Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಕಥೆ, ಕವನ ಆನ್ಲೈನ್ ಸ್ಪರ್ಧೆ | ಕೊನಯೆ ದಿನಾಂಕ ಜುಲೈ 05

    June 20, 2026

    ದತ್ತಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

    June 20, 2026

    ಪುಸ್ತಕ ವಿಮರ್ಶೆ | ಸ್ತ್ರೀವಾದಿ ದೃಷ್ಟಿಯ ಏಕವ್ಯಕ್ತಿ ನಾಟಕ ‘ಶೇಕ್ಸ್‌ಪಿಯರನ ಶ್ರೀಮತಿ’

    June 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪ್ರಥಮ ಸಮ್ಮೇಳನ -2026 | ಜೂನ್ 23
    Book Release

    ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪ್ರಥಮ ಸಮ್ಮೇಳನ -2026 | ಜೂನ್ 23

    June 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ವೇದಿಕೆಯ ವತಿಯಿಂದ ‘ಕೊಡಗು ಜಿಲ್ಲಾ ಶರಣ ಸಾಹಿತ್ಯ ಪ್ರಥಮ ಸಮ್ಮೇಳನ -2026’ವನ್ನು ದಿನಾಂಕ 23 ಜೂನ್ 2026ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಬೆಳಗ್ಗೆ 8-30 ಗಂಟೆಗೆ ಧ್ವಜಾರೋಹಣ ಮತ್ತು 9-00 ಗಂಟೆಗೆ ಗಾಯತ್ರಿ ಕಲ್ಯಾಣ ಮಂಟಪದಿಂದ ಹೊರಡುವ ಭವ್ಯ ಮೆರವಣಿಗೆಯಲ್ಲಿ ಕಲಾತಂಡಗಳು, ಪೂರ್ಣಕುಂಭ ಹೊತ್ತ ಮಹಿಳೆಯರು, ಶರಣರ ವೇಷದ ವಿದ್ಯಾರ್ಥಿಗಳು, ಮಾಜಿ ಯೋಧರು ಭಾಗವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಡಾ. ಸಹನಾ ಹಾದಿಮನಿ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮೇಳನ ಉದ್ಘಾಟಿಸಲಿದ್ದು, ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ರಾಷ್ಟ್ರಾಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಇವರು ಅಧ್ಯಕ್ಷತೆ ವಹಿಸಲಿದ್ದು, ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷರಾದ ಸದಾಶಿವ ಸ್ವಾಮೀಜಿ ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮಾನ್ಯ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಸ್ಮರಣ ಸಂಚಿಕೆ ಹಾಗೂ ಕರ್ನಾಟಕ ಮಿನರಲ್ಸ್ ಕಾರ್ಪೊರೇಷನ್ (ಲಿ.) ಕಾರ್ಯ ನಿರ್ವಾಹಕ ನಿರ್ದೇಶಕರಾದ ವಿಶ್ವನಾಥ ಪಿ. ಹಿರೇಮಠ್ ಬಿಡುಗಡೆಗೊಳಿಸಲಿದ್ದು, ಮಾನ್ಯ ಶಾಸಕರಾದ ಡಾ. ಮಂತರಗೌಡ ಇವರು ಆಶಯ ನುಡಿಗಳನ್ನಾಡಲಿದ್ದಾರೆ.

    ಅನುಭವ ಮಂಟಪ ವಿಚಾರ ಗೋಷ್ಠಿ 1ರಲ್ಲಿ ‘ವಚನಗಳಲ್ಲಿ ಕಾಯಕ ಪ್ರಜ್ಞೆ’ ಎಂಬ ವಿಷಯದ ಬಗ್ಗೆ ವಿಶ್ರಾಂತ ಪ್ರಾಂಶುಪಾಲರಾದ ಡಾ. ಜೆ. ಸೋಮಣ್ಣ ಮತ್ತು ವಿಚಾರ ಗೋಷ್ಠಿ 2ರಲ್ಲಿ ‘ವಚನಕಾರರಿಂದ ಮುನ್ನೆಲೆಗೆ ಬಂದ ಗೌಪ್ಯ ವಚನಗಾರ್ತಿಯರು’ ಎಂಬ ವಿಷಯದ ಬಗ್ಗೆ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಎಸ್.ಎಂ. ರಜನಿ ಉಪನ್ಯಾಸ ನೀಡಲಿದ್ದಾರೆ. ಕುಮಾರ್ ಚಂದನ್ ಬೇಲೂರು ಮತ್ತು ತಂಡದವರಿಂದ ವಚನ ಗಾಯನ ನಡೆಯಲಿದೆ. ಸಂಜೆ 4-30 ಗಂಟೆಗೆ ಸಮಾರೋಪ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ನಡೆಯಲಿದೆ.

    baikady Book release Cultural dance felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸನ್ನಿಧಿಯಲ್ಲಿ ತುಳು ಯಕ್ಷಗಾನ ಸಂಭ್ರಮ
    Next Article ಪುಸ್ತಕ ವಿಮರ್ಶೆ | ಸ್ತ್ರೀವಾದಿ ದೃಷ್ಟಿಯ ಏಕವ್ಯಕ್ತಿ ನಾಟಕ ‘ಶೇಕ್ಸ್‌ಪಿಯರನ ಶ್ರೀಮತಿ’
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕಥೆ, ಕವನ ಆನ್ಲೈನ್ ಸ್ಪರ್ಧೆ | ಕೊನಯೆ ದಿನಾಂಕ ಜುಲೈ 05

    June 20, 2026

    ದತ್ತಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

    June 20, 2026

    ಪುಸ್ತಕ ವಿಮರ್ಶೆ | ಸ್ತ್ರೀವಾದಿ ದೃಷ್ಟಿಯ ಏಕವ್ಯಕ್ತಿ ನಾಟಕ ‘ಶೇಕ್ಸ್‌ಪಿಯರನ ಶ್ರೀಮತಿ’

    June 20, 2026

    ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸನ್ನಿಧಿಯಲ್ಲಿ ತುಳು ಯಕ್ಷಗಾನ ಸಂಭ್ರಮ

    June 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.