ಬದಿಯಡ್ಕ : ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮ ದಿನಾಚರಣೆಯನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಹಾಗೂ ಕುಟುಂಬದ ಸಹಕಾರದೊಂದಿಗೆ ಅವರ ಮನೆಯಲ್ಲಿ ದಿನಾಂಕ 08 ಜೂನ್ 2025ರಂದು ಆಚರಿಸಲಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾದ ಚನಿಯಪ್ಪ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ .ಆರ್. ಸುಬ್ಬಯ್ಯಕಟ್ಟೆ ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಹಿನ್ ಕೇಳೋಟ್ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರೊಫೆಸರ್ ಶ್ರೀನಾಥ್, ಡಾ. ಶ್ರೀನಿಧಿ ಸರಳಾಯ, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರವಿ ನಾಯ್ಕಾಪು, ಪತ್ರಕರ್ತರುಗಳಾದ ಗಂಗಾಧರ ತೆಕ್ಕೆ ಮೂಲೆ, ಪುರುಷೋತ್ತಮ ಭಟ್, ಹರೀಶ್ ಗೋಸಾಡ, ಬದಿಯಡ್ಕ ಬಂಟರ ಸಂಘದ ಅಧ್ಯಕ್ಷ ಶ್ರೀ ನಿರಂಜನ್ ರೈ ಪೆರಡಾಲ, ವಸಂತ ಬಾರಡ್ಕ ಹಾಗೂ ಕಯ್ಯಾರರ ಪುತ್ರ ಪ್ರದೀಪ್ ರೈ ಹಾಗೂ ಸೊಸೆ ಆರತಿ ರೈ ಉಪಸ್ಥಿತರಿದ್ದರು.
ಕುಮಾರಿ ಶ್ರೇಯಾ ತೆಕ್ಕೆಮೂಲೆ ಪ್ರಾರ್ಥನೆ ಹಾಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಸ್ವಾಗತಿಸಿ, ಸುಶ್ಮಿತಾ ಗೋಸಾಡ ಧನ್ಯವಾದಗೈದರು.