Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನಿಂದ ‘ಗ್ರಾಮ ಸಾಹಿತ್ಯ ಸಂಭ್ರಮ’
    Literature

    ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನಿಂದ ‘ಗ್ರಾಮ ಸಾಹಿತ್ಯ ಸಂಭ್ರಮ’

    September 5, 2023No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರತ್ತೂರು ಮತ್ತು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗರಾದ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮ’ದ ಸರಣಿ ಎಂಟನೇ ಕಾರ್ಯಕ್ರಮ ದಿನಾಂಕ 26-08-2023ರಂದು ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.

    ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ ಅವರು ಮಾತನಾಡಿ ‘ಕನ್ನಡ ಸಾಹಿತ್ಯ ಪರಿಷತ್‌ನ ಮೂಲಕ ನಡೆಯುವ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ ಮತ್ತು ಗ್ರಾಮದ ಜನತೆಗೆ ಸಾಹಿತ್ಯದ ಬಗ್ಗೆ ತಿಳಿಸುವ ಕಾರ್ಯವಾಗುತ್ತಿದೆ. ಈ ಕಾರ್ಯಕ್ರಮ ತಾಲೂಕಿನೆಲ್ಲೆಡೆ ನಡೆಯುತ್ತಿದ್ದು ಇದು ಯಶಸ್ವಿಯಾಗಿ ನಡೆಯಲಿ ಎಂದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ ನಡೆದಿದ್ದು, ಅದರಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳೇ ಅಧಿಕವಾಗಿದ್ದರು. ಹೀಗಾಗಿ ವಿದ್ಯಾರ್ಥಿಗಳು ಯಾವ ಮಾಧ್ಯಮದಲ್ಲಿ ಶಿಕ್ಷಣ ಪಡೆದರೂ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಗಳಿಸುತ್ತಾರೆ ಎಂಬ ನಂಬಿಕೆಯಿದೆ.

    ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್‌ ನಾಯಕ್‌ ಮಾತನಾಡಿ, “ಯುವ ಜನತೆಯನ್ನು ಕನ್ನಡ ಸಾಹಿತ್ಯ ಲೋಕದತ್ತ ಬರ ಮಾಡಿಕೊಳ್ಳುವ ಜೊತೆಗೆ ಸಾಹಿತ್ಯ ಪರಿಷತ್ ಜನ ಸಾಮಾನ್ಯರ ಪರಿಷತ್‌ ಆಗಿ ಕಾರ್ಯ ನಿರ್ವಸುವಂತಾಗಬೇಕು ಎಂಬುದು ಗ್ರಾಮ ಸಾಹಿತ್ಯ ಸಂಭ್ರಮದ ಉದ್ದೇಶವಾಗಿದೆ ಎಂದರು. ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯ ಕಾರ್ಯಕ್ರಮವಾಗಿ ನಡೆಯುವ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಪ್ರತಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಸಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದೆ. ಸಣ್ಣ ಸ್ವರೂಪದ ಕಾರ್ಯಕ್ರಮವಾಗಿದ್ದರೂ ಈಗ ವೈಭವದಿಂದ ನಡೆಯುತ್ತಿದೆ. ಈ ಕಾರ್ಯಕ್ರಮದ ಮೂಲಕ ಚದುರಿ ಹೋಗಿದ್ದ ಎಲ್ಲಾ ಬಳಗಗಳನ್ನು ಒಗ್ಗೂಡಿಸುವ ಕೆಲಸದ ಜೊತೆಗೆ ಮಕ್ಕಳಿಗೂ ವೇದಿಕೆ ನೀಡಲಾಗುತ್ತಿದೆ ಎಂದ ಅವರು ಕನ್ನಡ ಸಾಹಿತ್ಯಕ್ಕೆ ಈಗ ರಾಜಾಶ್ರಯವಿಲ್ಲ. ಇಲ್ಲಿ ಗ್ರಾಮ ಪಂಚಾಯತ್ ಹಾಗೂ ಮಹಾಪೋಷಕರಾಗಿರುವ ಮಿತ್ರಂಪಾಡಿ ಜಯರಾಮು ರೈಯವರು ಸಹಕಾರದಲ್ಲಿ ಕಾರ್ಯಕ್ರಮ ನಡೆಯುತ್ತಿದೆ” ಎಂದು ಹೇಳಿದರು.

    ಮುಖ್ಯ ಅಭ್ಯಾಗತರಾಗಿದ್ದ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಕಾಶ್‌ ಗೌಡ ಮಾತನಾಡಿ, “ಸಾಹಿತ್ಯ ಸಂಭ್ರಮ ಪುರಾತನ, ರಾಜರ ಕಾಲದಿಂದಲೂ ಬೆಳೆದು ಬಂದಿದೆ. ಈಗ ಸರಕಾರದಿಂದ ಸಾಹಿತ್ಯ ಪರಿಷತ್‌ ಮೂಲಕ ಮುನ್ನಡೆಯುತ್ತಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕರಾವಳಿಗರು ಅಪಾರ ಕೊಡುಗೆ ನೀಡಿದ್ದಾರೆ. ಕರ್ನಾಟಕ್ಕೆ ಬಂದದ್ದು ಜ್ಞಾನಪೀಠ ಪ್ರಶಸ್ತಿ ಬೇರೆಲ್ಲಿಗೂ ಬಂದಿಲ್ಲ. ಆಧುನಿಕ ಕಾಲದಲ್ಲಿ ಕೆಲವೊಂದು ಮಾಧ್ಯಮಗಳ ವಿಚಾರಗಳಿಂದಾಗಿ ಕನ್ನಡ ಸಾಹಿತ್ಯ ನಶಿಸುತ್ತಾ ಹೋಗುತ್ತಿದೆ. ಕವಿಗಳಿಗೆ ಇದ್ದಷ್ಟು ತಾಳ್ಮೆ ಬೇರೆ ಯಾರಿಗೂ ಇಲ್ಲ. ಯಾರೂ ಸಾಹಿತ್ಯವನ್ನು ತಿರುಚುವ ಕೆಲಸ ಮಾಡಬಾರದು” ಎಂದು ಹೇಳಿದರು.

    ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಮಾತನಾಡಿ, “ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಸರಣಿ ಕಾರ್ಯಕ್ರಮ ನಮ್ಮ ಗ್ರಾಮದಲ್ಲಿ ನಡೆಯುತ್ತಿರುವದು ಸಂತೋಷ ತಂದಿದೆ. ಈ ಕಾರ್ಯಕ್ರಮದಲ್ಲಿ ಕೋಡಿಂಬಾಡಿ ಗ್ರಾಮದ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ, ಅಭಿನಂದಿಸುತ್ತಿರುವುದು ಅರ್ಥ ಪೂರ್ಣವಾಗಿದೆ. ಸಾಹಿತ್ಯ ಪರಿಷತ್ತಿನ ಎಲ್ಲಾ ಕಾರ್ಯಕ್ರಮಗಳಿಗೂ ನಮ್ಮ ಸಹಕಾರವಿದೆ” ಎಂದರು.

    ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶಾಲಾ ಸ್ಥಳ ದಾನಿ ಮೋನಪ್ಪ ಗೌಡ ಪಮ್ಮನಮಜಲು ಮಾತನಾಡಿ “ಆಂಗ್ಲ ಭಾಷಾ ಶಿಕ್ಷಣಕ್ಕೆ ಆಕರ್ಷಿತವಾಗಿದ್ದ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಗ್ರಾಮದಲ್ಲಿ ನಡೆಯುವ ಕನ್ನಡ ಸಾಹಿತ್ಯ ಕಾರ್ಯಕ್ರಮದಲ್ಲಿ ಗ್ರಾಮದವರನ್ನು ಸೇರಿಸಿಕೊಂಡು ಇನ್ನಷ್ಟು ಉತ್ತಮ ರೀತಿಯಲ್ಲಿ ನಡೆಸುವಂತಾಗಬೇಕು” ಎಂದರು.

    ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪ್ರಾಸ್ತಾವಿಕವಾಗಿ ಮಾತನಾಡಿ, “ಪ್ರತಿಯೊಬ್ಬರಲ್ಲಿಯೂ ಸಾಹಿತ್ಯದ ಒಲವು ಮೂಡಿಸಿ, ಕನ್ನಡಾಭಿಮಾನವನ್ನು ವೃದ್ಧಿಸಿ ಗ್ರಾಮದಲ್ಲಿ ಬಹಗಾರರನ್ನು ಪ್ರೋತ್ಸಾಹಿಸುವರು, ಅವರ ಬರಹಗಳು ಪತ್ರಿಕೆಗಳಲ್ಲಿ ಪ್ರಸಾರಗೊಳ್ಳುವಂತೆ ಮಾಡುವದು ಹಾಗೂ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ” ಎಂದರು.

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಂ. ನಿರಂಜನ ರೈ ಮಠಂತಬೆಟ್ಟು ಮಾತನಾಡಿ, “ನಮ್ಮಲ್ಲಿ ಭಾಷಾ ಬೇದ ಭಾವವಿಲ್ಲ, ಇತರ ಭಾಷೆಗಳ ಜೊತೆಗೆ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕನ್ನಡ ಸಾಹಿತ್ಯ ಪಟ್ಟಣದಲ್ಲಿ ಬೆಳೆದರೆ ಸಾಲದು. ಗ್ರಾಮಗಳಿಗೂ ವಿಸ್ತರಿಸಬೇಕು. ಕನ್ನಡ ಸಾಹಿತ್ಯವನ್ನು ಮುಂದಿನ ಜನಾಂಗಕ್ಕೆ ಕೊಂಡೊಯ್ಯವ ಸಾಹಿತ್ಯ ಪರಿಷತ್ತಿನ ಚಿಂತನೆ ಶ್ಲಾಘನೀಯ” ಎಂದರು.

    ಪತ್ರಕರ್ತ ಸಂತೋಷ್ ಕುಮಾರ್ ಶಾಂತಿನಗರ ಮಾತನಾಡಿ, “ನಾವು ಓದಿರುವ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸುವ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಹಿರಿಯ ವಿದ್ಯಾರ್ಥಿ ಸಂಘವನ್ನು ಪುನರ್ ರಚಿಸಲಾಗುವುದು” ಎಂದರು.

    ಶಾಂತಿನಗರ ಪ್ರೌಢಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮುಖ್ಯಗುರು ವಿಷ್ಣುಪ್ರಸಾದ್ ಸಿ. ಸ್ವಾಗತಿಸಿದರು. ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಶ್ರೀಕಲಾ ಕಾರಂತ್‌ ಅಳಿಕೆ ಕಾರ್ಯಕ್ರಮ ನಿರೂಪಿಸಿದರು. ರಶ್ಮಿತಾ ಸುರೇಶ್‌ ಮಾಣಿ ವಂದಿಸಿದರು.

    ನಾಟಕ ರಚನೆಗಾರ, ನಿರ್ದೇಶಕ, ಕಲಾವಿದ ಎಚ್‌. ವಿಶ್ವನಾಥ ಬೆಳ್ಳಿಪ್ಪಾಡಿ, ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ವರದಿಗಾರರೂ ಆಗಿರುವ ಬೆಳ್ತಂಗಡಿ ಸುದ್ದಿ ಬಿಡುಗಡೆಯ ನಿಯೋಜಿತ ಸಂಪಾದಕ ಸಂತೋಷ್ ಕುಮಾರ್ ಶಾಂತಿನಗರ, ಸಾಹಿತ್ಯ, ಸಂಘಟನೆ, ಜಾನಪದ ಕ್ಷೇತ್ರದ ಸಾಧಕ ಎಂ. ನಿರಂಜನ ರೈ ಮಠಂತಬೆಟ್ಟು, ಯಕ್ಷಗಾನ, ರಂಗಕರ್ಮಿ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಯುವ ಸಾಹಿತಿ ವೈಶಾಲಿ ಕೋಡಿಂಬಾಡಿಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

    ಉದ್ಘಾಟನಾ ಕಾರ್ಯಕ್ರಮದ ಬಳಿಕ ಬೆಳ್ಳಿಪ್ಪಾಡಿ ಹಿ.ಪ್ರಾ, ಶಾಲಾ ಮುಖ್ಯಗುರು ಯಶೋಧ ಇವರು ‘ಸಾಹಿತ್ಯ ಮತ್ತು ಶಿಕ್ಷಣಕ್ಕೆ ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮದ ಕೊಡುಗೆಗಳು’ ಎಂಬ ವಿಚಾರದಲ್ಲಿ ಉಪನ್ಯಾಸ ನೀಡಿದರು. ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್‌ ಬದಿನಾರು ಉಪಸ್ಥಿತರಿದ್ದರು. ನಂತರ ಬಾಲಕಥಾಗೋಷ್ಟಿ ಮತ್ತು ಬಾಲ ಕವಿಗೋಷ್ಟಿ ಜರಗಿತು. ಮಧ್ಯಾಹ್ನ ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಪರಾಹ್ನ ಸಾರ್ವಜನಿಕರಿಗಾಗಿ ಯುವ ಕವಿಗೋಷ್ಠಿ ನಡೆಯಿತು. ಸರಕಾರಿ ಪ್ರೌಢಶಾಲೆ ಶಾಂತಿನಗರ, ಹಿ. ಪ್ರಾ. ಶಾಲೆ ಕೋಡಿಂಬಾಡಿ ಹಾಗೂ ಉನ್ನತ ಹಿ.ಪ್ರಾ ಶಾಲೆ ಬೆಳ್ಳಿಪ್ಪಾಡಿಯ ವಿದ್ಯಾರ್ಥಿಗಳು ಬಾಲ ಕಥಾ ಗೋಷ್ಠಿ, ಬಾಲ ಕವಿಗೋಷ್ಟಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಿಯಾ ಸುಳ್ಯ, ನವ್ಯ ಪ್ರಸಾದ್ ನೆಲ್ಯಾಡಿ ಹಾಗೂ ರಶ್ಮಿತಾ ಸುರೇಶ್‌ ಜೋಗಿಬೆಟ್ಟು ಹಾಗೂ ಕು. ಮಂಜುಶ್ರೀ ನಲ್ಕ ಗೋಷ್ಠಿಗಳ ನಿರೂಪಣೆ ಮಾಡಿದರು. ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಕೆ.ರಾಮಚಂದ್ರ ಪೂಜಾರಿ ಶಾಂತಿನಗರ, ಉದ್ಯಮಿ ಜಾನ್ ಕೆನ್ಯೂಟ್ ನೆಕ್ಕಿಲಾಡಿ ಮತ್ತಿತರರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

    ನಾಟಕ, ಕೃತಿ, ಕವನ ರಚನೆ, ಪುಸ್ತಕ ಬರೆಯುವಿಕೆ, ಕೋಡಿಂಬಾಡಿ ಗ್ರಾಮದ ಮಾಹಿತಿಯುಳ್ಳ ಪುಸ್ತಕ ರಚನೆ ಸೇರಿದಂತೆ ವಿವಿಧ ಬರಹಗಳ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಮುಗುರು ತೆಲಿಕೆ ಖ್ಯಾತಿಯ ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆ. ರಾಜೇಂದ್ರ ಆರಿಗ ನಿಡ್ಯ ಅವರನ್ನು ಅವರ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಯಕ್ಷಭಾರತಿ’ಯ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 10ರಂದು  
    Next Article ಕಾಸರಗೋಡಿನಲ್ಲಿ “ಸ್ವರ ಚಿನ್ನಾರಿ” | ಸಪ್ಟೆಂಬರ್ 9 ರಂದು
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications