Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ತುಳು ತಾಳಮದ್ದಳೆ
    Yakshagana

    ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ತುಳು ತಾಳಮದ್ದಳೆ

    October 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಣಿಯೂರು : ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 17-10-2023ರ ಮಂಗಳವಾರದಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಯಕ್ಷಗಾನ ತುಳು ತಾಳಮದ್ದಳೆ ಪಂದುಬೆಟ್ಟು ವೆಂಕಟರಾಯ ವಿರಚಿತ ‘ಕೋಟಿ – ಚೆನ್ನಯ’ ಪ್ರಸಂಗವು ಬಹಳ ಸೊಗಸಾಗಿ ನಡೆಯಿತು. ಭಾಗವತರಾಗಿ ಶ್ರೀ ಸೂರ್ಯನಾರಾಯಣ ಭಟ್ ಕಣಿಯೂರು, ಮದ್ದಳೆ ಮತ್ತು ಚೆಂಡೆವಾದನದಲ್ಲಿ ಶ್ರೀ ರಾಮಮೂರ್ತಿ ಕುದ್ರೆಕೋಡ್ಳು, ಟಿ.ಡಿ.ಗೋಪಾಲಕೃಷ್ಣ ಭಟ್ ಪುತ್ತೂರು, ರಾಮದಾಸ್ ಶೆಟ್ಟಿ ದೇವಸ್ಯ ಹಾಗೂ ಮಾ. ಅದ್ವೈತ್ ಕನ್ಯಾನ ಅವರು ಭಾಗವಹಿಸಿದ್ದರು.

    ಅರ್ಥಗಾರಿಕೆಯಲ್ಲಿ ಶ್ರೀಗಳಾದ – ಪೆರುಮಳ ಬಲ್ಲಾಳ – ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು, ಕೋಟಿ – ಕೊಳ್ತಿಗೆ ನಾರಾಯಣ ಗೌಡ, ಚೆನ್ನಯ- ದೀಕ್ಷಿತ್ ಕಣಿಯೂರು, ರಾಮ ಜೋಯಿಸ/ಕೇಮರ ಬಲ್ಲಾಳ- ರಾಜಗೋಪಾಲ್ ಕನ್ಯಾನ, ಕಿನ್ನಿದಾರು- ಶ್ರೀಮತಿ ರೇಣುಕಾ ಕಣಿಯೂರು, ಚಂದುಗಿಡಿ- ಶಂಕರ್ ಸಾರಡ್ಕ, ದೇವಣ್ಣ ಬಲ್ಲಾಳ- ಜಯರಾಂ ಭಟ್ ದೇವಸ್ಯ ಅವರು ಸಹಕರಿಸಿದರು. ಶ್ರೀ ಕೊಳ್ತಿಗೆಯವರ ಕೋಟಿಯ ಅರ್ಥವು ಜನರನ್ನು ಮಂತ್ರಮುಗ್ಧರನ್ನಾಗಿಸಿತು.

    ಇದೇ ಸಂದರ್ಭದಲ್ಲಿ ಸುಮಾರು 60 ವರುಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಸಲ್ಲಿಸುತ್ತಿರುವ ಹಿರಿಯ ಕಲಾವಿದರಾದ ಶ್ರೀಯುತ ಕೋಳ್ತಿಗೆ ನಾರಾಯಣ ಗೌಡರನ್ನು ಪರಮ ಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ‘ತುಳು ಯಕ್ಷರಂಗೊದ ಬೀರೆ’ ಎನ್ನುವ ಬಿರುದು ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಚಂದ್ರಶೇಖರ ಕಣಿಯೂರು, ಕಣಿಪುರ ಯಕ್ಷಗಾನ ಮಾಸ ಪತ್ರಿಕೆಯ ಸಂಪಾದಕರಾದ ಶ್ರೀ ಎಂ. ನಾರಾಯಣ ಚಂಬಲ್ತಿಮಾರ್, ಸಂಚಾಲಕರಾದ ರಾಜಗೋಪಾಲ್ ಕನ್ಯಾನ, ಭಾಗವತ ಶ್ರೀ ಸೂರ್ಯನಾರಾಯಣ ಭಟ್ ಕಣಿಯೂರು, ದೀಕ್ಷಿತ್ ಕಣಿಯೂರು ಹಾಗೂ ನಾಗರಾಜ್ ಕಣಿಯೂರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಶ್ರೀ ಎಂ.ನಾ.ಚಂಬಲ್ತಿಮಾರ್ ವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಗೋವಿಂದದಾಸ ಕಾಲೇಜಿನಲ್ಲಿ “ಕಾರಂತರ ಪುಸ್ತಕ ಪ್ರಪಂಚ” ಪುಸ್ತಕ ಪ್ರದರ್ಶನ
    Next Article ಮೂಡುಬಿದಿರೆಯ ಶ್ರೀ ಜೈನ ಮಠ ಭಟ್ಟಾರಕ ಸಭಾಭವನದಲ್ಲಿ “ಶರಸೇತು ಬಂಧ” ತಾಳಮದ್ದಳೆ
    roovari

    Add Comment Cancel Reply


    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.