Subscribe to Updates

    Get the latest creative news from FooBar about art, design and business.

    What's Hot

    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ರಜತ ಕಲಾ ಯಾನ’ | ಅಕ್ಟೋಬರ್ 26

    October 22, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನ | ಅಕ್ಟೋಬರ್ 25

    October 22, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಗೀತೆಗಳು’ | ಅಕ್ಟೋಬರ್ 26

    October 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » 21ನೇ ವರ್ಷದ ‘ಕಲಾಕಾರ್ ಪುರಸ್ಕಾರ’ಕ್ಕೆ ಕಾಸರಗೋಡು ಚಿನ್ನಾ ಆಯ್ಕೆ
    Awards

    21ನೇ ವರ್ಷದ ‘ಕಲಾಕಾರ್ ಪುರಸ್ಕಾರ’ಕ್ಕೆ ಕಾಸರಗೋಡು ಚಿನ್ನಾ ಆಯ್ಕೆ

    October 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ, ಕೊಂಕಣಿ ಕಲೆ, ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಕಲಾವಿದರನ್ನು ಗೌರವಿಸಲು ನೀಡುವ 21ನೇ ವರ್ಷದ ‘ಕಲಾಕಾರ್ ಪುರಸ್ಕಾರ’ಕ್ಕೆ ಕಾಸರಗೋಡು ಚಿನ್ನಾ ಇವರನ್ನು ಆಯ್ಕೆ ಮಾಡಲಾಗಿದೆ. ದಿನಾಂಕ 02 ನವೆಂಬರ್ 2025ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 6-00 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಇವರು ರೂ.50,000/- ನಗದು ಒಳಗೊಂಡ ಈ ಪುರಸ್ಕಾರವನ್ನು ಪ್ರದಾನ ಮಾಡಲಿರುವರು. ಭಾಷಾ ತಜ್ಞ ಡೊ ಪ್ರತಾಪ್ ನಾಯ್ಕ್ ಮತ್ತು ಮಸ್ಕತ್ ನಲ್ಲಿರುವ ಉದ್ಯಮಿ ಹಾಗೂ ಶ್ರೇಷ್ಟ ಕಲಾಪ್ರೋತ್ಸಾಹಕ ಸ್ಟ್ಯಾನ್ಲಿ ಫೆರ್ನಾಂಡಿಸ್ (ದಾಟ್ಟು) ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

    ಶ್ರೀನಿವಾಸ ರಾವ್ ಎಸ್. (68) ಕಾಸರಗೋಡು ಚಿನ್ನಾ ಎಂದು ರಂಗಲೋಕದಲ್ಲಿ ಪ್ರಸಿದ್ಧರು. ನಟನೆಯಲ್ಲಿ ಚಿನ್ನದ ಪದಕದೊಡನೆ ಡಿ.ಎಫ್.ಎ. ಪದವಿ ಪಡೆದಿದ್ದಾರೆ. 1969ರಲ್ಲಿ ರಂಗ ಪ್ರವೇಶ ಮಾಡಿದ ಇವರು ಕೊಂಕಣಿ, ಕನ್ನಡ, ತುಳು, ಮಲಯಾಳಂ ಹಾಗೂ ಇಂಗ್ಲೀಷಿನ 400ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಹಲವು ನಾಟಕಗಳಿಗೆ ನಿರ್ದೇಶನ ನೀಡಿದ್ದು, ಭಾಷಾಂತರ ಮಾಡಿದ್ದಾರೆ. ಆಕಾಶವಾಣಿಯಲ್ಲಿ, ದೂರದರ್ಶನದಲ್ಲಿ ತಮ್ಮ ಪ್ರತಿಭೆ ಮೆರೆದಿದ್ದು, ಲಾರಿ ನಾಟಕ, ಗೀತ ಸಂಗೀತ ರಥ, ಯಕ್ಷತೇರು, ಕನ್ನಡ ಸ್ವರ, ಮೂಕಾಭಿನಯ ಇತ್ಯಾದಿ ಪ್ರಯೋಗಗಳ ನೂರಾರು ಪ್ರದರ್ಶನಗಳನ್ನು ಮಾಡಿದ್ದಾರೆ. ಸಿನಿಮಾ ನಿರ್ದೇಶನ ಹಾಗೂ ನಟನೆಯಲ್ಲೂ ಕೈಯಾಡಿಸಿದ ಇವರು ನಿರ್ದೇಶಿಸಿದ ʻಉಜ್ವಾಡುʼ ಕೊಂಕಣಿ ಚಲನಚಿತ್ರಕ್ಕೆ 2011ರ ಕರ್ನಾಟಕ ರಾಜ್ಯ ಉತ್ತಮ ಪ್ರಾದೇಶಿಕ ಚಲನಚಿತ್ರದ ಗೌರವ ಲಭಿಸಿದೆ.

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದು, ‘ಘರ್ ಘರ್ ಕೊಂಕಣಿ’ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಕೊಂಕಣಿಯ ಎಲ್ಲಾ ಸಮುದಾಯಗಳ ನಡುವೆ ಭಾಷಾಭಿಮಾನ ಮೂಡಿಸಿದ್ದಾರೆ. ರಂಗ ಚಿನ್ನಾರಿ ಟ್ರಸ್ಟ್ ಮೂಲಕ ಹಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಿದ್ದು, ಸಾಹಿತ್ಯಕ್ಕೂ ಕೊಡುಗೆ ನೀಡಿದ್ದಾರೆ. ಇವರ ʻತೀಸ್ ಕಾಣಿಯೊʼ ಅನುವಾದ ಸಂಗ್ರಹಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಪುರಸ್ಕಾರ ಲಭಿಸಿದೆ. ಕೊಂಕಣಿ ಅಕಾಡೆಮಿಯ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕೇರಳ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಟಕ ರಂಗದಲ್ಲಿ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳೊಡನೆ ಹಲವಾರು ಸನ್ಮಾನಗಳು ದೇಶ ವಿದೇಶಗಳಲ್ಲಿ ಲಭಿಸಿವೆ. ಸನ್ಮಾನ ಕಾರ್ಯಕ್ರಮದ ನಂತರ ತಿಂಗಳ ವೇದಿಕೆ ಸರಣಿಯ 287ನೇ ಕಾರ್ಯಕ್ರಮದಲ್ಲಿ ಮ್ಯಾಕ್ಸಿಮ್ ಪಿರೇರಾ ಮತ್ತು ತಂಡದಿಂದ 17ನೇ ಮ್ಯಾಕ್ಸಿಮ್ ನೈಟ್ ರಸಮಂಜರಿ ನಡೆಯಲಿದೆ.

    ಕೊಂಕಣಿ ಕಲಾವಿದರನ್ನು ಗೌರವಿಸಲು 2005ರಲ್ಲಿ ಕಾರ್ವಾಲ್ ಮನೆತನದ ಹೆಸರಲ್ಲಿ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕಲಾಕಾರ್ ಪುರಸ್ಕಾರವನ್ನು ಸ್ಥಾಪಿಸಲಾಗಿತ್ತು. ಇದುವರೆಗೆ ಅರುಣ್ರಾಕಜ್ ರೊಡ್ರಿಗಸ್ (ನಾಟಕ), ಜೊಯೆಲ್ ಪಿರೇರಾ (ಸಂಗೀತ), ಹ್ಯಾರಿ ಡಿ’ಸೋಜಾ (ಬ್ರಾಸ್ ಬ್ಯಾಂಡ್), ವಂ. ಚಾರ್ಲ್ಸ್ ವಾಸ್ (ಭಕ್ತಿ ಸಂಗೀತ), ಅನುರಾಧಾ ಧಾರೇಶ್ವರ್ (ಸಂಗೀತ), ಸಂತ ಭದ್ರಗಿರಿ ಅಚ್ಯುತದಾಸ್, ಬೆಂಗಳೂರು (ಹರಿಕಥೆ), ಜೇಮ್ಸ್ ಲೊಪಿಸ್ ಹೊನ್ನಾವರ (ಬ್ರಾಸ್ ಬ್ಯಾಂಡ್), ನೊರ್ಬರ್ಟ್ ಗೊನ್ಸಾಲ್ವಿಸ್ (ಸಂಗೀತ), ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ (ನಾಟಕ), ರೋಶನ್ ಡಿ’ಸೋಜ (ಸಂಗೀತ), ಕ್ರಿಸ್ಟೋಫರ್ ಡಿ’ಸೋಜ (ನಾಟಕ), ಆವಿಲ್ ಡಿ’ಕ್ರೂಜ್ (ನೃತ್ಯ) ಎಂ. ಗೋಪಾಲ ಗೌಡ (ಜನಪದ), ಡೊಲ್ಲಾ ಮಂಗಳೂರು (ನಾಟಕ), ಐರಿನ್ ರೆಬೆಲ್ಲೊ (ಮದುವೆ ಸೊಭಾನೆ ಹಾಡುಗಳು), ಅನಿತಾ ಡಿಸೋಜ (ಗಾಯನ), ನಿಹಾಲ್ ತಾವ್ರೊ (ಗಾಯನ), ಮೆಲ್ವಿನ್ ಪೆರಿಸ್ (ಸಂಗೀತ), ಆಪೊಲಿನಾರಿಸ್ ಡಿಸೋಜ (ಗಾಯನ) ಮತ್ತು ರೋಶನ್ ಬೇಳ (ಸಂಗೀತ) ಇವರಿಗೆ ಈ ಪುರಸ್ಕಾರ ಲಭಿಸಿದೆ.

    award baikady Literature roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ
    Next Article ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ‘ಉದಯರಾಗ – 62’ | ಅಕ್ಟೋಬರ್ 26
    roovari

    Add Comment Cancel Reply


    Related Posts

    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ರಜತ ಕಲಾ ಯಾನ’ | ಅಕ್ಟೋಬರ್ 26

    October 22, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನ | ಅಕ್ಟೋಬರ್ 25

    October 22, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಗೀತೆಗಳು’ | ಅಕ್ಟೋಬರ್ 26

    October 22, 2025

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಿರಿಯ ನಾಗರಿಕರಿಗೆ ಕವಿಗೋಷ್ಠಿ

    October 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.