Subscribe to Updates

    Get the latest creative news from FooBar about art, design and business.

    What's Hot

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಈ ಹೊತ್ತಿಗೆಯ ‘ಕಥಾ ಪ್ರಶಸ್ತಿ’ ಹಾಗೂ ‘ಕಾವ್ಯ ಪ್ರಶಸ್ತಿ’ ಪ್ರಕಟ
    Awards

    ಈ ಹೊತ್ತಿಗೆಯ ‘ಕಥಾ ಪ್ರಶಸ್ತಿ’ ಹಾಗೂ ‘ಕಾವ್ಯ ಪ್ರಶಸ್ತಿ’ ಪ್ರಕಟ

    January 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ದಾವಣಗೆರೆ ಜಿಲ್ಲೆಯ ಸೊರಟೂರಿನವರಾದ ಶ್ರೀ ಸದಾಶಿವ ಸೊರಟೂರು ಅವರ ಅಪ್ರಕಟಿತ ಕಥಾಸಂಕಲನ ‘ಧ್ಯಾನಕ್ಕೆ ಕೂತ ನದಿ’ 2024ರ ಸಾಲಿನ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ಹಾಗೂ ಮಂಗಳೂರು ಜಿಲ್ಲೆಯ ಸಜಿಪನಡು ಊರಿನವರಾದ ಶ್ರೀ ನಿಝಾಮ್ ಗೋಳಿಪಡ್ಪು ಅವರ ‘ಅನಾಮಧೇಯ ಗೀರುಗಳು’ ಅಪ್ರಕಟಿತ ಕವನ ಸಂಕಲನ ಈ ಸಾಲಿನ ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದೆ. ಎರಡೂ ಪ್ರಶಸ್ತಿಗಳು ತಲಾ ರೂಪಾಯಿ 10,000 ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿವೆ.

    ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ವಿಜೇತರಾದ ಶ್ರೀ ಸದಾಶಿವ ಸೊರಟೂರು ಅವರು ಪ್ರಸ್ತುತ ಹೊನ್ನಾಳಿಯಲ್ಲಿ ವಾಸವಾಗಿದ್ದು, ಹರಿಹರ ತಾಲೂಕಿನ ಮಲೇಬೆನ್ನೂರಿನಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ‘ಅರ್ಧ ಮಳೆ ಅರ್ಧ ಬಿಸಿಲು’ ಇವರ ಮೊದಲ ಕಥಾ ಸಂಕಲನ. ‘ಅಪ್ಪನ ವ್ಹೀಲ್ ಚೇರ್ ಮಾರಾಟಕ್ಕಿದೆ’, ‘ಗಾಯಗೊಂಡ ಸಾಲುಗಳು’ ಇವರ ಕವನ ಸಂಕಲನಗಳು. ನಾಡಿನ ಖ್ಯಾತ ಕತೆಗಾರರು ಹಾಗೂ ಪತ್ರಕರ್ತರಾಗಿರುವ ಶ್ರೀ ದೇವು ಪತ್ತಾರ್ ಅವರು ಈ ಬಾರಿಯ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ವಿಭಾಗದ ತೀರ್ಪುಗಾರರಾಗಿದ್ದರು.

    ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ವಿಜೇತರಾದ ಶ್ರೀ ನಿಝಾಮ್ ಗೋಳಿಪಡ್ಪು ಅವರು ಮಂಗಳೂರು ಜಿಲ್ಲೆಯ ಸಜಿಪನಡು ಗ್ರಾಮದವರು. ಅವಿಜ್ಞಾನಿ ಹೆಸರಲ್ಲಿ ಕವನಗಳನ್ನು ರಚಿಸಿರುವ ನಿಝಾಮ್ ಗೋಳಿಪಡ್ಪು ಅವರು ಪದವಿ ಪೂರ್ವದವರೆಗೆ ಅಭ್ಯಾಸ ಮಾಡಿ, ತಮ್ಮ ಊರಿನಲ್ಲಿ ಕೂಲಿ ಕಾರ್ಮಿಕರಾಗಿದ್ದಾರೆ. ‘ಅನಾಮಧೇಯ ಗೀರುಗಳು’ ಇವರ ಪ್ರಥಮ ಕೃತಿಯಾಗಿದೆ. ನಾಡಿನ ಖ್ಯಾತ ಕವಿ, ಪ್ರತಿಭಾ ನಂದಕುಮಾರ್ ಅವರು ಈ ಹೊತ್ತಿಗೆಯ ಕಾವ್ಯ ಪ್ರಶಸ್ತಿಯ ತೀರ್ಪುಗಾರರಾಗಿದ್ದರು.

    ಈ ಹೊತ್ತಿಗೆಯ ಪೂರ್ವ ಆಯ್ಕೆ ಸಮಿತಿಯ ಕಾವ್ಯ ವಿಭಾಗದಲ್ಲಿ ಸಿಂಧು ರಾವ್ ಮತ್ತು ರೇಣುಕಾ ಕೊಡಗುಂಟಿ ಹಾಗೂ ಕಥಾ ವಿಭಾಗದಲ್ಲಿ ಆನಂದ ಕುಂಚನೂರ್ ಮತ್ತು ಮಧು ವೈ.ಎನ್. ಅವರು ಮೊದಲ ಸುತ್ತಿನಲ್ಲಿ ತಲಾ 11 ಮತ್ತು 10 ಉತ್ತಮ ಸಂಕಲನಗಳನ್ನು ಆಯ್ಕೆ ಮಾಡಿದ್ದರು.
    2024ರ ಮಾರ್ಚ್ ತಿಂಗಳಲ್ಲಿ, ಬೆಂಗಳೂರಿನಲ್ಲಿ ನಡೆಯಲಿರುವ, ಈ ಹೊತ್ತಿಗೆಯ ಹೊನಲು ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಅಲೆವೂರಾಯ ಪ್ರತಿಷ್ಠಾನದಿಂದ ‘ಯಕ್ಷ ತ್ರಿವೇಣಿ’
    Next Article ಕರ್ನಿರೆ ಸುವರ್ಣ ಪ್ರತಿಷ್ಠಾನದಿಂದ ಯಕ್ಷ ಕಲಾರಾಧನೆ – ಕಲಾ ಸಾಧಕರಿಗೆ ಸನ್ಮಾನ
    roovari

    Add Comment Cancel Reply


    Related Posts

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಳಗಾವಿಯಲ್ಲಿ ಡಾ. ಗುರುರಾಜ ಕರಜಗಿ ಇವರಿಂದ ಉಪನ್ಯಾಸ | ಜೂನ್ 02        

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.