Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    News

    ಕಾಸರಗೋಡಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

    March 9, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    9 ಮಾರ್ಚ್ 2023, ಕಾಸರಗೋಡು: ಬಹುಭಾಷಾ ಪ್ರದೇಶವಾಗಿರುವ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅನುವಾದದ ಕುರಿತಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರ ಸಂಕಿರಣ ಔಚಿತ್ಯಪೂರ್ಣ ಎಂದು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಮಾನ್ಯ ಉಪಕುಲಪತಿಗಳಾದ ಪ್ರೊ. ಎಚ್. ವೆಂಕಟೇಶ್ವರಲು ಅವರು ಹೇಳಿದರು. ಭಾಷೆಗಳ ಅಳಿವು ಉಳಿವಿನ ಮೇಲೆ ಮನುಷ್ಯನ ಅಸ್ತಿತ್ವವಿದೆ. ಭಾರತದ ವಿವಿಧ ಪ್ರಾದೇಶಿಕ ಭಾಷೆಗಳ ಅಭಿವೃದ್ದಿಯನ್ನು ಪ್ರೋತ್ಸಾಹಿಸಬೇಕಾಗಿದೆ ಎಂದರು.

    ಕಾಸರಗೋಡಿನ ಪೆರಿಯದಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ನಡೆದ ‘ಅನುವಾದ – ಅನುಸಂಧಾನ: ತತ್ವ ಮತ್ತು ಪ್ರಯೋಗ’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಭಾಷಾ ವಿಭಾಗಗಳ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವುಗಳನ್ನು ಸಶಕ್ತವಾಗಿ ಕಟ್ಟುತ್ತಿದೆ. ಈ ನಿಟ್ಟಿನಲ್ಲಿ ಕನ್ನಡ ವಿಭಾಗವು ಸಪ್ತಭಾಷಾ ಸಂಗಮ ಭೂಮಿಯಾದ ಕಾಸರಗೋಡಿನ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಅನುವಾದ ತತ್ವ ಮತ್ತು ಪ್ರಯೋಗ ಕುರಿತ ವಿಚಾರ ಸಂಕಿರಣವು ಅತ್ಯಂತ ಮಹತ್ವವನ್ನು ಪಡೆದಿದೆ ಎಂದರು.

    ವಿಚಾರ ಸಂಕಿರಣದ ಕುರಿತು ದಿಕ್ಸೂಚಿ ಮಾತುಗಳನ್ನಾಡಿದ ಖ್ಯಾತ ವಿಮರ್ಶಕರಾದ ಪ್ರೊ. ಒ.ಎಲ್. ನಾಗಭೂಷಣ ಸ್ವಾಮಿಯವರು ನಾವು ಕಲಿತ ಭಾಷೆಯ ವಿಚಾರಗಳನ್ನು ನಮ್ಮ ಭಾಷೆಗೆ ತರುವುದು ಮುಖ್ಯ. ಯಾವ ಭಾಷೆಯೂ ಇನ್ನೊಂದು ಭಾಷೆಗೆ ಶತ್ರುವಲ್ಲ ಎಂದು ಹೇಳಿದರು. ಭಾಷೆಯನ್ನು ಕಗ್ಗಂಟು ಮಾಡಬಾರದು. ಭಾಷೆ ಹೇಗೆ ಬಳಕೆಯಲ್ಲಿದೆಯೋ ಅದಕ್ಕೆ ಮಾನ್ಯತೆ ನೀಡಬೇಕು. ಭಾಷೆಯಲ್ಲಿ ಮಡಿವಂತಿಕೆ ಜಾಸ್ತಿಯಾದರೆ ಭಾಷೆ ಮಡಿಯುತ್ತದೆ. ಎಲ್ಲ ಗ್ರಹಿಕೆಗಳೂ ಅನುವಾದವಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಮುರಳೀಧರನ್ ನಂಬಿಯಾರ್ ಅವರು ವಿಚಾರ ಸಂಕಿರಣವನ್ನುದ್ದೇಶಿಸಿ ಮಾತನಾಡಿದರು. ಹಿರಿಯ ಪತ್ರಕರ್ತರಾದ ಡಾ. ರಾಘವ ನಂಬಿಯಾರ್ ‘ಸಂಸ್ಕೃತಿ ದಡಗಳ ನಡುವೆ’ ಮತ್ತು ಭಾಷಾಂತರಕಾರರಾದ ಡಾ. ಮಾಧವ ಚಿಪ್ಪಳಿ ‘ಪದ, ಪದಾರ್ಥ ಪ್ರಯೋಗ’ ವಿಚಾರಗಳ ಬಗೆಗೆ ಗೋಷ್ಠಿಗಳನ್ನು ನಡೆಸಿಕೊಟ್ಟರು. ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಂಶುಪಾಲ ಶ್ರೀ ಮಹಮದ್ ಆಲಿ ಕೆ. ಪ್ರಬಂಧ ಮಂಡನೆಯ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕರಾದ ಗೋವಿಂದರಾಜು ಕೆ.ಎಂ. ಮತ್ತು ಚೇತನ್ ಎಂ. ವಿವಿಧ ಗೋಷ್ಠಿಗಳನ್ನು ನಿರ್ವಹಿಸಿದರು.

    ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥೆ ಡಾ. ಸೌಮ್ಯಾ ಹೆಚ್. ಪ್ರಾಸ್ತಾವಿಕ ಮಾತುಗಳನ್ನಾಡಿ, ಅನುವಾದ ಕೇವಲ ಭಾಷಾಂತರ ಮಾತ್ರವಲ್ಲ, ಬೇರೆ ಬೇರೆ ಭಾಷೆ, ಸಂಸ್ಕೃತಿಗಳ ಜೊತೆಗೆ ಅನುಸಂಧಾನ ಮಾಡಿಕೊಳ್ಳುವುದೇ ಆಗಿದೆ ಎಂದು ಹೇಳುತ್ತಾ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ಪ್ರವೀಣ ಪದ್ಯಾಣ ವಂದಿಸಿ, ಬಬಿತಾ ನಿರೂಪಿಸಿದರು. ಕೇರಳ ವಿಶ್ವವಿದ್ಯಾಲಯದ ಡೀನರು, ಪ್ರಾಧ್ಯಾಪಕರು, ಸಾಹಿತ್ಯಾಸಕ್ತರು ಹಾಜರಿದ್ದ ವೇದಿಕೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಬಂದಿದ್ದ ಸಂಶೋಧಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಾರ್ಚ್ 12ರಂದು ಬೆಂಗಳೂರಿನಲ್ಲಿ ಅಬ್ಬಕ್ಕ ಉತ್ಸವ
    Next Article ಮಂಗಳೂರಿನ ಉದಯ ರಾಗದಲ್ಲಿ ಪ್ರಣವ್ ಅಡಿಗ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಕಾಮನಬಿಲ್ಲಿನ ರಂಗು ಬಿಂಬಿಸಿದ ‘ನೃತ್ಯ ದರ್ಪಣ್’ದ ‘ತಾಳ್ ತರಂಗ್’

    December 18, 2025

    ನಾಣಿ ಅಂಗಳದಲ್ಲಿ ‘ಮಾಯಾ ಬೇಟೆ’ ನಾಟಕ ಪ್ರದರ್ಶನ | ಡಿಸೆಂಬರ್ 20

    December 17, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ರಾಗ ಸುಧಾರಸ 2025’ | ಡಿಸೆಂಬರ್ 13ರಿಂದ 20

    December 13, 2025

    ಸ್ವರ, ತಾಳ, ಲಯಗಳ ಮಿಲನವೇ ಸಂಗೀತ – ನಿವೃತ್ತ ಡಿವೈಎಸ್ಪಿ ಟಿ.ಪಿ. ರಂಜಿತ್

    November 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.