Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಂಬಾರಿನಲ್ಲಿ ಕುಣಿತ ಭಜನಾ ತರಬೇತಿ ಸಮಾರೋಪ ಸಮಾರಂಭ
    Dance

    ಕೊಂಬಾರಿನಲ್ಲಿ ಕುಣಿತ ಭಜನಾ ತರಬೇತಿ ಸಮಾರೋಪ ಸಮಾರಂಭ

    July 11, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಡಬ : ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಕಡಬ ತಾಲೂಕು ಮತ್ತು ಶ್ರೀ ಮಂಜುನಾಥೇಶ್ವರ ಮಹಿಳಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಜರಗಿದ ಕುಣಿತ ಭಜನಾ ತರಬೇತಿ ಶಿಬಿರದ ಸಮಾರೋಪ ಹಾಗೂ ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಕೊಂಬಾರು ಮಣಿಭಾಂಡ ಮಂಜುಶ್ರೀ ಭಜನಾ ಮಂದಿರದಲ್ಲಿ ದಿನಾಂಕ : 18-06-2023ರಂದು ಜರಗಿತು.

    ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಶ್ರೀ ರಾಮಚಂದ್ರ ಗೌಡ, “ದೇವರ ನಾಮ ಸಂಕೀರ್ತನೆಯಿಂದ ನಮಗೆ ಮಾನಸಿಕ ನೆಮ್ಮದಿ, ಭಗವಂತನ ಕೃಪಾಕಟಾಕ್ಷ ದೊರೆಯುತ್ತದೆ. ಪ್ರತಿ ಮನೆಗಳಲ್ಲಿಯೂ ನಾವು ದಿನಕ್ಕೆ ಒಂದು ಹೊತ್ತಿಗಾದರೂ ಮನೆ ಮಂದಿ ಎಲ್ಲರೂ ಸೇರಿ ಭಜನೆ ಹಾಡುವ ರೂಢಿಯನ್ನು ಬೆಳೆಸಿಕೊಳ್ಳಬೇಕು. ಆ ಮೂಲಕ ಮನೆ ಮಕ್ಕಳಿಗೂ ಭಜನೆಯ ಬಗ್ಗೆ ಆಸಕ್ತಿ ಮೂಡಿಸಬೇಕು” ಎಂದರು.

    ಆಹ್ವಾನಿತ ಭಜನಾ ತಂಡಗಳ ಕುಣಿತ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಡಬ ಆರಕ್ಷಕ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ, “ಭಜನೆ ಎನ್ನುವುದು ಮನೆ ಮತ್ತು ಮನಗಳನ್ನು ಒಗ್ಗೂಡಿಸುವ ಮಾಧ್ಯಮವಾಗಿದೆ” ಎಂದರು. ವಿಹಿಂಪ ಕಡಬ ನಗರದ ಅಧ್ಯಕ್ಷ ಸತ್ಯನಾರಾಯಣ ಹೆಗ್ಡೆ ನಡುಮಜಲು ಮಾತನಾಡಿದರು. ಕೊಂಬಾರು ಮಣಿಭಾಂಡ ಮಂಜುಶ್ರೀ ಭಜನಾ ಮಂಡಳಿ ಅಧ್ಯಕ್ಷ ಓಡಪ್ಪ ಗೌಡ ತೇರೆಬೀದಿ ಅಧ್ಯಕ್ಷತೆ ವಹಿಸಿದ್ದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಕಡಬ ತಾ.ಯೋ. ಮೇದಪ್ಪ ಗೌಡ ನಾವೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್‌ನ ಕಡಬ ತಾಲೂಕು ಅಧ್ಯಕ್ಷ ಸುಂದರ ಗೌಡ ಒಗ್ಗು ಬಿಳಿನೆಲೆ, ಪ್ರಸನ್ನಕುಮಾರ್ ಕೆ.ಎನ್. ಕುಮಾರಪುರ ಕಟ್ಟೆ, ಪರಮೇಶ್ವರ ಗೌಡ, ವಿಜಯಕುಮಾರ್ ನಡುತೋಟ ಮತ್ತು ವಿನೋದ್ ಕುಮಾರ್ ಉಪಸ್ಥಿತರಿದ್ದರು. ಭಜನಾ ತರಬೇತಿ ನೀಡಿದ ತರಬೇತುದಾರರನ್ನು ಗೌರವಿಸಲಾಯಿತು. ಪರಿಸರದ 8 ಭಜನಾ ತಂಡಗಳು ಕುಣಿತ ಭಜನೆಯಲ್ಲಿ ಭಾಗವಹಿಸಿದವು. ಸಂಧ್ಯಾ ಪೆರುಂದೋಡಿ ಸ್ವಾಗತಿಸಿ, ಚಿದಾನಂದ ಗೌಡ ದೇವುಪಾಲ್ ಪ್ರಸ್ತಾವನೆಗೈದರು. ಅಪೂರ್ವ ಚೇತನ್‌ ಕುಮಾರ್‌ ಪೆರುಂದೋಡಿ ನಿರೂಪಿಸಿ, ಮಮತಾ ಅಮ್ಚೂರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ‘ಎಂಪ್ಟಿ ಸ್ಪೇಸ್’ ನಲ್ಲಿ ‘ಹುತ್ತವ ಬಡಿದರೆ’ | ಜುಲೈ 16ರಂದು
    Next Article ಕಾಬೆಟ್ಟು ಶಾಲೆಯಲ್ಲಿ ಯಕ್ಷಗಾನ ತರಬೇತಿಗೆ ಚಾಲನೆ
    roovari

    Add Comment Cancel Reply


    Related Posts

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.