್ಲಾ, ವಿರಾಜಪೇಟೆ ತಾಲೂಕು ಮತ್ತು ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚೆನ್ನಯ್ಯನ ಕೋಟೆ ಸರಕಾರಿ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ಆಯೋಜಿತ ಸಾಹಿತಿ ದಿ. ಎ.ಎನ್‌. ರಾಮಕೃಷ್ಣ ಮತ್ತು ದಿ. ಬಿ.ಜಿ. ರಘುನಾಥ್ ನಾಯಕ್‌ ಜ್ಞಾಪಕಾರ್ಥ ‘ದತ್ತಿನಿಧಿ ಕಾರ್ಯಕ್ರಮ’ವು ಚೆನ್ನಯ್ಯನ ಕೋಟೆ ಸರಕಾರಿ ಪ್ರೌಢ ಶಾಲೆಯಲ್ಲಿ ದಿನಾಂಕ 02-12-2023ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಕಿ ಕೆ.ಎ. ಕಾವೇರಮ್ಮ ಮಾತನಾಡಿ “ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆಯೊಂದಿಗೆ ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಪ್ರತಿಯೊಬ್ಬರೂ ಮುನ್ನಡೆಯಬೇಕು. ಶಾಲೆಗಳಲ್ಲಿ ಇಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಕನ್ನಡ ಸಾಹಿತ್ಯ ಪರಿಷತ್‌ ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬಿತ್ತಿ, ಕನ್ನಡ ಸಾಹಿತ್ಯದತ್ತ ಆಸಕ್ತಿ ಮೂಡಿಸುವ ಪ್ರಯತ್ನ ನಡೆಸುತ್ತಿರುವುದು ಮೆಚ್ಚುಗೆಯ ವಿಚಾರ” ಎಂದು ಹೇಳಿದರು.

    ಮಾಜಿ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷರಾದ ಟಿ.ಪಿ.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, “ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಅಭಿಮಾನದೊಂದಿಗೆ ಕನ್ನಡಪರ ಕಾರ್ಯಕ್ರಮಗಳಿಗೆ ಹೆಚ್ಚು ಸಹಕಾರ ನೀಡುವುದರ ಮೂಲಕ ಕೈಜೋಡಿಸಬೇಕು” ಎಂದು ಹೇಳಿದರು.

    ಈ ಸಂದರ್ಭ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆಯಿತು. ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಟಿ.ಹೆಚ್‌. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ರಾಜೇಶ್‌, ಪದ್ಮನಾಭ, ಚನ್ನಯ್ಯನಕೋಟೆ ಗ್ರಾ.ಪಂ.ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್, ಪ್ರೌಢ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸಜಿತಾ, ಗ್ರಾಪಂ ಸದಸ್ಯರಾದ ಶೀಲಾ, ವಿಜು, ಪ್ರೌಢಶಾಲಾ ವಿಭಾಗದ ನಾಮನಿರ್ದೇಶಿತ ಸದಸ್ಯ ವೇಣು ಕುಮಾರ್, ಸಾಹಿತ್ಯ ಪರಿಷತ್ತಿನ ಸದಸ್ಯರಾದ ದಿನೇಶ್‌, ಯೋಗೇಶ್‌, ಬಾವ ಮಾಲ್ದಾರೆ ಹಾಗೂ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಕಲ್ಲಡ್ಕದ ‘ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್’ ವಿದ್ಯಾರ್ಥಿಗಳಿಂದ ‘ಕಲಾ ಪರ್ವ 2023’
    Next Article ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.