Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಪು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭ
    Yakshagana

    ಕಾಪು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭ

    July 13, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪಡುಬಿದ್ರಿ: ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ದಿನಾಂಕ : 12-07-2023ರಂದು ಆರಂಭವಾಯಿತು. ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ “ಮಕ್ಕಳಿಗೆ ಪುರಾಣ ಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ” ಎಂದು ಹೇಳಿದರು.

    ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ.ಜಿ.ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀ ಮುರಳಿ ಕಡೇಕಾರ್ ಮಾತನಾಡಿ, “ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ ಎಂಬುದನ್ನು ಅರಿತ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ವಿಶೇಷ ಆಸಕ್ತಿಯಿಂದಾಗಿ ಈ ಬಾರಿ ಕಾಪು ವಿಧಾನಸಭಾ ವ್ಯಾಪ್ತಿಯ 15 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಗತಿ ಆರಂಭಿಸಲಾಗಿದೆ” ಎಂದರು.

    ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಅನುರಾಧಾ ಪಿ.ಎಸ್. ಇವರು ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಅಶೋಕ ಕೆ. ಇವರು ಧನ್ಯವಾದ ಸಮರ್ಪಿಸಿ, ಸಂಸ್ಕೃತ ಭಾಷಾ ಶಿಕ್ಷಕರಾದ ಡಾ. ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಯಕ್ಷಗಾನದ ಗುರುಗಳಾದ ಶ್ರೀ ನಿತಿನ್ ಪಡುಬಿದ್ರಿ ಇವರು ಗಣಪತಿ ಸ್ತುತಿಯೊಂದಿಗೆ ಯಕ್ಷಗಾನ ತರಬೇತಿಯನ್ನು ಆರಂಭಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ರಾಗ ರತ್ನ ಮಾಲಿಕೆ’ -14 | ಜುಲೈ 15ರಂದು
    Next Article ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ
    roovari

    Add Comment Cancel Reply


    Related Posts

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರದಲ್ಲಿ ತಿಂಗಳ ಸರಣಿ

    January 6, 2026

    ಬೆಂಗಳೂರಿನ ಸ್ವಾಮಿ ವಿವೇಕಾನಂದ ಶತಾಬ್ಧಿ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ | ಜನವರಿ 07

    January 5, 2026

    ಇಡ್ಯಾದಲ್ಲಿ ‘ದಶಮಾನ ವರ್ಷ ಸಂಭ್ರಮಾಚರಣೆ’ಯ ಸಮಾರೋಪ ಸಮಾರಂಭ

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.