Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಗಣೇಶ ನೃತ್ಯಾಲಯದಲ್ಲಿ ‘ನೃತ್ಯೋಲ್ಲಾಸ’ ಮಾಸಿಕ ಭರತನಾಟ್ಯ ಕಾರ್ಯಕ್ರಮ

    August 26, 2025

    ಬಂಟ್ವಾಳದ ಏರ್ಯ ಬೀಡುವಿನಲ್ಲಿ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭ | ಆಗಸ್ಟ್ 28

    August 26, 2025

    ಕ.ಸಾ.ಪ.ದಿಂದ ಹಿರಿಯ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರಿಗೆ ಸನ್ಮಾನ | ಆಗಸ್ಟ್ 30

    August 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024’ ಪ್ರದಾನ
    Awards

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024’ ಪ್ರದಾನ

    February 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 9ನೇ ವಾರ್ಷಿಕೋತ್ಸವ ಹಾಗೂ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024’ ಪ್ರದಾನ ಸಮಾರಂಭವು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ದಿನಾಂಕ 28-01-2024ರಂದು ಜರಗಿತು. ಮಲ್ಟಿಟೆಕ್ ಅಟೋ ಪಾರ್ಟ್ಸ್ ದೊಡ್ಡಬಳ್ಳಾಪುರದ ಆಡಳಿತ ಪಾಲುದಾರ ನಾಗಭೂಷಣ ರಮೇಶ್ ಐತಾಳ್ ಉಪ್ಪಿನಕುದ್ರು ಅವರು ಅಕಾಡೆಮಿ ಕಟ್ಟಡದ ಆವರಣದಲ್ಲಿ ಸೋಲಾರ್ ದಾರಿದೀಪ ಹಾಗೂ ಏಣಿಯನ್ನು ಕೊಡುಗೆಯಾಗಿ ನೀಡಿ ಉದ್ಘಾಟಿಸಿದರು.

    ಮಾಹೆ ಮಣಿಪಾಲದ ಮಾಜಿ ಡೆಪ್ಯುಟಿ ರಿಜಿಸ್ಟ್ರಾರ್ ಟಿ. ರಂಗ ಪೈ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಯಕ್ಷಗಾನ ಚೆಂಡೆ ಕಲಾವಿದ ಯಳ್‌ಜಿತ್ ಸದಾನಂದ ಪ್ರಭು ಇವರಿಗೆ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ 2024’ನ್ನು ಪ್ರದಾನ ಮಾಡಲಾಯಿತು.

    ಮುಖ್ಯ ಅತಿಥಿಗಳಾಗಿ ಸ್ಮಾರಕ ಆಸ್ಪತ್ರೆ ಉಡುಪಿಯ ವೈದ್ಯಕೀಯ ಸಲಹೆಗಾರರಾದ ಡಾ. ಬಿ.ವಿ. ಬಾಳಿಗಾ, ಮನೋರೋಗ ತಜ್ಞ ಡಾ. ಪಿ.ವಿ. ಭಂಡಾರಿ, ಲೆಕ್ಕ ಪರಿಶೋಧಕ ಶಿವಾನಂದ ಪೈ ಮಂಗಳೂರು ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು.

    ಯಕ್ಷಗಾನ ಮದ್ದಲೆ ಕಲಾವಿದ ಸುರೇಶ್ ಉಪ್ಪೂರು, ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಸೂತ್ರಧಾರಿ ಪ್ರಭಾಕರ್ ಆಚಾರ್, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ನೆಂಪು, ರಾಜ್ಯ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಪಟು ಪ್ರಾರ್ಥನಾ ಪೈ ಗಂಗೊಳ್ಳಿ ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ಸೋಲಾರ್ ಲೈಟ್ ಕೊಡುಗೆ ನೀಡಿದ ನಾಗಭೂಷಣ ರಮೇಶ್ ಐತಾಳ್‌ ಉಪ್ಪಿನಕುದ್ರು ಹಾಗೂ ಯಕ್ಷಗಾನ ಗಾನ ವೈಭವ ಪ್ರಾಯೋಜಕ ಶಿವಾನಂದ ಪೈ ಅವರನ್ನು ಅಕಾಡೆಮಿಯ ವತಿಯಿಂದ ಗೌರವಿಸಲಾಯಿತು.

    ‘ಯಕ್ಷಗಾನ ಗೊಂಬೆ ಚಿತ್ರ ಬಿಡಿಸಿ ಬಹುಮಾನ ಗೆಲ್ಲಿ’ ಆನ್‌ಲೈನ್ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಪ್ರಶಂಸಾ ಪತ್ರ ಹಾಗೂ ನಗದು ಬಹುಮಾನ, ಸ್ಥಳೀಯ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಅಕಾಡೆಮಿಯ ಅಧ್ಯಕ್ಷ ಭಾಸ್ಕ‌ರ್ ಕೊಗ್ಗ ಕಾಮತ್‌ರು ಸ್ವಾಗತಿಸಿ, ಪ್ರಸ್ತಾವನೆಗೈದರು. ನಾಗೇಶ್ ಶ್ಯಾನುಭಾಗ್ ಬಂಟ್ವಾಡಿ ಮತ್ತು ರಾಜೇಂದ್ರ ಪೈ ನಿರ್ವಹಿಸಿದರು.

    ಮಯ್ಯ ಯಕ್ಷ ಬಳಗ ಹಾಲಾಡಿ ಇವರಿಂದ ‘ತೆಂಕು – ಬಡಗು ಯಕ್ಷಗಾನ ಗಾನ ವೈಭವ’ ಪ್ರಸ್ತುತಿಯಡಿ ಬಡಗಿನ ಭಾಗವತದ್ವಯರಾದ ರಾಘವೇಂದ್ರ ಮಯ್ಯ ಹಾಲಾಡಿ, ಪ್ರಸನ್ನ ಭಟ್ ಬಾಳ್ಕಲ್, ಮದ್ದಲೆಯಲ್ಲಿ ಶಶಾಂಕ್ ಆಚಾರ್, ಚೆಂಡೆಯಲ್ಲಿ ಸುಜನ ಹಾಲಾಡಿ, ತೆಂಕಿನ ಭಾಗವತರಾಗಿ ಅಮೃತಾ ಅಡಿಗ ಮತ್ತು ಬಳಗದವರು ಭಾಗವಹಿಸಿದ್ದರು. ಬೇಳೂರು ವಿಷ್ಣುಮೂರ್ತಿ ನಾಯಕ್ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸ್ವರಾನಂದ ಪ್ರತಿಷ್ಠಾನದ ವತಿಯಿಂದ ‘ಹಿಂದೂಸ್ಥಾನಿ ಸಂಗೀತ ಬೈಠಕ್‌’
    Next Article 2023ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ ಪ್ರಕಟ.
    roovari

    Add Comment Cancel Reply


    Related Posts

    ಬಂಟ್ವಾಳದ ಏರ್ಯ ಬೀಡುವಿನಲ್ಲಿ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭ | ಆಗಸ್ಟ್ 28

    August 26, 2025

    ಸಾಧಕರಿಬ್ಬರು ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಪ್ರಶಸ್ತಿ’ಗೆ ಆಯ್ಕೆ

    August 26, 2025

    ‘ಭಾವ ಸ್ಮೃತಿ’ ಆತ್ಮಕಥನ ಕೃತಿಗೆ ಮೊಗೇರಿ ಸಮಷ್ಟಿ ಪುಸ್ತಕ ಪುರಸ್ಕಾರ

    August 25, 2025

    ಕಾಸರಗೋಡಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ -2025 ಪ್ರದಾನ | ಆಗಸ್ಟ್ 27

    August 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.