Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಟೀಲಿನಲ್ಲಿ ಕನಕದಾಸರ ರಾಮಧಾನ್ಯ ಚರಿತೆ ಅರ್ಥಾನುಸಂಧಾನ – ಗಾಯನ ವ್ಯಾಖ್ಯಾನ
    Literature

    ಕಟೀಲಿನಲ್ಲಿ ಕನಕದಾಸರ ರಾಮಧಾನ್ಯ ಚರಿತೆ ಅರ್ಥಾನುಸಂಧಾನ – ಗಾಯನ ವ್ಯಾಖ್ಯಾನ

    July 12, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು : ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ, ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಕಟೀಲು, ಲಲಿತಕಲಾ ಸಂಘದ ಸಹಯೋಗದಲ್ಲಿ ಕನಕದಾಸರ ರಾಮಧಾನ್ಯ ಚರಿತೆ ಅರ್ಥಾನುಸಂಧಾನ – ಗಾಯನ ವ್ಯಾಖ್ಯಾನ ಕಾರ್ಯಕ್ರಮವನ್ನು ದಿನಾಂಕ :04-07-2023ರಂದು ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ನಡೆಯಿತು.

    ಈ ಕಾರ್ಯಕ್ರಮವನ್ನು ಕಟೀಲು ದೇಗುಲದ ಆನುವಂಶಿಕ ಮೊಕ್ತೇಸರ ಶ್ರೀ ಹರಿನಾರಾಯಣದಾಸ ಆಸ್ರಣ್ಣ ಉದ್ಘಾಟಿಸಿ ಮಾತನಾಡುತ್ತಾ “ವರ್ಣಾಶ್ರಮದ ಹೆಸರಿನಲ್ಲಿ ನಾರಾಯಣಗುರು, ನಿತ್ಯಾನಂದರು. ದಾಸಶ್ರೇಷ್ಟರಾದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಸಮಾಜವನ್ನು ಒಂದಾಗಿಸುವ ಕನಕದಾಸರ ಕೀರ್ತನೆಗಳನ್ನು ಕೇಳುವ ಅರ್ಥೈಸುವ ಮೂಲಕ ಬದುಕನ್ನು ಅರಿಯುವ ಚಿಂತನೆಗಳಿಂದ ಬೆಳೆಯುವ ಅಗತ್ಯವಿದೆ” ಎಂದು ಹೇಳಿದರು.

    ಆಶಯ ಭಾಷಣ ಮಾಡಿದ ವಿವಿಯ ಕನಕದಾಸ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಧನಂಜಯ ಕುಂಬ್ಳೆ ಮಾತನಾಡಿ “ಕನಕದಾಸರ ಕೀರ್ತನೆಗಳು ಕಾವ್ಯಮೌಲ್ಯದ ದೃಷ್ಟಿಯಿಂದ ಮಹತ್ವಪೂರ್ಣವಾದವು. ಅವರ ಕಾವ್ಯಗಳಿಗೆ ಭಕ್ತಿ ಮತ್ತು ಸಾಮಾಜಿಕ ಕಾಳಜಿಗಳೆಂಬ ಎರಡು ಧಾರೆಗಳಿವೆ. ಧಾನ್ಯಗಳ ಮೂಲಕ ಸಾಮಾಜಿಕ ಧ್ಯಾನವನ್ನು ಮಾಡಿದ ರಾಮಧಾನ್ಯ ಚರಿತೆಯನ್ನು ಸಾಮಾಜಿಕ ಪಠ್ಯವಾಗಿ ಅಧ್ಯಯನ ಮಾಡಿದಾಗ ಆಧುನಿಕ ಭಾರತದ ಅನೇಕ ಸಮಸ್ಯೆಗಳನ್ನು ಅದು ಎದುರುಗೊಳ್ಳುವುದನ್ನು ಗಮನಿಸಬಹುದು” ಎಂದರು.

    ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸನತ್‌ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಿಥುನ್‌ ಕೊಡೆತ್ತೂರು, ಕಾಲೇಜಿನ ಪ್ರಾಂಶುಪಾಲರಾದ ಡಾ. ಕೃಷ್ಣ, ಉಪನ್ಯಾಸಕ ಡಾ. ವಿಜಯ್ ವಿ., ಲಲಿತಕಲಾ ಸಂಘದ ಸಂಯೋಜಕಿ ಶ್ರೀಮತಿ ಪೂಜಾ ಕಾಂಚನ್‌ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಕನಕದಾಸರ ರಾಮಧಾನ್ಯ ಚರಿತೆಯ ಅರ್ಥಾನುಸಂಧಾನವನ್ನು ಕಲ್ಮಾಡಿ ಎ.ಎಸ್.ಇ.ಎಂ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪವನ್‌ ಕಿರಣ್ ಕೆರೆ ನಡೆಸಿಕೊಟ್ಟರು. ಸರಕಾರಿ ಕಾಲೇಜು, ಕಾಸರಗೋಡು ಕನ್ನಡ ಸ್ನಾತಕೋತ್ತರ ವಿಭಾಗದ ಸಂಶೋಧನಾರ್ಥಿ ಶ್ರದ್ಧಾ ಭಟ್‌ ನಾಯರ್ಪಳ್ಳ ಇವರು ಗಮಕ ವಾಚನ ಮಾಡಿದರು. ರಾಮಾಯಣದ ಕಥೆಯ ಜೊತೆಗೆ ಸಾಗುವ ಭತ್ತ ರಾಗಿಗಳ ಬಗ್ಗೆ ಚರ್ಚೆಯ ಕುರಿತಾದ ಚರಿತೆಯನ್ನು ವಿವರಿಸಿದರು.

    ಪ್ರಾಚಾರ್ಯ ಡಾ. ಕೃಷ್ಣ ಸ್ವಾಗತಿಸಿದರು. ಉಪನ್ಯಾಸಕಿ ಆಶಾಕೀರ್ತಿ ನಿರೂಪಿಸಿದರು. ಲಲಿತಕಲಾ ಸಂಘದ ಪೂಜಾ ಕಾಂಚನ್ ವಂದಿಸಿದರು. ಡಾ. ಪದ್ಮನಾಭ ಮರಾಠೆ ಕಾರ್ಯಕ್ರಮ ಸಂಯೋಜಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪೆರ್ಡೂರಿನಲ್ಲಿ ಅವಿಭಜಿತ ಉಡುಪಿ ಹಾಗೂ ದ.ಕ. ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆ
    Next Article ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ | ಜುಲೈ 15 ಕೊನೆಯ ದಿನಾಂಕ
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.