Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹೆಬ್ಬಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ಬಾಲೆ ಘಟಕದ ವತಿಯಿಂದ ‘ಕವಿಗೋಷ್ಠಿ’
    Literature

    ಹೆಬ್ಬಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ಬಾಲೆ ಘಟಕದ ವತಿಯಿಂದ ‘ಕವಿಗೋಷ್ಠಿ’

    February 2, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕುಶಾಲನಗರ ಸಮೀಪದ ಹೆಬ್ಬಾಲೆ ಬನಶಂಕರಿ ಹಬ್ಬದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ವತಿಯಿಂದ ಆಯೋಜಿಸಿದ್ದ ‘ಕವಿಗೋಷ್ಠಿ’ಯು ಬನಶಂಕರಿ ದೇವಸ್ಥಾನ ಆವರಣದಲ್ಲಿ ದಿನಾಂಕ 10-12-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಉದ್ಘಾಟಿಸಿ ಮಾತನಾಡಿ “ಕವನ ಓದುವ ಜೊತೆಗೆ ಕೇಳುಗರ ಸಂಕಟವನ್ನು ಕವನ ವಾಚಿಸುವ ಕವಿಗಳು ಅರಿಯಬೇಕು. ಈಗಲೇ ಕವಿಗೋಷ್ಠಿಗಳಿಗೆ ಸಾರ್ವಜನಿಕರು ಬರುವುದು ಕಡಿಮೆ. ಅಂತಹುದರಲ್ಲಿ ಕವಿಗಳು ತಮಗೆ ಇಷ್ಟ ಬಂದ ಹಾಗೆ ಬರೆದು ಜನರಲ್ಲಿ ಸಾಹಿತ್ಯ ಆಸಕ್ತಿಯನ್ನು ಮತ್ತಷ್ಟು ಕಡಿಮೆ ಮಾಡಬಾರದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಮುಖ್ಯ ಅತಿಥಿಗಳಾಗಿದ್ದ ಸೋಮವಾರಪೇಟೆ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾತನಾಡಿ, “ಗ್ರಾಮೀಣ ಭಾಗದಲ್ಲಿ ಇಂತಹ ಕವಿಗೋಷ್ಠಿ ನಡೆಸುವ ಮೂಲಕ ಕನ್ನಡ ಭಾಷೆಯ ಗೌರವವನ್ನು ಹೆಚ್ಚಿಸಲಾಗುತ್ತಿದೆ. ಕೊಡಗಿನಲ್ಲಿ ಮಹಿಳಾ ಬರಹಗಾರರ ಸಂಖ್ಯೆ ತುಂಬಾ ಕಡಿಮೆಯಿತ್ತು ಎನ್ನುತ್ತಿದ್ದರು. ಆದರೆ ಇವತ್ತು ಮಹಿಳೆಯರೇ ಹೆಚ್ಚು ಇರುವುದು ಸಂತಸ ತಂದಿದೆ. ಕೊಡಗು ನಿಸರ್ಗಕ್ಕೆ, ವೀರರ ನಾಡು, ಕಾವೇರಿ ನದಿ, ಸೈನಿಕರ ತವರೂರು. ಆದರೇ ಬರಹಗಾರರು ಕೂಡ ಕೇವಲ ಇದೇ ವಿಚಾರಗಳಿಗೆ ಸೀಮಿತಗೊಳ್ಳದೇ, ಹೆಚ್ಚು ಓದುವ ಮೂಲಕ ಹೊರಜಗತ್ತಿಗೆ ತೆರೆದುಕೊಳ್ಳಬೇಕು. ಹಿರಿಯರು ಹೇಳಿದ್ದಾರೆ ‘ರವಿ ಕಾಣದ್ದನ್ನು ಕವಿ ಕಂಡ’ ಅಂತ. ಆ ರೀತಿಯಲ್ಲಿ ಗಡಿಯನ್ನು ಮೀರಿ ಸಾಹಿತ್ಯ ಕ್ಷೇತ್ರವನ್ನು ಗಟ್ಟಿಗೊಳಿಸೋಣ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಕನ್ನಡ ಭಾಷೆಯನ್ನು ಬೆಳೆಸಲು ಸಾಧ್ಯವಿಲ್ಲ. ಭಾಷೆಯನ್ನು ಬಳಸುವ ಮೂಲಕ ಉಳಿಸೋಣ” ಎಂದರು.

    ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, “ಕವಿಗಳು, ಸಾಹಿತಿಗಳು ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಚಟುವಟಿಕೆ ನಡೆಸುವ ಮೂಲಕ ಯುವಜನಾಂಗದಲ್ಲೂ ಸಾಹಿತ್ಯ ಆಸಕ್ತಿಯನ್ನು ಬೆಳಸಬೇಕು” ಎಂದು ಕರೆ ನೀಡಿದರು. ಕಸಾಪ ಹೆಬ್ಬಾಲೆ ಘಟಕದ ಅಧ್ಯಕ್ಷರಾದ ಎಂ.ಎನ್.ಮೂರ್ತಿಯವರು ಮತ್ತು ತಂಡದವರು ಆಯೋಜಿಸಿದ್ದ ಕವಿಗೋಷ್ಠಿಯಲ್ಲಿ ಕೊಡಗು ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ 20ಕ್ಕೂ ಹೆಚ್ಚು ಕವಿಗಳು ಆಗಮಿಸಿ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು.

    ಸಭಾ ಅಧ್ಯಕ್ಷರಾಗಿ ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಹೆಬ್ಬಾಲೆ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಜಿಲ್ಲಾ ಸಮಿತಿಯ ಪ್ಯಾನ್ಸಿ ಮುತ್ತಣ್ಣ, ಹೆಬ್ಬಾಲೆ ದೇವಾಲಯ ಸಮಿತಿಯ ಅಧ್ಯಕ್ಷ ಬಸವರಾಜಪ್ಪ, ಕುಶಾಲನಗರ ತಾಲೂಕು ಕಸಾಪ ಕಾರ್ಯದರ್ಶಿ ಎಸ್.ನಾಗರಾಜ್, ಹೆಬ್ಬಾಲೆ ಘಟಕದ ಕಾರ್ಯದರ್ಶಿ ಕವಿತಾ, ಸದಸ್ಯರಾದ ಎಂ.ಎನ್.ಕಾಳಪ್ಪ, ಡಿ.ಎಸ್.ಸೋಮಶೇಖರ್, ಮಾಜಿ ಸೈನಿಕ ಪುಟ್ಟೇಗೌಡ, ಜಯಮ್ಮ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕಿ ಕವಿತ ಪುಟ್ಟೇಗೌಡ ಕಾರ್ಯಕ್ರಮವನ್ನು ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಟೀಲು ರಂಗಸ್ಥಳದಲ್ಲಿ ಕಲಾವಿದ ವಿಷ್ಣುಶರ್ಮರ ಮೂರು ಕೃತಿಗಳ ಲೋಕಾರ್ಪಣೆ
    Next Article ಖಿಲ್ರಿಯಾ ಜುಮ್ಮಾ ಮಸೀದಿಯ ಸುವರ್ಣ ಮಹೋತ್ಸವದ ಅಂಗವಾಗಿ ‘ಕವಿಗೋಷ್ಠಿ’ ಮತ್ತು ಪ್ರತಿಭಾ ಸ್ಪರ್ಧೆ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.