Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಖಿದ್ಮಾ ಫೌಂಡೇಶನಿಂದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ
    Awards

    ಖಿದ್ಮಾ ಫೌಂಡೇಶನಿಂದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ

    January 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ‘ಖಿದ್ಮಾ ಕಾವ್ಯಾಮೃತ’ ಕಾರ್ಯಕ್ರಮವು ದಿನಾಂಕ 07-01-2024ರ ಭಾನುವಾರದಂದು ಬೆಂಗಳೂರಿನ ಜಯನಗರದ ವಿಜಯ ಕಾಲೇಜಿನ ಹಸಿರು ಭವನದಲ್ಲಿ ನಡೆಯಿತು.

    ಶ್ರೀ ಯೂಸಫ್ ಹೆಚ್.ಬಿ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ವಿಜಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಿ.ಆರ್. ಸುಧಾ ಉದ್ಘಾಟಿಸಿದರು. ಶ್ರೀಮತಿ ಅಶ್ವಿನಿ ಎಸ್. ಅಂಗಡಿ ಕವಿಗೋಷ್ಠಿಯ ಅಧ್ಯಕ್ಷತೆ ಮತ್ತು ಡಾ. ಬಿ.ಎನ್ ಸುರೇಶ್ ಬಾಬು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಕವಿಗಳು ಸ್ವರಚಿತ ಕವನವನ್ನು ವಾಚಿಸಿದರು. ಕರ್ನಾಟಕ ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತರಷ್ಟು ಸಾಧಕರಿಗೆ ‘ಖಿದ್ಮಾ ಸೇವಾರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ವಿಜಯ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ಎಲ್.ಕೆ. ಶ್ರೀವತ್ಸ, ಖಿದ್ಮಾ ಫೌಂಡೇಶನ್ನಿನ ಅಧ್ಯಕ್ಷ ಹಾಶಿಂ ಬನ್ನೂರು, ಶ್ರೀಮತಿ ಕಮಲಾಕ್ಷಿ ಸುರೇಶ್ ಕೌಜಲಗಿ, ಶ್ರೀ ಹುಮಾಯೂನ್, ಡಾ. ಆರ್.ಎಸ್ ರವೀಂದ್ರ, ಶ್ರೀ ಕೆ. ಶ್ರೀಧರ್ (ಕೆ.ಸಿರಿ), ಡಾ.ಎಮ್. ಎಮ್. ಪೀರಜಾದೆ, ಶ್ರೀ ಉಮೇಶ್ ಸಿ.ಎನ್, ಡಾ. ಗಣೇಶ್ ಗಂಗೊಳ್ಳಿ, ಶ್ರೀ ವಿನಯ್ ಖಾನ್, ಡಾ. ಜುಬೇದಾ ಎಂ. ಬದಾಮಿ, ಡಾ. ಜ್ಯೋತಿ ಶ್ರೀನಿವಾಸ್, ಶ್ರೀ ಸಿನಾನ್ ಇದ್ದಬೆಟ್ಟು, ಶ್ರೀಮತಿ ರಾಧಾಮಣಿ ಎಂ. ಕೋಲಾರ, ಉದಯ್ ಕಿರಣ್ ಬಿ., ಕಿರಣ್ ಕೆ., ಸಂತೋಷ್ ಕುಮಾರ್ ಹಾಗೂ ಪೂಜಾ ಸಿ.ಐ. ಉಪಸ್ಥಿತರಿದ್ದರು.

    ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಸ್ವಾಗತಿಸಿ, ಶ್ರೀಮತಿ ರಶ್ಮಿತಾ ಸುರೇಶ್ ಜೋಗಿಬೆಟ್ಟು ನಿರೂಪಿಸಿ ಕಾರ್ಯಕ್ರಮದ ಆಯೋಜಕ ಹಾಗೂ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪತ್ರಿಕಾ ಭವನದಲ್ಲಿ ಕೃತಿಗಳ ಲೋಕಾರ್ಪಣೆ
    Next Article ರಾಮಕ್ಷತ್ರಿಯ ಸಮಾಜದ ಸಾಹಿತಿಗಳ ಕವಿ, ಕವಯತ್ರಿಯರ ಕವಿತಾ ಸಮಾಹಾರಕ್ಕೆ ಕವಿತೆಗಳ ಆಹ್ವಾನ | ಕೊನೆ ದಿನಾಂಕ ಫೆಬ್ರವರಿ 1
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.