Subscribe to Updates

    Get the latest creative news from FooBar about art, design and business.

    What's Hot

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತು – ‘ದತ್ತಿ ಉಪನ್ಯಾಸ’ ಕಾರ್ಯಕ್ರಮ
    Literature

    ಕನ್ನಡ ಸಾಹಿತ್ಯ ಪರಿಷತ್ತು – ‘ದತ್ತಿ ಉಪನ್ಯಾಸ’ ಕಾರ್ಯಕ್ರಮ

    May 17, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ ಹಮ್ಮಿಕೊಂಡ ಮೂರು ‘ದತ್ತಿ ಉಪನ್ಯಾಸ’ ಕಾರ್ಯಕ್ರಮಗಳು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ದಿನಾಂಕ 19-05-2023ರಂದು ಅಪರಾಹ್ನ ಗಂಟೆ 4.30ಕ್ಕೆ ನಡೆಯಲಿದೆ.

    ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ರಾಮಚಂದ್ರ ಐತಾಳರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿಗಳೂ ಸಾಂಸ್ಕೃತಿಕ ಚಿಂತಕರೂ ಆದ ಪ್ರೊ. ಉಪೇಂದ್ರ ಸೋಮಯಾಜಿಯವರು ಮಾಡಲಿದ್ದಾರೆ. ಉಡುಪಿ ಜಿಲ್ಲೆಯ ಕ.ಸಾ. ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗರು ಆಶಯ ನುಡಿಗಳನ್ನಾಡುವರು.

    ದತ್ತಿ ದಾನಿಗಳಾದ ಸೂರಾಲು ನಾರಾಯಣ ಮಡಿ ಹಾಗೂ ಯಕ್ಷಗಾನ ಕೇಂದ್ರ ಹಂಗಾರಕಟ್ಟೆಯ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ಬ್ರಹ್ಮಾವರ ತಾಲೂಕು ಪ್ರಪ್ರಥಮ ಸಾಹಿತ್ಯ ಜ್ಞಾಪಕಾರ್ಥ ದತ್ತಿ, ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆಣಗಲ್ ದತ್ತಿ, ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನ (ಸಾಯಿಬ್ರ ಕಟ್ಟೆ) ಜ್ಞಾಪಕಾರ್ಥ ದತ್ತಿ ಹೀಗೆ ಮೂರು ದತ್ತಿಗಳಿಂದ ಮೂರು ಉಪನ್ಯಾಸ ಕಾರ್ಯಕ್ರಮಗಳು ಜರಗಲಿವೆ.

    ಒಂದನೇ ಉಪನ್ಯಾಸದ ವಿಷಯ ‘ಕಾರಂತ ಕಾದಂಬರಿ ವಿಮರ್ಶೆ’ ಉಪನ್ಯಾಸಕಾರರು ನಿವೃತ್ತ ಮುಖ್ಯ ಶಿಕ್ಷಕರಾದ ಜಿ. ಗಣೇಶ್ ಮೂರ್ತಿ ಹೆಬ್ಬಾರ್.

    ಎರಡನೇ ಉಪನ್ಯಾಸದ ವಿಷಯ ‘ಕುಂದಾಪ್ರ ಕನ್ನಡ ಅಂದು-ಇಂದು’ ಉಪನ್ಯಾಸಕಾರರು ಕೋಟದ ವಿವೇಕ ಪದವಿ ಪೂರ್ವ ಕಾಲೇಜು ಇಲ್ಲಿಯ ಉಪನ್ಯಾಸಕಾರರಾದ ಜಿ. ಸಂಜೀವ

    ಮೂರನೇ ಉಪನ್ಯಾಸದ ವಿಷಯ ‘ಯಕ್ಷಗಾನದಲ್ಲಿ ಕನ್ನಡ ಅಂದು-ಇಂದು’ ಸಾಂಸ್ಕೃತಿಕ ಚಿಂತಕರಾದ ಡಾ. ಜಿ. ವೈಕುಂಠ ಹೇರ್ಳೆ ಉಪನ್ಯಾಸ ನೀಡಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆದರದ ಸ್ವಾಗತವನ್ನು ಕೋರುತ್ತಿದ್ದಾರೆ.

    ಕ.ಸಾ.ಪ. ಬೆಂಗಳೂರಿನಿಂದ ನಾಡೋಜ ಡಾ. ಮಹೇಶ ಜೋಷಿ, ರಾಜ್ಯಾಧ್ಯಕ್ಷರು, ಗೌರವ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿ ಮತ್ತು ಡಾ. ಪದ್ಮಿನಿ ನಾಗರಾಜ್, ಗೌರವ ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು,

    ಕ.ಸಾ.ಪ. ಉಡುಪಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಮತ್ತು ನರೇಂದ್ರ ಕುಮಾರ್ ಕೋಟ, ಗೌರವ ಕೋಶಾಧ್ಯಕ್ಷರಾದ ಮನೋಹರ ಪಿ.

    ಹಾಗೂ ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದಿಂದ ಅಧ್ಯಕ್ಷರಾದ ಗುಂಡ್ಮಿ ರಾಮಚಂದ್ರ ಐತಾಳ್, ಗೌರವ ಕಾರ್ಯದರ್ಶಿಗಳಾದ ಪಕೀರಪ್ಪ ಮತ್ತು ಜ್ಯೋತಿ ಪೂಜಾರಿ, ಗೌರವ ಕೋಶಾಧಿಕಾರಿಗಳಾದ ಅಲ್ತಾರು ನಾಗರಾಜ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು.

    Share. Facebook Twitter Pinterest LinkedIn Tumblr WhatsApp Email
    Previous Articleಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ – ‘ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವ’
    Next Article ಎಡನೀರು ಮಠ ಕಾಸರಗೋಡಿನ ಶಾಖಾ ಮಠ ‌ಬೆಂಗಳೂರಿನ ಶ್ರೀ ಕೃಷ್ಣ ದೇವಾಲಯದಲ್ಲಿ ‘ಪ್ರತಿಷ್ಟಾ ಮಹೋತ್ಸವ ಹಾಗೂ ವಾರ್ಷಿಕೋತ್ಸವ ‘
    roovari

    Add Comment Cancel Reply


    Related Posts

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.