Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆಯ ಹಯಗೀವದಲ್ಲಿ ಶ್ವೇತಯಾನದ  ‘ಶ್ವೇತ ಸಂಜೆ-13’ ಕಾರ್ಯಕ್ರಮ
    Yakshagana

    ತೆಕ್ಕಟ್ಟೆಯ ಹಯಗೀವದಲ್ಲಿ ಶ್ವೇತಯಾನದ  ‘ಶ್ವೇತ ಸಂಜೆ-13’ ಕಾರ್ಯಕ್ರಮ

    April 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗೀವ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಆಯೋಜಿಸಿದ ಯಶಸ್ವಿ ಕಲಾವೃಂದದ ಬೆಳ್ಳಿ ಹಬ್ಬದ ಪ್ರಯುಕ್ತ  ಶ್ವೇತಯಾನ ಶ್ವೇತ ಸಂಜೆ-13 ಕಾರ್ಯಕ್ರಮವು ದಿನಾಂಕ 31-03-2024 ರಂದು ನಡೆಯಿತು.
    ಕಾರ್ಯಕ್ರಮಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗಾನದ  ಚಿಂತಕ ವಿಮರ್ಶಕರಾದ  ಹೆಚ್. ಸುಜಯೀಂದ್ರ ಹಂದೆ “ಕಲಾ ಮಾದ್ಯಮಗಳಿಗೆ ಭಾಷೆ, ದೇಶ ಹಾಗೂ ಧರ್ಮಗಳ ಎಲ್ಲೆಯನ್ನು ಮೀರಿ ಜಗದ ಜನರ ಮನಸ್ಸುಗಳನ್ನು ಬೆಸೆಯುವ ವಿಶಿಷ್ಟ ಗುಣವಿದೆ. ಅದರಲ್ಲಿಯೂ ಯಕ್ಷಗಾನ ತನ್ನ ಅನನ್ಯತೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಯಕ್ಷಗಾನದ ನೇಪಥ್ಯ ಸಹಾಯಕರನ್ನೂ ಒಳಗೊಂಡು ಸರ್ವ ಕಲಾವಿದರ ಸಂಘಟಕರ ಪರಿಶ್ರಮ ಸಾರ್ಥಕವಾಗಬೇಕಾದರೆ ರಾಜ್ಯ ಕಲೆಯಾಗಿ ಮಾನ್ಯತೆ ಪಡೆಯಬೇಕು.” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ತೆಕ್ಕಟ್ಟೆ ಅವರನ್ನು ಸನ್ಮಾನಿಸಲಾಯಿತು.
    ಯಕ್ಷಾಂಗಣ ಟ್ರಸ್ಟಿನ ಸಂಚಾಲಕ ಸುದರ್ಶನ ಉರಾಳ, ಯಶಸ್ವಿ ಕಲಾವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ, ಕಾರ್ಯದರ್ಶಿ ವೆಂಕಟೇಶ ವೈದ್ಯ, ಬೆಳ್ಳಿಹಬ್ಬ ಸಮಿತಿಯ ಉಪಾಧ್ಯಕ್ಷ ಗಣಪತಿ ಶ್ರೀಯಾನ್, ಪ್ರಧಾನ ಕಾರ್ಯದರ್ಶಿ ಹೆರಿಯ ಮಾಸ್ಟರ್ ಉಪಸ್ಥಿತರಿದ್ದರು.
    ಸಭಾಕಾರ್ಯಕ್ರಮದ ಬಳಿಕ ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಸುದೀಪ ಉರಾಳ, ದಿನೇಶ್ ಕನ್ನಾರ್, ಸ್ಪೂರ್ತಿ ಭಟ್, ಸತೀಶ್ ಹಾಲಾಡಿ, ರಾಜೇಶ್ ಬೈಕಾಡಿ, ರಾಘವೇಂದ್ರ ತುಂಗ, ಪ್ರಶಾಂತ್ ಆಚಾರ್, ರಾಜು ಪೂಜಾರಿ ಇನ್ನಿತರರನ್ನು ಒಳಗೊಂಡ “ಕೃಷ್ಣಲೀಲೆ” ಯಕ್ಷಗಾನ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕವಿ ಕುಮಾರ ವ್ಯಾಸ ಜಯಂತಿ ಆಚರಣೆ 
    Next Article ಕಾಸರಗೋಡಿನ ಕರಂದಕ್ಕಾಡಿನಲ್ಲಿ ವಾರ್ಷಿಕೋತ್ಸವ ಮತ್ತು ‘ರಂಗಚಿನ್ನಾರಿ ಪ್ರಶಸ್ತಿ’ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.