Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ‘ಕಿಶೋರ ಪ್ರತಿಭೋತ್ಸವ 2023’
    Bharathanatya

    ಉಡುಪಿಯಲ್ಲಿ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ‘ಕಿಶೋರ ಪ್ರತಿಭೋತ್ಸವ 2023’

    September 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತು ಮಂಗಳೂರು ಇದರ ಈ ಆರ್ಥಿಕ ವರುಷದ ಐದನೇ ಕಾರ್ಯಕ್ರಮ ಕಿಶೋರ ಪ್ರತಿಭೋತ್ಸವ 2023. ಕಾರ್ಯಕ್ರಮವು  ದಿನಾಂಕ 10-09-2023ರ ಆದಿತ್ಯವಾರದಂದು ಸಂಜೆ ಉಡುಪಿಯ ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಿತು.

    ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಳದ ಧರ್ಮದರ್ಶಿಗಳಾಗಿರುವ ಡಾ.ನಿ.ಬಿ.ವಿಜಯಬಲ್ಲಾಳ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, “ದೇವಸ್ಥಾನಗಳಲ್ಲಿ ಲಲಿತ ಕಲೆಗಳಿಗೆ ಯಾವತ್ತೂ ಅವಕಾಶ ಪ್ರೋತ್ಸಾಹ ನಮ್ಮ ತಂದೆಯ ಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ. ಇನ್ನೂ ಮುಂದೆಯೂ ಇಂತಹ ಮಕ್ಕಳ ಕಾರ್ಯಕ್ರಮಕ್ಕೆ ಈ ವೇದಿಕೆ ಸದಾ ಇದೆ.” ಎಂದು ಪರಿಷತ್ತಿನ ಮುಂದಿನ ಕಾರ್ಯಕ್ರಮದ ಬಗ್ಗೆ ಪ್ರೋತ್ಸಾಹದ ನುಡಿಯ ಮುಖಾಂತರ ಶುಭ ಹಾರೈಸಿದರು. ಹದಿನಾರು ಕಿಶೋರ ಪ್ರತಿಭೆಗಳಿಗೆ ಮೆಚ್ಚು ಪತ್ರವನ್ನು ಕೊಟ್ಟು ಗೌರವಿಸಿ, ಪರಿಷತ್ತಿನ ಮಾರ್ಗದರ್ಶಕರಾದ ವಿದ್ವಾನ್ ಪಿ. ಕಮಲಾಕ್ಷ ಆಚಾರ್ ಮಾತನಾಡಿದರು. ಪರಿಷತ್ತಿನ ಉಪಾಧ್ಯಕ್ಷರಾದ ವಿದ್ವಾನ್ ಚಂದ್ರಶೇಖರ ನಾವಡ, ಶ್ರೀಮತಿ ರಾಜಶ್ರೀ,  ಪರಿಷತ್ತಿನ ಕೋಶಾಧಿಕಾರಿಗಳಾದ ವಿದ್ವಾನ್ ಸುರೇಶ್ ಅತ್ತಾವರ್,  ಸದಸ್ಯರಾದ ರಾಮಕೃಷ್ಣ ಕೊಡಂಚ ಮತ್ತು ಪರಿಷತ್ತಿನ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.  ಉಡುಪಿಯ  16 ನೃತ್ಯ ಗುರುಗಳ ಶಿಷ್ಯೆಯರು   ಕಿಶೋರ ಪ್ರತಿಭೆಗಳು ನೃತ್ಯಪ್ರದರ್ಶನ ನೀಡಿದರು. ವಿದುಷಿ ಲಕ್ಷ್ಮೀ ಗುರುರಾಜ್ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಭಾಸ್ಕರ ಬಾರ್ಯರಿಗೆ ಯಕ್ಷ ಭಾರತಿ ಪ್ರಶಸ್ತಿ ಪ್ರದಾನ
    Next Article ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆ-2023
    roovari

    Add Comment Cancel Reply


    Related Posts

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    ಮಂಗಳೂರಿನ ಪುರಭವನದಲ್ಲಿ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ | ಮೇ 04

    May 1, 2025

    ಸುಳ್ಯದ ಕನಕ ಕಲಾ ಗ್ರಾಮದಲ್ಲಿ ಯಶಸ್ವಿಯಾಗಿ ನಡೆದ ವಿಶ್ವ ನೃತ್ಯ ದಿನ ಆಚರಣೆ

    May 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications