Subscribe to Updates

    Get the latest creative news from FooBar about art, design and business.

    What's Hot

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬನಾರಿ ಯಕ್ಷಗಾನ ಸಂಘದ 79ನೇ ವಾರ್ಷಿಕೋತ್ಸವದಲ್ಲಿ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ‘ಕೀರಿಕ್ಕಾಡು ಪ್ರಶಸ್ತಿ’ ಪ್ರದಾನ
    Awards

    ಬನಾರಿ ಯಕ್ಷಗಾನ ಸಂಘದ 79ನೇ ವಾರ್ಷಿಕೋತ್ಸವದಲ್ಲಿ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ‘ಕೀರಿಕ್ಕಾಡು ಪ್ರಶಸ್ತಿ’ ಪ್ರದಾನ

    January 11, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 79ನೇ ವಾರ್ಷಿಕೋತ್ಸವವು ದೇಲಂಪಾಡಿಯ ಕೀರಿಕ್ಕಾಡು ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ದಿನಾಂಕ 23-12-2023ರಂದು ಜರಗಿತು. ಈ ಸಂದರ್ಭದಲ್ಲಿ ಸಂಘದ ಸಂಸ್ಥಾಪಕರಾದ ಕೀರ್ತಿಶೇಷ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.

    ಸಮಾರಂಭದ ಅಧ್ಯಕ್ಷತೆ ವಹಿಸಿದ ಎಡನೀರಿನ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯ ಅವರು ಮಾತನಾಡಿ “ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಗುರುಕುಲವನ್ನು ಸ್ಥಾಪಿಸಿ ಅನೇಕ ಮಂದಿ ಶಿಷ್ಯರನ್ನು ತಯಾರು ಮಾಡಿದ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರು ಓರ್ವ ಅನನ್ಯ ಸಾಧಕರು. ಹಳೆಯ ತಲೆಮಾರಿನ ಪ್ರಮುಖ ಅರ್ಥಧಾರಿಯಾಗಿ, ಹಲವು ಪ್ರಸಂಗಗಳ ಕರ್ತೃವಾಗಿ ಅವರ ಕೊಡುಗೆ ಅಪಾರ. ಅವರು ಹುಟ್ಟು ಹಾಕಿದ ಈ ಸಂಘ ಇಷ್ಟು ದೀರ್ಘಕಾಲ ಕಲಾ ಸೇವೆಯಲ್ಲಿ ನಿರತವಾಗುವುದಕ್ಕೆ ಅವರ ಸಂಕಲ್ಪ ಶಕ್ತಿಯೇ ಪ್ರಮುಖ ಕಾರಣ” ಎಂದರು.

    ಹಿರಿಯ ಕವಯಿತ್ರಿ ಸತ್ಯವತಿ ಯಸ್. ಭಟ್ ಕೊಳಚಪ್ಪು ಸಂಸ್ಮರಣ ಭಾಷಣ ಮಾಡಿ ಕೀರಿಕ್ಕಾಡು ಅವರ ಬದುಕು ಮತ್ತು ಸಾಧನೆಗಳನ್ನು ವಿವರಿಸಿದರು. ಯಕ್ಷಗಾನ ರಂಗದ ಹಿರಿಯ ಮದ್ದಳೆಗಾರರಾದ ಪದ್ಯಾಣ ಶಂಕರನಾರಾಯಣ ಭಟ್ಟ ಅವರಿಗೆ 2023ನೇ ಸಾಲಿನ ‘ಕೀರಿಕ್ಕಾಡು ಪ್ರಶಸ್ತಿ’ಯನ್ನಿತ್ತು ಸಭೆಯಲ್ಲಿ ಸನ್ಮಾನಿಸಲಾಯಿತು. ಖ್ಯಾತ ಅರ್ಥಧಾರಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ನುಡಿಗಳನ್ನಾಡಿದರು. ಪದ್ಯಾಣದವರೊಂದಿಗೆ ಇದ್ದ ಸುದೀರ್ಘ ಒಡನಾಟವನ್ನು ಸ್ಮರಿಸಿಕೊಂಡ ಅವರು ಚೆಂಡೆಯಲ್ಲಿ, ಮದ್ದಳೆಯಲ್ಲಿ ಶಂಕರ ಭಟ್ಟರು ತೋರಿಸುತ್ತಿದ್ದ ಕೈಚಳಕವನ್ನು ಸೋದಾಹರಣವಾಗಿ ಉಲ್ಲೇಖಿಸಿದರು. “ಪದ್ಯಾಣರಂಥವರು ಒಂದು ಕುಟುಂಬಕ್ಕೆ ಅಥವಾ ಒಂದು ವರ್ಗಕ್ಕೆ ಸೀಮಿತವಾದ ಕಲಾವಿದರಲ್ಲ. ಅವರು ಇಡೀ ಸಮಾಜಕ್ಕೆ ಸಂಪತ್ತಾಗಿ ಪರಿಣಮಿಸುವಂತಹ ಅಪೂರ್ವ ಕಲಾವಿದರು. ಯಕ್ಷಗಾನದ ಕುಲಪತಿ ಎನಿಸಿದ ಕೀರಿಕ್ಕಾಡು ಮಾಸ್ತರರ ಪ್ರಶಸ್ತಿ ಅವರಿಗೆ ಸಹಜವಾಗಿಯೇ ಲಭಿಸಿದೆ” ಎಂದವರು ನುಡಿದರು.

    ಪ್ರಶಸ್ತಿ ಸ್ವೀಕರಿಸಿದ ಪದ್ಯಾಣ ಅವರು “ಮಹಾನ್ ಕಲಾವಿದರ ಹೆಸರಿನಲ್ಲಿರುವ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆಯುವುದು ಬದುಕಿನ ಒಂದು ಯೋಗ” ಎಂದು ಧನ್ಯತೆ ವ್ಯಕ್ತಪಡಿಸಿದರು. ಪ್ರಶಸ್ತಿ ಪ್ರದಾನ ಸಂದರ್ಭ ವನಜಾಕ್ಷಿ ಶಂಕರನಾರಾಯಣ ಭಟ್ ಅವರನ್ನೂ ಗೌರವಿಸಲಾಯಿತು. ಬನಾರಿ ಶ್ರೀ ಗೋಪಾಲಕೃಷ್ಣ ಕಲಾಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ವಿಶ್ವವಿನೋದ ಬನಾರಿ ಸನ್ಮಾನ ಪತ್ರ ವಾಚಿಸಿದರು. ನಾರಾಯಣ ದೇಲಂಪಾಡಿ ಕಾರ್ಯಕ್ರಮ ನಿರೂಪಿಸಿದರು. ರಾಮಣ್ಣ ಮಾಸ್ಟರ್ ವಂದಿಸಿದರು.

    ವಾರ್ಷಿಕೋತ್ಸವದ ಅಂಗವಾಗಿ ಸಂಘದ ಸದಸ್ಯರು ಮತ್ತು ಅತಿಥಿ ಕಲಾವಿದರಿಂದ ‘ವಿಭೀಷಣ ನೀತಿ’ ಯಕ್ಷಗಾನ ತಾಳಮದ್ದಳೆ ಜರಗಿತು. ಕು. ರಚನಾ ಚಿದ್ಗಲ್ ಮತ್ತು ಮೋಹನ ಮೆಣಸಿನಕಾಯಿ ಅವರ ಭಾಗವತಿಕೆಗೆ ಪದ್ಯಾಣ ಶಂಕರನಾರಾಯಣ ಭಟ್, ಕುಮಾರ ಸುಬ್ರಹ್ಮಣ್ಯ, ಟಿ.ಡಿ. ಗೋಪಾಲಕೃಷ್ಣ ಭಟ್, ವಿಷ್ಣುಶರಣ ಬನಾರಿ, ಶ್ರೀವತ್ಸ ಸುಳ್ಯ ಭಾಗವಹಿಸಿದರು. ಡಾ. ರಮಾನಂದ ಬನಾರಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ವೆಂಕಟರಾಮ ಭಟ್ ಸುಳ್ಯ, ಸದಾಶಿವ ರೈ ಬೆಳ್ಳಿಪಾಡಿ, ಗಣೇಶ ಕಂಬಳಿಕೆರೆ, ಎಂ. ರಮಾನಂದ ರೈ ಮತ್ತು ವಿದ್ಯಾಭೂಷಣ ಪಂಜಾಜೆ ಅರ್ಥಧಾರಿಗಳಾಗಿದ್ದರು.

    ದಿನಪೂರ್ತಿ ನಡೆದ ಕಾರ್ಯಕ್ರಮದಲ್ಲಿ ರಾಮಕೃಷ್ಣ ಕಾಟುಕುಕ್ಕೆ ಅವರ ಮಾರ್ಗದರ್ಶನದಲ್ಲಿ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಬನಾರಿ ಮತ್ತು ಶ್ರೀ ವಾಗ್ದೇವಿ ಭಜನಾ ಮಂಡಳಿ ಕಾವು ಇವರಿಂದ ಭಜನಾ ಕಾರ್ಯಕ್ರಮ, ಮಹಿಳಾ ಕಲಾವಿದರಿಂದ ‘ಸಮರ ಸನ್ನಾಹ’ ತಾಳಮದ್ದಳೆ, ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ, ಬನಾರಿ ಅಂಗನವಾಡಿ ಪುಟಾಣಿಗಳಿಂದ ‘ಚಿನ್ನರ ಚಿಲಿಪಿಲಿ’ ಜರಗಿತು. ರಾತ್ರಿ ನೃತ್ಯ ಗುರುಗಳಾದ ಸರೋಜಿನಿ ಬನಾರಿ ನಿರ್ದೇಶನದಲ್ಲಿ ಉದಯೋನ್ಮುಖ ಕಲಾವಿದರಿಂದ ‘ಶಕಟಾಸುರ ವಧೆ – ತರಣಿಸೇನ ಕಾಳಗ – ಗಿರಿಜಾ ಕಲ್ಯಾಣ’ ಯಕ್ಷಗಾನ ಬಯಲಾಟ ನೆರವೇರಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪಣಂಬೂರಿನಲ್ಲಿರುವ ಶ್ರೀ ನಂದನೇಶ್ವರ ದೇವಳದಲ್ಲಿ ಕೊಲ್ಲಂಗಾನ ಮೇಳದ ‘ಯಕ್ಷ ಪಂಚಕ’ ಉದ್ಘಾಟನೆ
    Next Article ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.