Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಅಳವಡಿಕೆ ಕ.ಸಾ.ಪ.ದಿಂದ ಜಿಲ್ಲಾಧಿಕಾರಿಗೆ ಅಭಿನಂದನೆ
    Kannada

    ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಅಳವಡಿಕೆ ಕ.ಸಾ.ಪ.ದಿಂದ ಜಿಲ್ಲಾಧಿಕಾರಿಗೆ ಅಭಿನಂದನೆ

    June 1, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 27-05-2024ರಂದು ನಡೆಯಿತು. ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಪ್ರಮುಖ ಸ್ಥಾನದಲ್ಲಿರಬೇಕು ಮತ್ತು ಶೇಕಡ 60ರಷ್ಟು ಭಾಗ ಕನ್ನಡದಲ್ಲಿ ಇರಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರಕ್ಕೂ ಅದನ್ನು ಕೊಡಗು ಜಿಲ್ಲೆಯಲ್ಲಿ ಅಳವಡಿಸಲು ಆದೇಶಿಸಿರುವ ಜಿಲ್ಲಾಧಿಕಾರಿ ವೆಂಕಟರಾಜಾರವರನ್ನು ಅಭಿನಂದಿಸಿ ಪತ್ರ ಬರೆಯುವಂತೆ ಈ ಸಭೆಯಲ್ಲಿ ತೀರ್ಮಾನಿಸಲಾಯಿತು.

    ಪರಿಷತ್ತಿನ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು. ಚುನಾವಣೆ ಮತ್ತು ಶಾಲೆಗಳಿಗೆ ರಜದ ಕಾರಣ ಉಳಿದು ಹೋಗಿರುವ ದತ್ತಿ ಕಾರ್ಯಕ್ರಮವನ್ನು ಮುಂದಿನ ತಿಂಗಳು 15ರ ಒಳಗಾಗಿ ಮಾಡಬೇಕು. ಅಲ್ಲದೇ 2024-25ರ ನೂತನ ದತ್ತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕಿದೆ. ಎಲ್ಲಾ ಜಿಲ್ಲಾ ತಾಲೂಕು ಮತ್ತು ಹೋಬಳಿ ಸಮಿತಿಗಳು ಜವಾಬ್ದಾರಿ ತೆಗೆದುಕೊಂಡು ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಬೇಕು ಎಂದು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ವತಿಯಿಂದ ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆ ತಾಲೂಕು ಮತ್ತು ಹೋಬಳಿ ಘಟಕಗಳ ಕಾರ್ಯಕಾರಿ ಸಮಿತಿಯ ಸದಸ್ಯರುಗಳ ಭಾವಚಿತ್ರ ಮತ್ತು ಮಾಹಿತಿ ಇರುವ ಪುಸ್ತಕವನ್ನು ಬಿಡುಗಡೆ ಮಾಡುವ ಯೋಜನೆ ಇದ್ದು, ಕೂಡಲೇ ಅದಕ್ಕೆ ಬೇಕಾದ ಭಾವಚಿತ್ರ ಅರ್ಜಿ ನೀಡಬೇಕೆಂದು ಕೋರಿದರು.

    ಜಿಲ್ಲಾಧ್ಯಕ್ಷರಿಗೆ ಆರೋಗ್ಯದ ಸಮಸ್ಯೆಯಿಂದ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳಲು ಸಾಧ್ಯವಿಲ್ಲದ ಸಂದರ್ಭದಲ್ಲಿ ಜಿಲ್ಲಾ ಸಮಿತಿ ತಾಲೂಕು ಸಮಿತಿ ಮತ್ತು ಹೋಬಳಿ ಸಮಿತಿಗಳು ಕಾರ್ಯಕ್ರಮಗಳನ್ನು ಉತ್ತಮವಾಗಿ ನಡೆಸಿಕೊಂಡು ಹೋಗಬೇಕಾಗಿರುವುದು ನಮ್ಮ ಜವಾಬ್ದಾರಿ. ಈಗಾಗಲೇ ಚೆಟ್ಟಿಮಾನಿಯಲ್ಲಿ ನಡೆದ ಮಡಿಕೇರಿ ತಾಲೂಕು ಗ್ರಾಮಸಿರಿ ಕಾರ್ಯಕ್ರಮ, ಕರಿಕೆಯಲ್ಲಿ ನಡೆದ ಗಡಿನಾಡ ಉತ್ಸವ, ಕುಶಾಲನಗರ ತಾಲೂಕು ಹೆಬ್ಬಾಲೆಯಲ್ಲಿ ನಡೆದ ಗ್ರಾಮಸಿರಿ ಉತ್ಸವ ಸೇರಿದಂತೆ ದತ್ತಿ ಕಾರ್ಯಕ್ರಮಗಳಲ್ಲಿ, ಸಂಸ್ಥಾಪನಾ ದಿನಾಚರಣೆ ಪಾಲ್ಗೊಂಡು ಕಾರ್ಯಕ್ರಮವನ್ನು ಸಮರ್ಪಕವಾಗಿ ನಡೆಸಿಕೊಟ್ಟಂತಹ ಎಲ್ಲಾ ಸದಸ್ಯರನ್ನು ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅಭಿನಂದಿಸಿದರು.

    ಮೃತ ಪಟ್ಟಿರುವ ಸಾಹಿತ್ಯ ಪರಿಷತ್ತಿನ ಸದಸ್ಯರ ಪಟ್ಟಿ ತಯಾರಿಸಿ ಈಗಾಗಲೇ ಎಲ್ಲಾ ತಾಲೂಕು ಸಮಿತಿಗಳಿಗೆ ಕಳುಹಿಸಲಾಗಿದೆ. ಅದನ್ನು ಪರಿಶೀಲಿಸಿ ದೃಢಪಡಿಸಿ ಕೇಂದ್ರಕ್ಕೆ ಕಳುಹಿಸಬೇಕಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಮೃತ ಸದಸ್ಯರ ಹೆಸರನ್ನು ತೆಗೆದುಹಾಕುವ ಕೆಲಸ ನಡೆಯಬೇಕಾಗಿದೆ ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯ ಸಮಿತಿ ಸದಸ್ಯರು ಮತ್ತು ಸಾಹಿತಿಗಳಾದ ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಇವರು ತಮ್ಮ ಅತ್ತೆ ಮಾವರವರ ಹೆಸರಿನಲ್ಲಿ ಐವತ್ತು ಸಾವಿರ ರೂಪಾಯಿಗಳ ದತ್ತಿ ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್, ಶ್ರೀಮತಿ ರೇವತಿ ರಮೇಶ್, ಜಿಲ್ಲಾ ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ಮಡಿಕೇರಿ ತಾಲೂಕು ಅಧ್ಯಕ್ಷೆ ಶ್ರೀಮತಿ ಕಡ್ಲೇರ ತುಳಸಿ ಮೋಹನ್, ಸಂಪಾಜೆ ಹೋಬಳಿ ಅಧ್ಯಕ್ಷ ಗೋಪಾಲ್ ಪೆರಾಜೆ, ಮುರ್ನಾಡು ಘಟಕದ ಅಧ್ಯಕ್ಷೆ ಶ್ರೀಮತಿ ಈರಮಂಡ ಹರಿಣಿ ವಿಜಯ್, ಕೋಶಾಧಿಕಾರಿ ಶ್ರೀಮತಿ ಕೆ.ಡಿ. ವಿಂದ್ಯಾ, ಹೆಬ್ಬಾಲೆ ಘಟಕದ ಅಧ್ಯಕ್ಷರಾದ ಎಂ.ಎನ್. ಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಫ್ಯಾನ್ಸಿ ಮುತ್ತಣ್ಣ, ಮ.ನಾ. ವೆಂಕಟನಾಯಕ್, ಶ್ರೀಮತಿ ಸಹನ ಕಾಂತಬೈಲು, ಶ್ರೀಮತಿ ಗೌರಮ್ಮ ಮಾದಮಯ್ಯ, ಶ್ರೀಮತಿ ಚೊಕ್ಕಾಡಿ ಪ್ರೇಮ ರಾಘವಯ್ಯ, ಶ್ರೀಮತಿ ಹೆಚ್‌.ಪಿ. ಜಯಮ್ಮ, ಹೆಚ್.ಎಸ್. ಪ್ರೇಮ್ ಕುಮಾರ್, ಕುಶಾಲನಗರ ತಾಲೂಕು ಕೋಶಾಧಿಕಾರಿ ಕೆ.ವಿ. ಉಮೇಶ್, ಮಡಿಕೇರಿ ತಾಲೂಕು ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ, ಮಡಿಕೇರಿ ತಾಲೂಕು ನಿಕಟ ಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್ ಮತ್ತು ಕಛೇರಿ ಸಿಬ್ಬಂದಿ ಶ್ರೀಮತಿ ರೇಣುಕಾ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ನಾರಾಯಣ ಕಂಗಿಲರ ‘ಉತ್ತರಾಪಥ’
    Next Article ಕೈಕಂಬದಲ್ಲಿ ‘ಮಕ್ಕಳ ಸಪ್ತದಿನ ಯಕ್ಷೋತ್ಸವ ವೈಭವ’ದ ಸಮಾರೋಪ ಸಮಾರಂಭ
    roovari

    Add Comment Cancel Reply


    Related Posts

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.