Subscribe to Updates

    Get the latest creative news from FooBar about art, design and business.

    What's Hot

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣುಗಳ ‘ಕವಿಗೋಷ್ಠಿ’ | ಜೂನ್ 06 

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ತಾಳಮದ್ದಳೆ ಕಾರ್ಯಕ್ರಮದಲ್ಲಿ ‘ಕಾಶ್ಮೀರ ವಿಜಯ’
    Yakshagana

    ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ತಾಳಮದ್ದಳೆ ಕಾರ್ಯಕ್ರಮದಲ್ಲಿ ‘ಕಾಶ್ಮೀರ ವಿಜಯ’

    August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸುಶಾಸನ ಉಡುಪಿ ಪ್ರಾಯೋಜಕತ್ವದಲ್ಲಿ ಸುಧಾಕರ ಆಚಾರ್ಯರ ಕಲಾರಾಧನೆಯ 33ನೇ ವರ್ಷದ ಸ್ವಾತಂತ್ರ್ಯೋತ್ಸವ ತಾಳಮದ್ದಳೆ ಕಾರ್ಯಕ್ರಮವು ಉಡುಪಿ ಕಿದಿಯೂರು ಹೊಟೇಲ್‌ನಲ್ಲಿ ದಿನಾಂಕ 15-08-2023 ಮಂಗಳವಾರದಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಸ್ಥಾಪಕ ಪಟ್ಟ ಸತೀಶ ಶೆಟ್ಟಿಯವರು “ಯಕ್ಷಗಾನ ತಾಳಮದ್ದಳೆಯ ಮೂಲಕ ‘ಕಾಶ್ಮೀರ ವಿಜಯ’ ಪ್ರಸ್ತುತಿಯೊಂದಿಗೆ ಜನಮಾನಸದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಿಗೊಳಿಸುವ ಸಂಕಲ್ಪ ಶ್ಲಾಘನೀಯ. ದೇಶಪ್ರೇಮವನ್ನು ಉದ್ದೀಪನಗೊಳಿಸುವ ಕಥೆಯಾಧಾರಿತ ಸ್ವರಾಜ್ಯ ವಿಜಯ, ಹೈದರಾಬಾದ್ ವಿಜಯ, ಕಾಶ್ಮೀರ ವಿಜಯ ಎನ್ನುವ ಪ್ರಸಂಗಗಳನ್ನು ಪ್ರಸ್ತುತಪಡಿಸಿದ ಹೆಚ್ಚುಗಾರಿಕೆಯೊಂದಿಗೆ 33 ವರ್ಷಗಳಿಂದ ಸ್ವಾತಂತ್ರ್ಯೋತ್ಸವದಂದು ತಾಳಮದ್ದಳೆ ಆಯೋಜಿಸಿಕೊಂಡು ಬರುತ್ತಿರುವ ಸುಧಾಕರ ಆಚಾರ್ಯರದ್ದು ಐತಿಹಾಸಿಕ ಹೆಜ್ಜೆಯಾಗಿದೆ” ಎಂದು ಹೇಳಿದರು.

    ಪ್ರಸಂಗಕರ್ತ ಪ್ರೊ. ಪವನ್ ಕಿರಣ್ ಕೆರೆ ಪ್ರಸ್ತಾವನೆಗೈದರು. ಶಾಸಕರಾದ ಯಶ್ ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಅಮೆರಿಕ ನ್ಯೂಜೆರ್ಸಿಯ ಪುತ್ತಿಗೆ ಮಠದ ಅರ್ಚಕ ರಾಘವೇಂದ್ರ ಮೂಡುಬಿದಿರೆ, ಹರ್ಷದ ಪ್ರಕಾಶ್ ರಿಟೇಲ್ ಪೈ.ಲಿ.ನ ಎಂ.ಡಿ. ಶ್ರೀ ಕೆ. ಸೂರ್ಯಪ್ರಕಾಶ್, ತೋಟದಮನೆ ದಿವಾಕರ ಶೆಟ್ಟಿ, ಉದ್ಯಮಿಗಳಾದ ಬಿ.ರಮಾನಂದ ರಾವ್, ಬಿ.ರಾಮಪ್ರಸಾದ ರಾವ್, ಕಿದಿಯೂರು ಹೊಟೇಲ್‌ನ ಡಾ.ಅಭಿನ್ ದೇವದಾಸ ಶ್ರೀಯಾನ್‌, ವಿ.ಜಿ. ಶೆಟ್ಟಿ, ನರಸಿಂಹ ಭಟ್ ಖಂಡಿಗೆ, ಡಾ.ಹರೀಶ ಜೋಷಿ, ಡಾ.ಪ್ರಖ್ಯಾತ್‌ ಶೆಟ್ಟಿ, ಟಿ.ಶಂಭು ಶೆಟ್ಟಿ, ಭುವನ ಪ್ರಸಾದ ಹೆಗ್ಡೆ, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ, ತ್ರಿಲೋಚನ ಶಾಸ್ತ್ರಿ ಅಮಿತಾ ಸುಧಾಕರ ಆಚಾರ್ಯ, ಡಾ.ದಿವ್ಯಾ ಸತ್ರಾಜಿತ ಭಾರ್ಗವ್ ಉಪಸ್ಥಿತರಿದ್ದರು.

    ಭಾಗವತರಾದ ಎಂ. ದಿನೇಶ ಅಮ್ಮಣ್ಣಾಯ, ಪಟ್ಲ ಸತೀಶ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ, ಡಾ. ಪ್ರಖ್ಯಾತ್ ಶೆಟ್ಟಿ ಹಾಗೂ ಪ್ರಸಿದ್ಧ ಅರ್ಥಧಾರಿಗಳ ಸಹಭಾಗಿತ್ವದಲ್ಲಿ ಸುಂದರ ಭ್ರಾತೃತ್ವ ‘ಕಾಶ್ಮೀರ ವಿಜಯ’ ತಾಳಮದ್ದಳೆ ಪ್ರಸ್ತುತಿಗೊಂಡಿತು. ಸ್ವಾತಂತ್ರ್ಯೋತ್ಸವ ತಾಳಮದ್ದಳೆಯ ಸಂಘಟಕ ಸುಧಾಕರ ಆಚಾರ್ಯ ಸ್ವಾಗತಿಸಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಕಲಾಭಿ ಥಿಯೇಟರ್ ‘ರಂಗಸಂಗೀತ ಕಾರ್ಯಾಗಾರ’
    Next Article ಮಂಗಳೂರಿನಲ್ಲಿ ಮನೋಜ್ಞವಾಗಿ ಪ್ರದರ್ಶನಗೊಂಡ ‘ಕೃಷ್ಣ ಗಾರುಡಿ’ ಮತ್ತು ಸನ್ಮಾನ 
    roovari

    Add Comment Cancel Reply


    Related Posts

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.