ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3’ ಶೀರ್ಷಿಕೆಯಡಿ ಕವಿಗೋಷ್ಠಿಯು ದಿನಾಂಕ 07 ಜೂನ್ 2025ರಂದು ಮಂಗಳೂರಿನ ಅಕಾಡೆಮಿಯ ಸಭಾಂಗಣದಲ್ಲಿ ನಡೆಯಲಿದೆ.
”ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಪ್ಯಾನಿ ಆಲ್ವಾರಿಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಾಹುಕಾರ್ ಕಿರಣ್ ಪೈ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಮತ್ತು ಕವಿ ನವೀನ್ ಕುಲಶೇಕರ್ ಇವರನ್ನು ಸಮ್ಮಾನಿಸಲಾಗುವುದು. ಕವಿ ಟೈಟಸ್ ನೊರೊನ್ಹಾ ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಡಾ. ಪ್ಲಾವಿಯಾ ಕ್ಯಾಸ್ತೆಲಿನೊ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಗೋಷ್ಠಿಯಲ್ಲಿ ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಗೋಡ್ವನ್ ಪಿಂಟೊ, ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ ಮೊದಲಾದವರು ತಮ್ಮ ಕವಿತೆಗಳನ್ನು ವಾಚಿಸುವರು.