Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಾಂಗೋಡು ದೇವಾಲಯದಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ಮತ್ತು ವಿವಿಧ ಪ್ರಶಸ್ತಿ ಪ್ರದಾನ
    Awards

    ಪಾಂಗೋಡು ದೇವಾಲಯದಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ಮತ್ತು ವಿವಿಧ ಪ್ರಶಸ್ತಿ ಪ್ರದಾನ

    October 7, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ಕ್ಷೇತ್ರದ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್ ಹಾಗೂ ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಜಂಟಿ ಆಶ್ರಯದಲ್ಲಿ ದಿನಾಂಕ 6 ಅಕ್ಟೋಬರ್ 2024ರಂದು ಪಾಂಗೋಡು ಕ್ಷೇತ್ರದ ‘ಶ್ರೀ ದುರ್ಗಾಂಬಾ ವೇದಿಕೆ’ಯಲ್ಲಿ ಕನ್ನಡ ಭವನದ ಕೆ ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್ ಸಾರಥ್ಯದಲ್ಲಿ ಕಾಸರಗೋಡು ದಸರಾ ಸಾಹಿತ್ಯ ಸಾಂಸ್ಕೃತಿಕೋತ್ಸವ-2024’ ನಡೆಯಿತು. ಈ ಕಾರ್ಯಕ್ರಮದಲ್ಲಿ ಕುಣಿತ ಭಜನೆ, ಭಜನೆ, ಸತ್ಸಂಗ ಹಾಗೂ ಶ್ರೀಮತಿ ಶಾಂತಾ ಕುಂಟಿನಿ ಸಾರಥ್ಯದ ಉಪ್ಪಿನಂಗಡಿಯ ಸತ್ಯಶಾಂತ ಪ್ರತಿಷ್ಠಾನದ ಸದಸ್ಯರಿಂದ ‘ಗಾನಲಹರಿ’ ನಡೆಯಿತು.

    ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ ಸಮಿತಿ ವತಿಯಿಂದ ಹಿರಿಯ ಸಾಹಿತಿ, ನಿವೃತ್ತ ಶಿಕ್ಷಕ ವಿ.ಬಿ. ಕುಳಮರ್ವ, ಲಲಿತಾಲಕ್ಷ್ಮಿ ಕುಳಮರ್ವ ದಂಪತಿಯರಿಗೆ ‘ಕಾಸರಗೋಡು ದಸರಾ ಸನ್ಮಾನ’ ನಡೆಯಿತು. ಕನ್ನಡ ಭವನ ಮತ್ತು ಗ್ರಂಥಾಲಯದ ಅಧ್ಯಕ್ಷ ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್, ಕುಳಮರ್ವ ದಂಪತಿಗಳಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಅಭಿನಂದಿಸಿದರು.

    ಡಾ. ಕೆ.ಜಿ. ವೆಂಕಟೇಶ್ ಶಿವಮೊಗ್ಗ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪಿ.ವಿ. ಪ್ರದೀಪ್ ಕುಮಾರ್ ಮಂಗಳೂರು, ಡಾ. ಕೊಳಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ. ಭಟ್  ಮಂಜೇಶ್ವರ, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು ಮೈಸೂರು, ವಿರಾಜ್ ಅಡೂರು, ಸೀತಾಲಕ್ಷ್ಮೀ ವರ್ಮ ವಿಟ್ಲ ,ಶಾಂತಾ ಪುತ್ತೂರು, ರತ್ನಾ ಕೆ. ಭಟ್ ತಲಂಜೇರಿ, ಡಾ. ಶೈಲಾ ಕೆ.ಎನ್. ಮಂಗಳೂರು ಇವರುಗಳಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ 2024’ ನೀಡಿ ಗೌರವಿಸಲಾಯಿತು.

    ರೇಖಾ ಸುದೇಶರಾವ್ ಮಂಗಳೂರು, ಅನ್ನಪೂರ್ಣ ಎನ್. ಕುತ್ತಾಜೆ, ಕುಸುಮಾಕರ ಅಂಬೆಕಲ್ಲು, ರವೀಂದ್ರನ್ ಪಾಡಿ, ವಿದ್ಯಾ ರಕ್ಷಿತ್ ಪುತ್ತೂರು, ರೇಖಾ ರೋಶನ್ ಮಲ್ಲಿಗೆಮಾಡು, ಚಂಚಲಾಕ್ಷಿ ಶ್ಯಾಮಪ್ರಕಾಶ್ ಕಾಸರಗೋಡು, ಮೇಘ ಶಿವರಾಜ್ ಬೀರಂತಬೈಲು, ಅನಿತಾ ಶೆಣೈ ಮಂಗಳೂರು, ನಿರ್ಮಲಾ ಶೇಷಪ್ಪ ಕುಲಾಲ್ ಖಂಡಿಗೆ ,ಶ್ರೀಹರಿ ಭಟ್ ಪೆಲ್ತಾಜೆ, ಸುಭಾಷಿಣಿ ಚಂದ್ರ ಬೇಕೂರು ಇವರುಗಳಿಗೆ ‘ಕಾಸರಗೋಡು ದಸರಾ ಕವಿರತ್ನ ಪ್ರಶಸ್ತಿ 2024 ನೀಡಿ ಅಭಿನಂದಿಸಲಾಯಿತು.

    ಶಿವಾನಿ ಕೆ. ಪೈವಳಿಕೆ, ಪ್ರಿಯಾ ಬಾಯಾರು, ಸುಜಿತ್ ಕುಮಾರ್ ಬೇಕೂರು, ಕಲಾವತಿ ಟೀಚರ್ ಕುಂಬಳೆ, ಹಿತೇಶ್ ಕುಮಾರ್ ನೀರ್ಚಾಲು, ಗಿರೀಶ್ ಪಿ.ಎಂ. ಚಿತ್ತಾರಿ, ಸುಶೀಲಾ ಕೆ ಪದ್ಯಾಣ, ಸಂಧ್ಯಾ ಗೀತಾ ಬಾಯಾರು, ಗಾಯತ್ರಿ ಪಳ್ಳತ್ತಡ್ಕ, ಗಿರೀಶ್ ಪೆರಿಯಡ್ಕ ಉಪ್ಪಿನಂಗಡಿ, ಶ್ವೇತಾ ಡಿ. ಬಂಟ್ವಾಳ ಇವರುಗಳಿಗೆ ಕಾಸರಗೋಡು ದಸರಾ ಸಾಧಕ ಪ್ರಶಸ್ತಿ 2024 ನೀಡಿ ಪುರಸ್ಕರಿಸಲಾಯಿತು.

    ಬಳಿಕ ನಡೆದ ಕಾಸರಗೋಡು ದಸರಾ ಕವಿಗೋಷ್ಠಿಯಲ್ಲಿ 23 ಮಂದಿ ಕವಿಗಳು ಕವನ ವಾಚನ ಮಾಡಿದರು. ಸಾಹಿತಿ ವಿ.ಬಿ. ಕುಳಮರ್ವ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಶ್ರೀಮತಿ ಲಲಿತಾ ಲಕ್ಷ್ಮೀ ಕುಳಮರ್ವ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್ ನಿರ್ವಾಹಕ ಪ್ರಕಾಶ್ಚಂದ್ರ ಕೆ.ಪಿ,ಬಿ ಇ ಎಂ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ರಾಜೇಶ್ಚಂದ್ರ ಕೆ.ಪಿ. ವಿಜ್ಡಂ ಸಂಸ್ಥೆಯ ಸಿ.ಇ.ಒ. ಅಭಿಲಾಷ್ ಕ್ಷತ್ರಿಯ, ಶ್ರೀಮತಿ ಸಂಧ್ಯಾರಾಣಿ ಟೀಚರ್, ರಾಜೇಶ್ ಅಣಂಗೂರು ಉಪಸ್ಥಿತರಿದ್ದರು.

    ಕಾಸರಗೋಡು ಜಿಲ್ಲೆಯ ಆಯ್ದ ಪದವಿ ಕಾಲೇಜಿನ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭರವಸೆಯ ಬೆಳಕು ಪ್ರಶಸ್ತಿಗಳನ್ನು ವಿತರಿಸಲಾಯಿತು. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ದೀಕ್ಷಿತಾ, ಕೃಷ್ಣರಾಜ್, ಮೀನಾಕ್ಷಿ ವಿ., ಕಾಸರಗೋಡು ಸರಕಾರಿ ಕಾಲೇಜಿನ ಸ್ನೇಹಾ ಎಸ್.ವಿ., ಆಯಿಶತ್ ಫರ್ಹಾ ಸುಲ್ತಾನ, ಪೆರ್ಲ ನಾಲಂದ ಕಾಲೇಜಿನ ಅರ್ಚನಾ ಕೆ., ಗಾನಸಮೃದ್ಧಿ ಕೆ., ಪೆರಿಯ ಕಾಲೇಜಿನ ಮಾಳವಿಕಾ ಎಂ., ಪ್ರಣವ್ ಎಂ.ವಿ., ಅಕ್ಷತಾ ಪಿ, ಸೀತಾಂಗೋಳಿ ಮಾಲಿಕ್ ದಿನಾರ್ ಕಾಲೇಜಿನ ಅಹಮ್ಮದ್ ಶೆಹ್ಸಾದ್, ಸಲ್ವಾ ಅಬ್ದುಲ್ ಖಾದರ್ ಫೈಜಿ ಪ್ರಶಸ್ತಿಗಳನ್ನು ಪಡೆದುಕೊಂಡರು.

    ಅಡೂರು ಶಿವಗಿರಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಭವನ ಗ್ರಂಥಾಲಯದ ಅಧ್ಯಕ್ಷ ವಾಮನ ರಾವ್ ಬೇಕಲ್ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿ, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಜನಪದರು ರಂಗಮಂದಿರದಲ್ಲಿ ‘SOME ಸಾರ’ ನಾಟಕ ಪ್ರದರ್ಶನ | ಅಕ್ಟೋಬರ್ 8
    Next Article ವಿಶೇಷ ಲೇಖನ | ನಗುವಿನ ಸವಿ ಹಂಚಿದ ಮನೋರಮಾ ಅಮ್ಮನಿಗೆ ನುಡಿ ನಮನ
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.