Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ
    Awards

    ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ

    January 5, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳಾದೇವಿ : ಯಕ್ಷ ಪ್ರತಿಭೆ ಮಂಗಳೂರು ವತಿಯಿಂದ 15ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮವು ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ದಿನಾಂಕ 23-12-2023ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ ಇವರು ಉದ್ಘಾಟಿಸಿ ಮಾತನಾಡುತ್ತಾ “ಕಲಾವಿದರನ್ನು, ಕಲಾ ಪೋಷರಕನ್ನು ಗುರುತಿಸಿ ಅವರಿಗೆ ಸಮ್ಮಾನ, ಪ್ರಶಸ್ತಿ ಪ್ರದಾನ ಮಾಡುವುದು ಶ್ರೇಷ್ಠ ಕಾರ್ಯ. ವರ್ಷದಿಂದ ವರ್ಷಕ್ಕೆ ಗೋಪಾಲಕೃಷ್ಣ ಆಸ್ರಣ್ಣ ಅವರನ್ನು ಸಂಸ್ಮರಣೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಕಷ್ಟು ಸಂಘಟನೆಗಳು ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿದೆ ಇಂದು ಸಂತೋಷದ ವಿಚಾರ, ಕಟೀಲಿನ ಒಂದು ಮೇಳ ಆರು ಮೇಳಗಳಾಗಿ ವಿಸ್ತರಣೆಗೊಳ್ಳಲೂ ಅವರೇ ಕಾರಣ ಎನ್ನಲು ಹೆಮ್ಮೆಯಾಗುತ್ತಿದೆ” ಎಂದು ಹೇಳಿದರು.

    ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮೂಡುಬಿದಿರೆಯ ಉದ್ಯಮಿ ಶ್ರೀಪತಿ ಭಟ್, ಬರ್ಕೆ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಸುಚೇಂದ್ರ ಅಮೀನ್, ಹರಿನಾರಾಯಣ ಬೈಪಡಿತ್ತಾಯ, ಸಂಸ್ಮರಣಾ ಸಮಿತಿ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಗೌರವ ಸಲಹೆಗಾರ ಅಗರಿ ರಾಘವೇಂದ್ರ ರಾವ್, ಮಂಗಳಾದೇವಿ ದೇಗುಲದ ಟ್ರಸ್ಟಿ ಪ್ರೇಮಲತಾ ಉಪಸ್ಥಿತರಿದ್ದರು. ಶಾಸಕ ವೇದವ್ಯಾಸ ಕಾಮತ್‌ ಮತ್ತು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಭಾಗವಹಿಸಿದ್ದರು. ಯಕ್ಷಗಾನ ಪ್ರೋತ್ಸಾಹಕ ಮತ್ತು ಸಮಾಜ ಸೇವಕ ಪ್ರವೀಣ್ ಶೆಟ್ಟಿ ಪುತ್ತೂರು-ಉಡುಪಿ (ಪುಣೆ) ಅವರಿಗೆ ‘ಗೋಪಾಲಕೃಷ್ಣ ಆಸ್ರಣ್ಣ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಸ್ವಾಗತಿ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ, ಮಹಾತ್ಮಾಗಾಂಧಿ ಅಂತಾರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ಅದಾನಿ ಗ್ರೂಪ್‌ನ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎ.ಸುರೇಶ್‌ ರೈ ಅವರನ್ನು ಅಭಿನಂದಿಸಲಾಯಿತು. ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್, ಸಮಾಜ ಸೇವಕ ಯಜ್ಞೇಶ್ವರ ಬರ್ಕೆ, ಯಕ್ಷಗಾನ ಪ್ರೋತ್ಸಾಹಕ ವೆಂಕಟೇಶ ನಾವಡ ಅವರನ್ನು ಗೌರವಿಸಲಾಯಿತು. ಯಕ್ಷ ಪ್ರತಿಭೆ ಸಂಚಾಲಕ, ಸಂಸ್ಮರಣ ಸಮಿತಿ ಕಾರ್ಯಾಧ್ಯಕ್ಷ ಸಂಜಯ್‌ ಕುಮಾರ್ ಶೆಟ್ಟಿ ಗೋಣಿಬೀಡು ಸ್ವಾಗತಿಸಿ, ಪ್ರಸ್ತಾವಿಸಿದರು. ಕದ್ರಿ ನವನೀತ್ ಶೆಟ್ಟಿ ಅವರು ಸಂಸ್ಮರಣೆ ಮತ್ತು ಅಭಿನಂದನ ನುಡಿಗಳನ್ನಾಡಿದರು. ಸುಧಾಕರ ರಾವ್ ಪೇಜಾವರ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಳ್ಳಾಲ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಕನ್ನಡ ಸಂಭ್ರಮ’
    Next Article ಮೈಸೂರಿನ ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರಿನ ವಾರ್ಷಿಕೋತ್ಸವ | ಜನವರಿ 7
    roovari

    Add Comment Cancel Reply


    Related Posts

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.