Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ‘ಅರಿವು’ ಯೋಜನೆಗೆ ಚಾಲನೆ

    May 12, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ತುಳು ತಾಳಮದ್ದಳೆ
    Yakshagana

    ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ತುಳು ತಾಳಮದ್ದಳೆ

    October 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಣಿಯೂರು : ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 17-10-2023ರ ಮಂಗಳವಾರದಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಯಕ್ಷಗಾನ ತುಳು ತಾಳಮದ್ದಳೆ ಪಂದುಬೆಟ್ಟು ವೆಂಕಟರಾಯ ವಿರಚಿತ ‘ಕೋಟಿ – ಚೆನ್ನಯ’ ಪ್ರಸಂಗವು ಬಹಳ ಸೊಗಸಾಗಿ ನಡೆಯಿತು. ಭಾಗವತರಾಗಿ ಶ್ರೀ ಸೂರ್ಯನಾರಾಯಣ ಭಟ್ ಕಣಿಯೂರು, ಮದ್ದಳೆ ಮತ್ತು ಚೆಂಡೆವಾದನದಲ್ಲಿ ಶ್ರೀ ರಾಮಮೂರ್ತಿ ಕುದ್ರೆಕೋಡ್ಳು, ಟಿ.ಡಿ.ಗೋಪಾಲಕೃಷ್ಣ ಭಟ್ ಪುತ್ತೂರು, ರಾಮದಾಸ್ ಶೆಟ್ಟಿ ದೇವಸ್ಯ ಹಾಗೂ ಮಾ. ಅದ್ವೈತ್ ಕನ್ಯಾನ ಅವರು ಭಾಗವಹಿಸಿದ್ದರು.

    ಅರ್ಥಗಾರಿಕೆಯಲ್ಲಿ ಶ್ರೀಗಳಾದ – ಪೆರುಮಳ ಬಲ್ಲಾಳ – ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು, ಕೋಟಿ – ಕೊಳ್ತಿಗೆ ನಾರಾಯಣ ಗೌಡ, ಚೆನ್ನಯ- ದೀಕ್ಷಿತ್ ಕಣಿಯೂರು, ರಾಮ ಜೋಯಿಸ/ಕೇಮರ ಬಲ್ಲಾಳ- ರಾಜಗೋಪಾಲ್ ಕನ್ಯಾನ, ಕಿನ್ನಿದಾರು- ಶ್ರೀಮತಿ ರೇಣುಕಾ ಕಣಿಯೂರು, ಚಂದುಗಿಡಿ- ಶಂಕರ್ ಸಾರಡ್ಕ, ದೇವಣ್ಣ ಬಲ್ಲಾಳ- ಜಯರಾಂ ಭಟ್ ದೇವಸ್ಯ ಅವರು ಸಹಕರಿಸಿದರು. ಶ್ರೀ ಕೊಳ್ತಿಗೆಯವರ ಕೋಟಿಯ ಅರ್ಥವು ಜನರನ್ನು ಮಂತ್ರಮುಗ್ಧರನ್ನಾಗಿಸಿತು.

    ಇದೇ ಸಂದರ್ಭದಲ್ಲಿ ಸುಮಾರು 60 ವರುಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಸಲ್ಲಿಸುತ್ತಿರುವ ಹಿರಿಯ ಕಲಾವಿದರಾದ ಶ್ರೀಯುತ ಕೋಳ್ತಿಗೆ ನಾರಾಯಣ ಗೌಡರನ್ನು ಪರಮ ಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ‘ತುಳು ಯಕ್ಷರಂಗೊದ ಬೀರೆ’ ಎನ್ನುವ ಬಿರುದು ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಚಂದ್ರಶೇಖರ ಕಣಿಯೂರು, ಕಣಿಪುರ ಯಕ್ಷಗಾನ ಮಾಸ ಪತ್ರಿಕೆಯ ಸಂಪಾದಕರಾದ ಶ್ರೀ ಎಂ. ನಾರಾಯಣ ಚಂಬಲ್ತಿಮಾರ್, ಸಂಚಾಲಕರಾದ ರಾಜಗೋಪಾಲ್ ಕನ್ಯಾನ, ಭಾಗವತ ಶ್ರೀ ಸೂರ್ಯನಾರಾಯಣ ಭಟ್ ಕಣಿಯೂರು, ದೀಕ್ಷಿತ್ ಕಣಿಯೂರು ಹಾಗೂ ನಾಗರಾಜ್ ಕಣಿಯೂರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಶ್ರೀ ಎಂ.ನಾ.ಚಂಬಲ್ತಿಮಾರ್ ವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಗೋವಿಂದದಾಸ ಕಾಲೇಜಿನಲ್ಲಿ “ಕಾರಂತರ ಪುಸ್ತಕ ಪ್ರಪಂಚ” ಪುಸ್ತಕ ಪ್ರದರ್ಶನ
    Next Article ಮೂಡುಬಿದಿರೆಯ ಶ್ರೀ ಜೈನ ಮಠ ಭಟ್ಟಾರಕ ಸಭಾಭವನದಲ್ಲಿ “ಶರಸೇತು ಬಂಧ” ತಾಳಮದ್ದಳೆ
    roovari

    Add Comment Cancel Reply


    Related Posts

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.